ರಸ್ತೆ ಸಮರ್ಪಕವಿಲ್ಲ; ಕುಸಿದ ಆವರಣ ಗೋಡೆ ನಿರ್ಮಾಣವಾಗಿಲ್ಲ


Team Udayavani, Nov 14, 2018, 12:02 PM IST

14-november-5.gif

ಬೆಳ್ತಂಗಡಿ : ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ವ್ಯವಸ್ಥೆಗಳು ಉತ್ತಮವಾಗಿದ್ದರೂ ಅಲ್ಲಿನ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತುರ್ತು ವಾಹನಗಳೇ ರಸ್ತೆಯಲ್ಲಿ ಚಲಿಸುವುದರಿಂದ ರಸ್ತೆ ಅಭಿವೃದ್ಧಿ ಪಡಿಸಬೇಕು ಎಂಬ ಬೇಡಿಕೆ ಜೋರಾಗಿಯೇ ಕೇಳಿಬರುತ್ತಿದೆ. ಜತೆಗೆ ಆಸ್ಪತ್ರೆಯ ಆವರಣ ಗೋಡೆ ಕುಸಿದು 4 ತಿಂಗಳೇ ಕಳೆದರೂ ಇನ್ನೂ ದುರಸ್ತಿಯಾಗಿಲ್ಲ ಎಂಬ ಆರೋಪವಿದೆ.

ಬೆಳ್ತಂಗಡಿ ಮುಖ್ಯ ರಸ್ತೆಯಿಂದ ಸುಮಾರು 100 ಮೀ. ದೂರದಲ್ಲಿ ಸರಕಾರಿ ಆಸ್ಪತ್ರೆ ಇದೆ. ಅಲ್ಲಿಗೆ ಪ.ಪಂ.ನ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ 100 ಮೀ. ರಸ್ತೆಯೇ ಸಂಪೂರ್ಣ ಹದಗೆಟ್ಟಿದೆ. ರಸ್ತೆಯಲ್ಲಿ ಡಾಮಾರಿಗಿಂತಲೂ ಹೊಂಡಗಳ ಜತೆಗೆ ಜಲ್ಲಿ ಕಲ್ಲುಗಳೇ ತುಂಬಿ ಹೋಗಿವೆ. ಹೀಗಾಗಿ ಆಸ್ಪತ್ರೆಗೆ ತೆರಳುವವರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳಿವೆ ರಸ್ತೆಯು ಮೊದಲೇ ಹದಗೆಟ್ಟಿದ್ದು, ಕಳೆದ ಮಳೆಗಾಲದಲ್ಲಿ ಇನ್ನೂ ಹೆಚ್ಚಿನ ಹಾನಿಯಾಗಿದೆ. ಆದರೆ ಮಳೆ ಹೋಗಿ ತಿಂಗಳುಗಳೇ ಕಳೆದರೂ ಇನ್ನೂ ದುರಸ್ತಿ ಕಾರ್ಯವಾಗಿಲ್ಲ. ಆಸ್ಪತ್ರೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಾಮಾನ್ಯವಾಗಿ ಹೆಚ್ಚು ಗುಣಮಟ್ಟದಿಂದ ಕೂಡಿರಬೇಕಾಗುತ್ತದೆ. ಅಲ್ಲಿಗೆ ದಿನದ 24 ಗಂಟೆಗಳೂ ತುರ್ತು ವಾಹನಗಳು ರೋಗಿಗಳನ್ನು ಕರೆದುಕೊಂಡು ಆಗಮಿಸುತ್ತಿರುತ್ತವೆ. ಹೀಗಾಗಿ ರಸ್ತೆ ದುರಸ್ತಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

23 ಲಕ್ಷ ರೂ. ಪ್ರಸ್ತಾವನೆ
ಮಳೆಗೆ ಆಸ್ಪತ್ರೆಯ ಆವರಣ ಗೋಡೆ ಕುಸಿದಿರುವುದರಿಂದ ಗೋಡೆ ನಿರ್ಮಾಣ ಸಹಿತ ಇತರ ಕಾಮಗಾರಿಗಳಿಗೆ ಒಟ್ಟು23 ಕೋ.ರೂ. ಕ್ರೀಯಾಯೋಜನೆ ಸಿದ್ಧಪಡಿಸಿ, ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಕಳುಹಿಸಿಕೊಡಲಾಗಿದೆ. ಕಳೆದ ಜುಲೈನಲ್ಲೇ ಪ್ರಸ್ತಾವನೆ ಹೋಗಿದ್ದು, ಪ್ರಾಕೃತಿಕ ವಿಕೋಪ ಪರಿಹಾರದಡಿ ಅನುದಾನ ಸಿಗುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಆವರಣ ಗೋಡೆ ನಿರ್ಮಿಸದೆ ಅನುದಾನಕ್ಕಾಗಿ ಕಾಯುತ್ತಿದೆ.

