ಮುಂಡಾಜೆ ಪ್ರೌಢಶಾಲೆ: ಕಾರ್ತಿಕ ದೀಪಾರಾಧನೆ ವಿಶೇಷ ಕಾರ್ಯಕ್ರಮ
Team Udayavani, Nov 20, 2018, 2:55 AM IST
ಬೆಳ್ತಂಗಡಿ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮುಂಡಾಜೆ ಪ್ರೌಢಶಾಲೆಯಲ್ಲಿ ಕಾರ್ತಿಕ ದೀಪಾರಾಧನೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ರಾವ್ ಕಲ್ಮಂಜ ಅವರು ಪ್ರಧಾನ ದೀಪ ಬೆಳಗಿಸಿ ಚಾಲನೆ ನೀಡಿದರು.
ಮುಖ್ಯಗುರು ಜಯಂತಿ ಮಾತಾಜಿ ಅವರು ದೇವರ ಮಂಟಪಕ್ಕೆ ದೀಪ ಬೆಳಗಿದರು. ವಿದ್ಯಾರ್ಥಿಗಳು ಶಾಲಾ ಆವರಣದ ದೀಪಗಳಿಗೆ ದೀಪದಿಂದ ದೀಪ ಹಚ್ಚಿ, ಪ್ರಾರ್ಥನೆಯನ್ನು ನೆರವೇರಿಸಿದರು. ಹಿರಿಯ ಶಿಕ್ಷಕ ಚಂದ್ರಶೇಖರ ಅವರು ದೀಪಾರಾಧನೆಯ ಮಹತ್ವದ ಕುರಿತು ಪ್ರಧಾನ ಭಾಷಣ ಮಾಡಿದರು. ವಿವೇಕಾನಂದ ವಿದ್ಯಾಸಂಸ್ಥೆಗಳ ಶಾಲಾ ಪರಿವೀಕ್ಷಣಾಧಿಕಾರಿ ರಘುರಾಜ್ ಉಬರಡ್ಕ ಅವರು ಶುಭಹಾರೈಸಿದರು. ಸಂಚಾಲಕ ಕೊರಗಪ್ಪ ನಾಯ್ಕ ಅವರು ಅಖಂಡ ಭಾರತದ ಕಲ್ಪನೆಯನ್ನು ಮುಂದಿಟ್ಟರು. ಪ್ರಸಾದ ನಿವೇದನೆಯ ಬಳಿಕ ಆರತಿಯನ್ನು ಬೆಳಗಲಾಯಿತು. ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಆನಂದ ಜಿ. ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು