ಪೆನ್ನು ಹಿಡಿಯುವ ಕೈಯಲ್ಲಿ ತಕ್ಕಡಿ; ನೋಟ್‌ಬುಕ್‌ ಬದಲು ನೋಟು!


Team Udayavani, Nov 18, 2018, 12:26 PM IST

18-november-7.gif

ಉಪ್ಪಿನಂಗಡಿ: ಶಾಲಾ ಕಾಲೇಜುಗಳಲ್ಲಿ ಮೆಟ್ರಿಕ್‌ ಮೇಳವನ್ನು ಯೋಜಿಸುವುದರಿಂದ ಮೂಲಕ ವಿದ್ಯಾರ್ಥಿಗಳಲ್ಲಿ ವ್ಯಾವಹಾರಿಕ ಜ್ಞಾನವನ್ನು ಮೂಡಿಸಲು ಸಾಧ್ಯ. ವಿದ್ಯಾರ್ಥಿಗಳಿಂದಲೇ ವ್ಯವಹಾರ ನಡೆಸುವ, ವಿವಿಧ ಪ್ರದರ್ಶನಗಳನ್ನು ವಿದ್ಯಾರ್ಥಿಗಳೇ ಆಯೋಜಿಸುವ ಮೂಲಕ ಆರ್ಥಿಕ ಸಂಪನ್ಮೂಲವನ್ನು ವೃದ್ಧಿಸುವ ಕಲೆಯನ್ನು ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮವಾಗಿ ಪ್ರದರ್ಶಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಯೋಜಿಸಲ್ಪಟ್ಟ ಮೆಟ್ರಿಕ್‌ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದ್ಯಮಿ ಮುರಳೀಧರ ಕೆ. ಮಾತನಾಡಿ, ಮಕ್ಕಳಲ್ಲಿ ಜೀವನ ಪಾಠವನ್ನು ಕಲಿಸುವ ಕಾರ್ಯವನ್ನು ಹಮ್ಮಿಕೊಳ್ಳುವ ಮೂಲಕ ಯಶಸ್ವಿಯಾಗಿದೆ ಎಂದರು.

ಚೌಕಾಸಿಗೆ ಮಣಿಯಲಿಲ್ಲ
ಮೆಟ್ರಿಕ್‌ ಮೇಳದಲ್ಲಿ ತರಕಾರಿ ಮಾರಾಟ ಮಳಿಗೆಯನ್ನು ನಿರ್ವಹಿಸಿದ ವಿದ್ಯಾರ್ಥಿಗಳ ಪೈಕಿ ಸಿಯಾಬ್‌ ಎಂಬ ಪಿಯುಸಿ ವಿದ್ಯಾರ್ಥಿ ಚೌಕಾಸಿ ಮನೋಭಾವದ ಗ್ರಾಹಕರನ್ನು ನಿಭಾಯಿಸಿದ ಶೈಲಿ ಗಮನ ಸೆಳೆಯಿತು. ಹಾರಾರ್‌ ಶೋ ಎಂಬ ಹೆಸರಿನ ಭಯಾನಕ ಜಗತ್ತನ್ನು ಸೃಷ್ಟಿಸಿದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಯಿತು. ಅತೀ ಹೆಚ್ಚು ವೀಕ್ಷಕರು ನೆರೆದಿದ್ದು, ಸ್ಥಳದ ಅಭಾವ ಉಂಟಾಗಿತ್ತು. ಭಯ ಹಾಗೂ ಮನೋರಂಜನೆಯನ್ನು ಒದಗಿಸಲು ಸಫ‌ಲತೆ ಕಾಣುವುದರೊಂದಿಗೆ ನಮ್ಮ ಶ್ರಮ ಯಶಸ್ವಿಯಾಗಿದೆ ಎಂದು ತಂಡದ ಸದಸ್ಯ ವರುಣ್‌ ಹರಿಪ್ರಸಾದ್‌ ಸಂತಸ ವ್ಯಕ್ತಪಡಿಸಿದರು.

