ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಗೆ ಸಕಲ ಸಿದ್ಧತೆ  


Team Udayavani, Dec 10, 2018, 11:46 AM IST

10-december-6.gif

ಸುಬ್ರಹ್ಮಣ್ಯ: ಭಕ್ತರ ಆರಾಧ್ಯ ದೇವರು ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಡಿ. 12 ಮತ್ತು 13ರಂದು ನಡೆಯುವ ಚಂಪಾಷಷ್ಠಿ ಜಾತ್ರೆಗೆ ವಿಶೇಷ ರಂಗು ತುಂಬಲು ಸಕಲ ತಯಾರಿ ನಡೆದಿದೆ. ಕ್ಷೇತ್ರದ ಪರಿಸರವನ್ನು ಶುಚಿಗೊಳಿಸುವ ಕಾರ್ಯ ನಡೆಸಲಾಗಿದೆ. ದೇವಸ್ಥಾನ ಹಾಗೂ ಕ್ಷೇತ್ರದ ಕಟ್ಟಡಗಳಿಗೆ ಬಣ್ಣ ಬಳಿಯಲಾಗಿದೆ. ಎತ್ತ ನೋಡಿದರತ್ತ ಜಾತ್ರೆ ಸಂಭ್ರಮ ಕಣ್ತುಂಬಿಕೊಳ್ಳುತ್ತಿದೆ. ದೇವಸ್ಥಾನ, ನಗರದ ಕಟ್ಟಡಗಳು ಅಂಗಡಿ ಮುಂಗಟ್ಟುಗಳು ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿದೆ.

ಮಡೆಸ್ನಾನ ಪ್ರಾರಂಭ
ಕ್ಷೇತ್ರದಲ್ಲಿ ಬೀದಿ ಮಡೆಸ್ನಾನ ಸೇವೆ ಆರಂಭ ಗೊಂಡಿದೆ. ಕುಮಾರಧಾರಾ- ಕಾಶಿಕಟ್ಟೆ ತನಕ ರಸ್ತೆ ವಿಸ್ತರಣೆ ಕಾಮಗಾರಿ ನಡೆದಿದೆ. ಬೀದಿ ಮಡೆಸ್ನಾನ ನಡೆಸುವ ಭಕ್ತರಿಗೆ ಇದು ಅನುಕೂಲವಾಗಿದೆ. ಈ ಮಾರ್ಗದಲ್ಲಿ ಕುಮಾರಧಾರಾ, ಕುಲ್ಕುಂದ ತನಕ ವಿದ್ಯುದ್ದೀಪಗಳನ್ನು ಅಳವಡಿಸಲಾಗಿದೆ. ಎಚ್ಚರಿಕೆ ನಾಮಫಲಕವನ್ನೂ ರಸ್ತೆ ಬದಿ ಅಳವಡಿಸಲಾಗಿದೆ.

ಪಂಚಮಿ ದಿನ ಹಾಗೂ ಅವಭೃಥ ದಿನಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಭಕ್ತರಿಗೆ ಅನ್ನಪ್ರಸಾದ ನೀಡಲಾಗುತ್ತದೆ. ಭೋಜನಕ್ಕೆ ದೇಗುಲದ ಭೋಜನ ಶಾಲೆ, ಅಂಗಡಿಗುಡ್ಡೆಯಲ್ಲಿ ವಿಶಾಲ ಚಪ್ಪರ ವ್ಯವಸ್ಥೆ ಇರಲಿದೆ. ಸ್ವಯಂ ಸೇವಕರಿಗೆ, ಕರ್ತವ್ಯಕ್ಕೆ ಬರುವ ಸಿಬಂದಿಗೆ, ವಿದ್ಯಾರ್ಥಿಗಳಿಗೆ ಆದಿಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವಾರ್ಥಿ ಭೋಜನ ಶಾಲೆಯಲ್ಲಿ ಉಪಹಾರ ವ್ಯವಸ್ಥೆ ಇದೆ. ನೀರಿನ ವ್ಯವಸ್ಥೆ, ನೈರ್ಮಲ್ಯ ಕಾಪಾಡಿಕೊಳ್ಳಲು ಸೂಚಿಸಲಾಗಿದೆ. 

