ಹಾವಿನ ಕುರಿತ ಕತೆ, ಕಲ್ಪನೆ ವೈಚಾರಿಕ ಹಾದಿಯಲ್ಲಿ ಗ್ರಹಿಸಿ


Team Udayavani, Nov 18, 2018, 3:20 PM IST

18-november-13.gif

ನೆಹರೂನಗರ: ನಾಗರಿಕತೆಯ ವಿವಿಧ ಮಜಲುಗಳಲ್ಲಿ ಹಾವಿನಂತಹ ಜೀವಿ ಜನಾಂಗದ ಪ್ರತೀಕವಾಗಿ, ದೇವರ ರೂಪದಲ್ಲಿ ಪೂಜೆಗೆ ಅರ್ಹವಾಗಿದೆ. ಹಾವಿನ ಬಗ್ಗೆ ರೋಚಕ ಕತೆಗಳು, ಪುರಾಣಗಳು, ಕಲ್ಪನೆಗಳು, ಮೂಢನಂಬಿಕೆಗಳು ಪ್ರಪಂಚದೆಲ್ಲೆಡೆ ಕಾಣಸಿಗುತ್ತವೆ. ಅವುಗಳನ್ನು ನಾವು ವಿಜ್ಞಾನ ಮತ್ತು ವೈಚಾರಿಕತೆಯ ಹಾದಿಯಲ್ಲಿ ಗ್ರಹಿಸಬೇಕು ಎಂದು ಶೇಷವನ ಚಾರಿಟೆಬಲ್‌ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ| ರವೀಂದ್ರನಾಥ ಐತಾಳ್‌ ಹೇಳಿದರು.

ಕನಸುಗಳು 2018 ಕಾರ್ಯಕ್ರಮದ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಹಾವು-ನಾವು ಉಪನ್ಯಾಸ ಮತ್ತು ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಧುನಿಕ ಯುಗದಲ್ಲಿ ಹಾವುಗಳು ನಾಶ ಆಗುತ್ತಿರುವುದಕ್ಕೆ ಮನುಷ್ಯನೇ ಕಾರಣ. ಕಾಡು ಪೊದೆಗಳ ನಾಶ, ಹೊಲ ಗದ್ದೆಗಳಲ್ಲಿ ರಾಸಾಯನಿಕ ಸಿಂಪಡಣೆ ಯಿಂದ ಹಾವುಗಳು ಪ್ರಾಣ ಕಳೆದು ಕೊಳ್ಳುತ್ತಿವೆ. ನಿರುಪದ್ರವಿಗಳಾದ ಉರಗ ಗಳು ಮನುಷ್ಯನ ತಂಟೆಗೆ ತಾವಾಗಿ ಎಂದಿಗೂ ಹೋದದ್ದಿಲ್ಲ. ಜೀವ ಜಗತ್ತಿನ ಆಹಾರ ಸರಪಣಿ ಮತ್ತು ಪ್ರಾಕೃತಿಕ ಸಮತೋಲನವನ್ನು ಕಾಯ್ದುಕೊಳ್ಳಲು ಹಾವುಗಳನ್ನು ಉಳಿಸಿಕೊಳ್ಳಬೇಕಾದ ಹೊಣೆ ನಮ್ಮದಾಗಬೇಕು ಎಂದರು. ಪ್ರಾಂಶುಪಾಲ ಜೀವನ್‌ದಾಸ್‌ ಅತಿಥಿಗಳನ್ನು ಗೌರವಿಸಿದರು. ಉಪನ್ಯಾಸಕಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಜೀವಂತ ಹಾವುಗಳ ಪ್ರಾತ್ಯಕ್ಷಿಕೆ
ಹಾವಿನ ಹಲವು ಪ್ರಬೇಧಗಳು, ಅಂಗಾಂಗಗಳು, ಅವುಗಳ ಆಹಾರ ಕ್ರಮ, ಬದುಕಿನ ರೀತಿ-ನೀತಿಗಳು ಮತ್ತು ಹಾವು ಕಚ್ಚಿದರೆ ನಾವು ಮಾಡಬೇಕಾದ ಪ್ರಥಮ ಚಿಕಿತ್ಸೆಗಳ ಕುರಿತು ಡಾ| ರವೀಂದ್ರನಾಥ ಐತಾಳ್‌ ವಿವರಿಸಿದರು. ಕಟ್ಟಿನ ಹಾವು, ಹೆಬ್ಟಾವು, ನಾಗರಹಾವು, ಕಾಳಿಂಗ ಸರ್ಪ, ಹವಳದ ಹಾವು, ಕನ್ನಡಿ ಹಾವು, ಮಂಡಲ ಹಾವು, ಸಮುದ್ರ ಹಾವು ಇತ್ಯಾದಿ ಉರಗಗಳ ಕುರಿತು ಅವರು ಮಾಹಿತಿ ನೀಡಿದರು. ಜೀವಂತ ಹಾವುಗಳನ್ನು ಪ್ರದರ್ಶಿಸಿ ಪ್ರಾತ್ಯಕ್ಷಿಕೆ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.