ಬಹು ಬೇಡಿಕೆಯ ಗಂಜಿ ಊಟ
ಮೇಳದಲ್ಲಿ ವಿದ್ಯಾರ್ಥಿಗಳೇ ನಿರ್ವಹಿಸಿದ ಹೊಟೇಲ್‌ ಉದ್ಯಮದಲ್ಲಿ ಬಗೆ ಬಗೆಯ ತಿಂಡಿಗಳು, ಚಹಾ ಮಾರಾಟವಾಗಿದ್ದು, ಮಧ್ಯಾಹ್ನದ ವೇಳೆ ಗಂಜಿ ಊಟ, ತೊಂಡೆಕಾಯಿ ಪಲ್ಯ, ಸಾಂಬಾರು, ಹುರುಳಿ ಚಟ್ನಿ, ಕಾಯಿಸಿದ ಮೆಣಸು, ಜೈನರ ಶೈಲಿಯ ಉಪ್ಪಿನಕಾಯಿ ನೀಡಲಾಗಿದ್ದು, ಬಹು ಬೇಡಿಕೆ ಪಡೆಯಿತು. ಹೊಟೇಲ್‌ ಕಾರ್ಮಿಕರಾಗಿ ಶ್ರಮಿಸಿದ ವಿದ್ಯಾರ್ಥಿಗಳ ಕಾರ್ಯಶೈಲಿಯು ಸ್ನೇಹಪರತೆ ಹಾಗೂ ವೃತ್ತಿಪರತೆ ಕಂಡು ಬಂದಿತ್ತು.

ಇಂದ್ರಪ್ರಸ್ಥ ವಿದ್ಯಾಲಯದ ಸಂಚಾಲಕ ಯು.ಎಸ್‌ .ಎ. ನಾಯಕ್‌, ಟ್ರಸ್ಟಿ ವಸಂತಿ ನಾಯಕ್‌, ಇಂದ್ರಪ್ರಸ್ಥ ಪಿ.ಯು. ಕಾಲೇಜಿನ ಪ್ರಾಂಶುಪಾಲ ರವೀಂದ್ರ ದರ್ಬೆ, ಪ್ರೌಢ ವಿಭಾಗದ ಪ್ರಾಂಶುಪಾಲೆ ಮಾಲತಿ, ಪ್ರಾಥಮಿಕ ವಿಭಾಗದ ಪ್ರಾಂಶುಪಾಲ ಜೋಸ್‌, ಉಪ್ಪಿನಂಗಡಿ ಸರಕಾರಿ ಪ್ರೌಢಶಾಲಾ ಶಿಕ್ಷಕ ಗುಡ್ಡಪ್ಪ ಬಲ್ಯ, ಚಲನಚಿತ್ರ ನಿರ್ಮಾಪಕ ಸಚಿನ್‌ ಎಸ್‌., ಉದ್ಯಮಿಗಳಾದ ಯು. ರಾಜೇಶ್‌ ಪೈ, ಬಿ. ಗಣೇಶ್‌ ಶೆಣೈ, ಸುಂದರ ಗೌಡ ಕೇಶವ ಗೌಡ ಬಜತ್ತೂರು ಡಾ| ಕೈಲಾರ್‌ ರಾಜ್‌ಗೋಪಾಲ್‌ ಭಟ್‌ ಮೊದಲಾದವರು ಉಪಸ್ಥಿತರಿದ್ದರು.

ವ್ಯಾಪಾರಿಗಳಾದ ವಿದ್ಯಾರ್ಥಿಗಳು
 ನಮ್ಮ ಮಳಿಗೆಗೆ ಬನ್ನಿ ಎನ್ನುತ್ತಿದ್ದ ವಿದ್ಯಾರ್ಥಿಗಳು ತಮ್ಮ ವ್ಯಾಪಾರ ಶೈಲಿಗೆ ಶಕ್ತಿ ತುಂಬಿದರು. ಎಳನೀರು, ಪುಂಡಿ ಗಸಿ, ಪಲಾವ್‌, ಅವಲಕ್ಕಿ, ತಂಪಾದ ಕಬ್ಬಿನ ಹಾಲು, ಸೌಂದರ್ಯವರ್ಧಕ, ಆಭರಣ, ಪಾತ್ರೆ ಪಗಡಿಗಳು, ತರಕಾರಿ, ತಿಂಡಿ ತಿನಸುಗಳು – ಹೀಗೆ ಬಹು ಬಗೆಯ ವಸ್ತುಗಳಿಗಾಗಿ ನಮ್ಮ ಮಳಿಗೆಗೆ ಬನ್ನಿ ಎಂದು ಕೈ ಬೀಸಿ ಕರೆಯುವ ಪುಟಾಣಿ ವ್ಯಾಪಾರಿಗಳು, ತ್ರಿಡಿ ಶೋ, ಯಕ್ಷಿಣಿ ವಿದ್ಯೆ, ಕಲಾ ಜಗತ್ತು ಕನಿಷ್ಠ ಬಂಡವಾಳದಲ್ಲಿ ಗರಿಷ್ಠ ಆದಾಯವನ್ನು ತಂದುಕೊಟ್ಟವು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.