ಮೇಲ್ದರ್ಜೆಯ ಅನುದಾನವಿಲ್ಲ
ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿ 4 ವರ್ಷಗಳೇ ಕಳೆದರೂ ಇನ್ನೂ ಅದರ ಅನುದಾನ ಬರುವುದಕ್ಕೆ ಆರಂಭಗೊಂಡಿಲ್ಲ. ಪ್ರಸ್ತುತ ಅನುದಾನಗಳೆಲ್ಲವೂ ಜಿ.ಪಂ.ನಿಂದಲೇ ಬರುತ್ತವೆ. 100 ಹಾಸಿಗೆಗಳ ಆಸ್ಪತ್ರೆಯ ಅನುದಾನಗಳು ನೇರವಾಗಿ ರಾಜ್ಯ ಸರಕಾರದಿಂದಲೇ ಬರುವುದರಿಂದ ಆಸ್ಪತ್ರೆಯ ಅಭಿವೃದ್ಧಿ ವೇಗವನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ.

ಖಾಸಗಿ ವಾಹನ ಪಾರ್ಕಿಂಗ್‌
ಆಸ್ಪತ್ರೆಯ ರಸ್ತೆಯು ಹದಗೆಟ್ಟಿರುವುದು ಒಂದೆಡೆಯಾದರೆ, ಸ್ಥಳೀಯ ಅಂಗಡಿ-ಮುಂಗಟ್ಟುಗಳಿಗೆ ಬಂದ ಗ್ರಾಹಕರು ರಸ್ತೆಗೆ ತಾಗಿಕೊಂಡೇ ತಮ್ಮ ವಾಹನಗಳನ್ನು ಪಾರ್ಕಿಂಗ್‌ ಮಾಡುತ್ತಿರುವುದರಿಂದ ಆಸ್ಪತ್ರೆಗೆ ತೆರಳುವ ವಾಹನಗಳಿಗೆ ತೊಂದರೆಯಾಗುತ್ತಿದೆ ಎಂಬ ಆರೋಪಗಳಿವೆ. ಸಾಮಾನ್ಯವಾಗಿ ಆ್ಯಂಬುಲೆನ್ಸ್‌ ಸಹಿತ ಇತರ ವಾಹನಗಳಲ್ಲಿ ತುರ್ತು ಚಿಕಿತ್ಸೆಗಾಗಿ ರೋಗಿಗಳನ್ನು ಆಸ್ಪತ್ರೆಗೆ ಕರೆತರುತ್ತಾರೆ. ಆದರೆ ಇಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡಿದ್ದರೆ, ರೋಗಿಗಳ ವಾಹನಕ್ಕೆ ತೆರಳುವುದಕ್ಕೆ ತೊಂದರೆಯಾಗುತ್ತದೆ. ಜತೆಗೆ ಮುಂದಿನ ಇನ್ನೊಂದು ವಾಹನ ಬಂದರೆ ಎರಡೂ ವಾಹನಗಳೂ ಅಲ್ಲೇ ನಿಲ್ಲಬೇಕಾದ ಸ್ಥಿತಿ ಇದೆ.

ಪ್ರಸ್ತಾವನೆ ಹೋಗಿದೆ
ಆವರಣ ಗೋಡೆ ಕಳೆದ ಮಳೆಗಾಲದಲ್ಲಿ ಕುಸಿದಿದ್ದು, ಅದರ ದುರಸ್ತಿಗಾಗಿ ಜುಲೈ ತಿಂಗಳಿನಲ್ಲೇ ಪ್ರಸ್ತಾವನೆ ಹೋಗಿದೆ. ಕ್ರೀಯಾ ಯೋಜನೆ ಸಿದ್ಧಪಡಿಸಿ ಜಿಲಾ, ತಾ| ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದ್ದು, ಅದನ್ನು ಜಿಲ್ಲಾಧಿಕಾರಿಗೆ ಕಳುಹಿಸಲಾಗಿದೆ. ಹದಗೆಟ್ಟಿರುವ ರಸ್ತೆ ಪ. ಪಂ. ವ್ಯಾಪ್ತಿಗೆ ಬರುತ್ತದೆ.
– ಡಾ| ಶಶಿಕಾಂತ್‌ ಡೋಂಗ್ರೆ 
ಪ್ರಭಾರ ಆಡಳಿತಾಧಿಕಾರಿ, ಸ. ಆಸ್ಪತ್ರೆ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.