ದುರಸ್ತಿಗೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿತ್ತು ಯುವಕನ ಮೃತದೇಹ!


Team Udayavani, Nov 20, 2018, 3:15 AM IST

nandakumar-19-11.jpg

ಉಪ್ಪಿನಂಗಡಿ: ನೆಕ್ಕಿಲಾಡಿಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇಂಡಿಕಾ ಕಾರಿನಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಫೆ. 12, 2017ರಂದು ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೊಲೆಯಾಗಿರಬಹುದು ಎಂದು ಶಂಕಿಸಿ, ವಿವಿಧ ಆಯಾಮಗಳಲ್ಲಿ ಪೊಲೀಸ್‌ ತನಿಖೆ ಮುಂದುವರಿದಿದೆ.

34ನೇ ನೆಕ್ಕಿಲಾಡಿಯಲ್ಲಿ ಹಾದು ಹೋಗುವ ರಾ.ಹೆ. 75ರ ಸನಿಹದಲ್ಲಿರುವ ಸದಾನಂದ ಅವರ ಮಾಲಕತ್ವದ ಗ್ಯಾರೇಜ್‌ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿತ್ತು. ಉಡುಪುಗಳ ಆಧಾರದಲ್ಲಿ ಮೃತದೇಹವು ಯುವಕನದ್ದಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಕೆಲವು ದಿನಗಳಿಂದ ವಾಸನೆ ಬರುತ್ತಿದ್ದರೂ ಮೊದಮೊದಲು ನಾಯಿ ಸತ್ತಿರಬಹುದು ಎಂದು ಭಾವಿಸಿ ಜನ ಸುಮ್ಮನಾಗಿದ್ದರು. ಆದರೆ, ಕಾರಿನಲ್ಲಿ ರಕ್ತ ಸೋರಿಕೆಯಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ ಮೇಲೆ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಕಾರಿನ ಚಾಲಕನ ಸೀಟಿನಲ್ಲಿ ಮಲಗಿದ ಸ್ಥಿತಿಯಲ್ಲಿ ಕೊಳೆತ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹದಲ್ಲಿ ಜೀನ್ಸ್‌ ಪ್ಯಾಂಟ್‌, ಉದ್ದ ತೋಳಿನ ಡಿಸೈನ್‌ ಅಂಗಿ, ಕಪ್ಪು ಬಣ್ಣದ ಶೂ ಕಂಡುಬಂದಿದ್ದವು. ಮೃತದೇಹವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿತ್ತು.

ಮಂಗಳೂರಿನ ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆಯ ಡಾ| ಮಹಾಬಲೇಶ್ವರ ಶೆಟ್ಟಿ ಹಾಗೂ ಡಾ| ಸೂರಜ್‌ ಶೆಟ್ಟಿ ಅವರ ನೇತೃತ್ವದ ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕಾಗಮಿಸಿ ಮೃತದೇಹದ ಪ್ರಾಥಮಿಕ ಪರಿಶೀಲನೆ ನಡೆಸಿದೆ. ಹೆಚ್ಚಿನ ಪರೀಕ್ಷೆಗಾಗಿ ಮೃತದೇಹವನ್ನು ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ಕಳುಹಿಸಲಾಗಿತ್ತು.

ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಭಾಸ್ಕರ ರೈ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಅನಿಲ್‌ ಎಸ್‌. ಕುಲಕರ್ಣಿ, ಉಪ್ಪಿನಂಗಡಿ ಎಸ್‌ಐ ರತನ್‌ ಹಾಗೂ ಪ್ರೊಬೇಷನರಿ ಎಸ್‌ಐ ಮಂಜುನಾಥ್‌ ಮತ್ತು ಸಿಬಂದಿ ಆಗಮಿಸಿ, ಪರಿಶೀಲನೆ ನಡೆಸಿದರು. ಘಟನೆಯ ಬಗ್ಗೆ ಗ್ಯಾರೇಜ್‌ ಮಾಲಕ ಸದಾನಂದ ಅವರು ನೀಡಿರುವ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಸಿಕ್ಕಿದ್ದು ಟಿಕೆಟ್‌ ಮಾತ್ರ!
ಮೃತ ವ್ಯಕ್ತಿಯ ಜೇಬಿನಲ್ಲಿ ಉಳ್ಳಾಲದಿಂದ ಪಾಣೆಮಂಗಳೂರು ಮೂಲಕ ಉಪ್ಪಿನಂಗಡಿಗೆ ಸರಕಾರಿ ಬಸ್ಸಿನಲ್ಲಿ ಸಂಚರಿಸಿದ ಟಿಕೆಟ್‌ಗಳು ಸಿಕ್ಕಿದೆ. ಗ್ಯಾರೇಜಿನ ಬಳಿ ದುರಸ್ತಿಗೆಂದು ಹಲವು ಸಮಯದಿಂದ ನಿಲ್ಲಿಸಿದ್ದ ಕಾರಿನಲ್ಲಿ ಈ ಮೃತದೇಹ ಪತ್ತೆಯಾಗಿತ್ತು. ಈ ಕಾರಿನಲ್ಲಿ ಆಗಾಗ ನಾಗರಹಾವೊಂದು ನುಸುಳಿ ವಿಶ್ರಾಂತಿ ಪಡೆಯುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ. ಹೀಗಾಗಿ, ಈ ವ್ಯಕ್ತಿ ಪಾನಮತ್ತನಾಗಿ ಬಂದು ಕಾರಿನಲ್ಲಿ ಮಲಗಿ ಮೃತಪಟ್ಟನೇ? ಆತ್ಮಹತ್ಯೆ ಮಾಡಿಕೊಂಡನೇ? ಹಾವು ಕಚ್ಚಿ ಸತ್ತನೇ ಅಥವಾ ಯಾರಾದರೂ ಕೊಲೆ ಮಾಡಿ ಈತನನ್ನು ಕಾರಿನಲ್ಲಿ ತಂದೆಸೆದು ಹೋಗಿದ್ದಾರೋ ಎಂಬ ಸ್ಥಳೀಯರ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಸಿಸಿ ಕೆಮರಾದಲ್ಲಿ ದಾಖಲು?
ಘಟನಾ ಸ್ಥಳದ ಸನಿಹದಲ್ಲಿ ಪೊಲೀಸ್‌ ಇಲಾಖೆ ಅಳವಡಿಸಿದ್ದ ಸಿಸಿ ಟಿವಿ ಕೆಮರಾ ಇತ್ತು. ಈ ವ್ಯಕ್ತಿ ಒಬ್ಬನೇ ಬಂದಿದ್ದನೇ? ಅಥವಾ ಯಾರಾದರೂ ಕೊಲೆ ಮಾಡಿ ಎಸೆದು ಹೋದರೆ? ಒಬ್ಬನದೇ ಕೃತ್ಯವೇ ಅಥವಾ ತಂಡವೊಂದು ಮಾಡಿತೇ? ಎನ್ನುವ ವಿಚಾರದಲ್ಲಿ ಪೊಲೀಸ್‌ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸಿಸಿ ಕೆಮರಾದಲ್ಲಿ ಈ ವ್ಯಕ್ತಿಯ ಚಹರೆಯನ್ನು ಪತ್ತೆಹಚ್ಚುವ ಪ್ರಯತ್ನವೂ ಕೈಗೂಡಿಲ್ಲ. ಹೀಗಾಗಿ, ಪ್ರಕರಣ ನಿಗೂಢವಾಗಿಯೇ ಉಳಿದಿದೆ.

ಪ್ರಯತ್ನ ನಡೆಸಿದ್ದೇವೆ
ಅಪರಿಚಿತ ಶವದ ಜಾಡು ಹಿಡಿದ ಪೊಲೀಸರು ಕಳೆದ ಒಂದು ವರ್ಷದಿಂದ ಪ್ರಯತ್ನ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಆದರೆ, ಈಗಾಗಲೇ ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳಿಗೆ ಹಾಗೂ ಹೊರ ಜಿಲ್ಲೆಗಳ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪತ್ತೆಹಚ್ಚುವ ಪ್ರಯತ್ನ ನಡೆಸುತ್ತಿದ್ದೇವೆ.
– ನಂದಕುಮಾರ್‌, ಪಿಎಸ್‌ಐ, ಉಪ್ಪಿನಂಗಡಿ

— ಎಂ.ಎಸ್‌. ಭಟ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.