ಮೊಗರ್ಪಣೆ ಸೇತುವೆ: ಮೇಲ್ಪದರ ಮತ್ತಷ್ಟು ಶಿಥಿಲ!


Team Udayavani, Nov 17, 2018, 11:37 AM IST

17-november-6.gif

ಸುಳ್ಯ : ಅಂತಾರಾಜ್ಯ ರಸ್ತೆಯ ಕಾಂತಮಂಗಲ ಸೇತುವೆ ದುರಸ್ತಿ ಆಗಿ ಪ್ರಯಾಣಿಕರು ನಿಟ್ಟುಸಿರುವ ಬಿಡುವ ಹೊತ್ತಲ್ಲೇ ಮಾಣಿ-ಮೈಸೂರು ಹೆದ್ದಾರಿಯ ಮೊಗರ್ಪಣೆ ಸೇತುವೆ ಮೇಲ್ಪದರ ಮತ್ತಷ್ಟು ಶಿಥಿಲಗೊಂಡು, ಆತಂಕಕ್ಕೆ ಕಾರಣವಾಗಿದೆ.

ಅಚ್ಚರಿಯ ಸಂಗತಿಯೆಂದರೆ, ಸೇತುವೆಯ ನಿರ್ವಹಣೆ ಹೊಣೆ ಹೊತ್ತಿರುವ ಕೆಆರ್‌ಡಿಸಿಎಲ್‌ಗೆ ಸಮಸ್ಯೆ ಗೊತ್ತಿದ್ದರೂ ಸ್ಪಂದಿಸಲು ಮೀನ- ಮೇಷ ಎಣಿಸುತ್ತಿದೆ. ಪ್ರತಿ ತಾ.ಪಂ. ಸಭೆಗೆ ಇದೇ ಸೇತುವೆ ದಾಟಿ ಬರುವ ಅಧಿಕಾರಿಗಳು, ಜನಪ್ರತಿನಿಧಿಗಳು ದುರಸ್ತಿ ಬಗ್ಗೆ ಆಸಕ್ತಿಯೇ ವಹಿಸದಿರುವುದು ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಿದೆ.

ಪ್ರಮುಖ ಸೇತುವೆ
ಮಾಣಿ-ಮೈಸೂರು ಹೆದ್ದಾರಿಯಲ್ಲಿ ಈ ಸೇತುವೆ ಇದ್ದು, ಸುಳ್ಯ ನ.ಪಂ. ವ್ಯಾಪ್ತಿಗೆ ಒಳಪಟ್ಟ ಪ್ರದೇಶದಲ್ಲಿದೆ. ಪಯಸ್ವಿನಿ ನದಿಗೆ ಜೋಡಣೆಗೊಳ್ಳುವ ಕಂದಡ್ಕ ಹೊಳೆಗೆ ಈ ಸೇತುವೆ ನಿರ್ಮಿಸಲಾಗಿದೆ. ಹೊಸ ಸೇತುವೆ ಕಾಮಗಾರಿ ಸಂದರ್ಭ ಗುಣಮಟ್ಟಕ್ಕೆ ಆಕ್ಷೇಪ ಕೇಳಿ ಬಂದಿತ್ತು. ಅನಂತರ ಹೇಗೋ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಿತ್ತು.

ಕೆಲ ಸಮಯಗಳ ಹಿಂದೆ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಹಸ್ತಾಂತರ ಆಗುವ ಹಂತದಲ್ಲಿದೆ. ಹೊಸ ಸೇತುವೆ ನಿರ್ಮಾಣದ ಆರಂಭದಲ್ಲಿ ಕಾಮಗಾರಿ ಬಗ್ಗೆ ಮೂಡಿದ ಅನುಮಾನ ಈಗಿನ ದುಃಸ್ಥಿತಿ ದೃಢೀಕರಿಸಿದೆ. ಸೇತುವೆ ಮೇಲ್ಪದರ ಕಳಚಿ, ತಳ ಭಾಗದತ್ತ ಮುಖ ಮಾಡುವ ಮೊದಲು ದುರಸ್ತಿಗೆ ಅವಕಾಶ ಇದ್ದರೂ ಕಾಮಗಾರಿ ಅನುಷ್ಠಾನದ ಬಗ್ಗೆ ಅನುಮಾನ ಮೂಡಿದೆ.

ಎರಡೇ ದಿನಗಳಲ್ಲಿ ಕಿತ್ತುಹೋದ ತೇಪೆ!
ಸೇತುವೆ ಅವ್ಯವಸ್ಥೆ ಬಗ್ಗೆ ಜು. 2ರಂದು ‘ಉದಯವಾಣಿ ಸುದಿನ’ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆ ಜು. 3ರಂದು ಮೇಲ್ಪದರ ಶಿಥಿಲ ಸ್ಥಳಕ್ಕೆ ಜಲ್ಲಿಮಿಶ್ರಿತ ಪರಿಕರ ತುಂಬಿಸಿ ತೇಪೆ ಕಾಮಗಾರಿ ಮಾಡಿತ್ತು.  ಅದು ಒಂದೇ ವಾರದಲ್ಲಿ ಕಿತ್ತು ಹೋಗಿ, ಅದರ ಗಟ್ಟಿತನ ಬಹಿರಂಗಗೊಂಡಿತ್ತು. ಅದಾದ ಬಳಿಕ ತೇಪೆ ಹಾಕುವ ಪ್ರಯತ್ನ ನಡೆಯಿತಾದರೂ ಅದು ನಿಲ್ಲಲಿಲ್ಲ. ವಿಪರೀತ ಮಳೆ ಕಾರಣ ಕಾಮಗಾರಿ ಸಾಧ್ಯವಾಗುತ್ತಿಲ್ಲ ಎಂಬ ಕಾರಣ ನೀಡಿ ಇಲಾಖೆ ದುರಸ್ತಿಯನ್ನು ಬೇಸಗೆ ಕಾಲಕ್ಕೆ ಮುಂದೂಡಿತ್ತು. ಈಗ ಮಳೆ ನಿಂತು ತಿಂಗಳೇ ಕಳೆದಿದೆ. ಆದರೆ ಕೆಆರ್‌ಡಿಸಿಎಲ್‌ಗೆ ಮಳೆ ನಿಂತಿಲ್ಲ. ಬೇಸಗೆಯ ದರ್ಶನವಾಗಿಲ್ಲ. ಪರಿಣಾಮ ಕಾಮಗಾರಿ ಆರಂಭಗೊಳ್ಳದೇ ಶಿಥಿಲವೇ ಹೆಚ್ಚಾಗುತ್ತಿದೆ.

ಸರಳು ಮೇಲೆದ್ದಿವೆ..!
ಸೇತುವೆ ಮೇಲ್ಭಾಗದಲ್ಲಿ 6 ಕಡೆಗಳಲ್ಲಿ ಮೇಲ್ಪದರ ಕಿತ್ತು ಹೋಗಿ, ಕಬ್ಬಿಣದ ಸರಳುಗಳು ಕಾಣುತ್ತಿವೆ. ದಿನಂಪ್ರತಿ ನೂರಾರು ವಾಹನಗಳು ಸಂಚರಿಸುವ ಕಾರಣ ಮೇಲ್ಪದರಕ್ಕೆ ಮತ್ತಷ್ಟು ಹಾನಿ ಉಂಟಾಗಿ, ಸಮಸ್ಯೆ ಬಿಗಡಾಯಿಸಿದೆ. ಸೇತುವೆ ಒಳ ಭಾಗದಲ್ಲಿರುವ ಎರಡು ಬದಿಗಳಲ್ಲಿನ ಫುಟ್‌ಪಾತ್‌ನಲ್ಲಿ ಸ್ಲಾಬ್‌ಗಳು ಮುರಿದು ಬಿದ್ದು ವರ್ಷಗಳೇ ಕಳೆದಿವೆ. ನಿರ್ವಹಣೆ ಕೊರತೆಯ ಕಾರಣದಿಂದ ಕೋಟ್ಯಂತರ ರೂ. ವೆಚ್ಚದ ಸೇತುವೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ.

ದುರಸ್ತಿಗೆ ಸೂಚನೆ
ಮೊಗರ್ಪಣೆ ಸೇತುವೆ ಮೇಲ್ಪದರ ಹಾನಿಗೊಂಡಿರುವ ಬಗ್ಗೆ ಗಮನಕ್ಕೆ ಬಂದಿದೆ. ಅದರ ದುರಸ್ತಿಗೆ ತತ್‌ಕ್ಷಣ ಎಂಜಿನಿಯರ್‌ ಗಳಿಗೆ ಸೂಚಿಸಲಾಗುವುದು.
-ಗಣೇಶ್‌, ಚೀಫ್‌ ಎಂಜಿನಿಯರ್‌,
ರಾ.ಹೆ. ಪ್ರಾಧಿಕಾರ, ಬೆಂಗಳೂರು

ಸಂಚಾರ ಕಷ್ಟ
ಶಿಥಿಲಗೊಂಡು ಹಲವು ತಿಂಗಳು ಕಳೆದರೂ ದುರಸ್ತಿ ಆಗಿಲ್ಲ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಕೊಡುವ ಅಗತ್ಯವಿಲ್ಲ. ಪ್ರತಿ ನಿತ್ಯ ಇದೇ ಸೇತುವೆ ದಾಟಿ ಅವೆರಲ್ಲರೂ ಸಂಚರಿಸುತ್ತಾರೆ. ಆದರೂ, ಸ್ಪಂದಿಸಿಲ್ಲ. ಮೇಲ್ಪದರ ಬಿರುಕು ಬಿಟ್ಟಿರುವ ಕಾರಣ ದ್ವಿಚಕ್ರ ವಾಹನ ಸಂಚಾರಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.
– ನಾಗೇಶ ಸುಳ್ಯ ವಾಹನ ಸವಾರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.