ಜಾತ್ರೆ ಸಮಯ ಒತ್ತಡ ನಿಯಂತ್ರಣಕ್ಕೆ ಪ್ರವೇಶ ಗೋಪುರ, ಹೊರಾಂಗಣ, ಆದಿ ಸುಬ್ರಹ್ಮಣ್ಯ ಭೋಜನಶಾಲೆ ಮೊದಲಾದ ಕಡೆಗಳಲ್ಲಿ ಸ್ವಯಂ ಸೇವಕರು ಕಾರ್ಯ ನಿರ್ವಹಿಸಲಿದ್ದಾರೆ. ಜಾತ್ರೆ ಸಂದರ್ಭ ನಿರಂತರ ವಿದ್ಯುತ್‌ ಸರಬರಾಜು, ಶ್ರೀ ದೇವರ ದರ್ಶನಕ್ಕೆ ಬರುವ ವಿಶೇಷ ಗಣ್ಯರಿಗೆ ದರ್ಶನ, ವಸತಿ ವ್ಯವಸ್ಥೆ ಮಾಡಲಾಗಿದೆ. ಹರಕೆ ಬಲಿವಾಡುಗಳನ್ನು ಜಮಾ ಉಗ್ರಾಣದಲ್ಲಿ ಸ್ವೀಕರಿಸಲು ಆಶ್ಲೇಷಾ ಬಲಿ ವಸತಿಗೃಹ ಮಾಹಿತಿ ವಿಭಾಗ, ದಾಸ್ತಾನು ಇರಿಸಲು ಪಕ್ಕದ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ
ಕಾಶಿಕಟ್ಟೆ, ಬಿಲದ್ವಾರ, ಜೂನಿಯರ್‌ ಕಾಲೇಜು, ಕುಮಾರಧಾರ, ವಾಸುಕಿ ಛತ್ರ ಮುಂಭಾಗ, ಆದಿ ಸುಬ್ರಹ್ಮಣ್ಯ ಹೊರಾಂಗಣದಲ್ಲಿ ಗಾಂಗೇಯ ಛತ್ರದ ಪಕ್ಕ, ರಕ್ತೇಶ್ವರಿ ಗುಡಿ ಪಕ್ಕ, ಇಂಡಿಯನ್‌ ಓವರ್‌ ಸೀಸ್‌ ಬ್ಯಾಂಕು, ಕೆಎಸ್‌ಆರ್‌ಟಿಸಿ ಬಿಸ್‌ ನಿಲುಗಡೆ, ಬಿಲದ್ವಾರ ಎದುರು, ಅರಣ್ಯ ಇಲಾಖೆ ಕಚೇರಿ ಬಳಿ, ಪಾರ್ಕಿಂಗ್‌ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಹೊಟೇಲುಗಳಲ್ಲಿ ಬಿಸಿ ನೀರು ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಪೊಲೀಸರಿಂದಲೂ ಸಕಲ ಸಿದ್ಧತೆ
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಸಿಬಂದಿ, ಗೃಹರಕ್ಷಕದಳ ಸಿಬಂದಿಯವರನ್ನು ನಿಯೋಜಿಸಲು ಕ್ರಮ ವಹಿಸಲಾಗಿದೆ. ದೇಗುಲದ ಒಳಾಂಗಣ, ಹೊರಾಂಗಣ, ಸ್ನಾನಘಟ್ಟ, ಭೋಜನ ಶಾಲೆ ಆದಿಸುಬ್ರಹ್ಮಣ್ಯ, ರಥಬೀದಿ, ಪಾರ್ಕಿಂಗ್‌ ಸ್ಥಳ ಮೊದಲಾದ ಕಡೆಗಳಲ್ಲಿ ಘರ್ಷಣೆ, ಕಳ್ಳತನ, ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ. ಹೆಚ್ಚುವರಿ ಗೃಹರಕ್ಷಕ ದಳ ಸಿಬಂದಿ ಸಹಕಾರ ಪಡೆಯಲಾಗಿದೆ. ಪಾರ್ಕಿಂಗ್‌ ಸ್ಥಳಗಳು, ರಥಬೀದಿ ಹಾಗೂ ಇತರ ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ, ಬ್ರಹ್ಮರಥ ಎಳೆಯುವ ವೇಳೆ ನೂಕುನುಗ್ಗಲು ನಿಯಂತ್ರಿಸಲು ರಥಬೀದಿಯ ಎರಡು ಬದಿ ಮಾರ್ಕಿಂಗ್‌, ಬ್ಯಾರಿಕೇಡ್‌ ಅಳವಡಿಕೆ, ಐಒಬಿ, ಜಂಕ್ಷನ್‌, ಕಾಶಿಕಟ್ಟೆ ಮೊದಲಾದ ಕಡೆಗಳಲ್ಲಿ ಎಲ್‌ಇಡಿ ಸ್ಕ್ರೀನ್‌ ಅಳವಡಿಸಲಾಗುತ್ತದೆ. 

ಸುವ್ಯವಸ್ಥಿತ ಪಾರ್ಕಿಂಗ್‌
ಪುತ್ತೂರು ಗುಂಡ್ಯ ಹಾಗೂ ಉಪ್ಪಿನಂಗಡಿ ಕಡೆಯಿಂದ ಬರುವ ಖಾಸಗಿ ವಾಹನಗಳಿಗೆ ಪದವಿಪೂರ್ವ ಕಾಲೇಜು, ಎಸ್‌ಎಸ್‌ಪಿಯು ಕಾಲೇಜು ಮೈದಾನ, ಬಸ್‌ಗಳಿಗೆ ಬಿಲದ್ವಾರ ಎದುರಿನ ಪಾರ್ಕಿಂಗ್‌ನಲ್ಲಿ ನಿಲುಗಡೆ. ಹರಕೆ ರಥೋತ್ಸವ, ಸೇವಾರ್ಥಿಗಳು, ವಿವಿಧ ಇಲಾಖೆ ವಾಹನಗಳಿಗೆ ವಿವಿಐಪಿಗಳ ವಾಹನಗಳಿಗೆ ಅರಣ್ಯ ಇಲಾಖೆ ಕಚೇರಿ ಹಿಂಭಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಸುಳ್ಯ ಕಡೆಯಿಂದ ಬರುವ ಸರಕಾರಿ ಹಾಗೂ ಖಾಸಗಿ ಬಸ್ಸುಗಳಿಗೆ ಸವಾರಿ ಮಂಟಪ ಬಳಿಯ ಪಾರ್ಕಿಂಗ್‌ ಸ್ಥಳ, ಇತರೆ ವಾಹನಗಳಿಗೆ ಕನ್ನಡಿ ಹೊಳೆ ಸೇತುವೆ ಬಳಿ ಪಾರ್ಕಿಂಗ್‌ಗೆ ವ್ಯವಸ್ಥೆಗೊಳಿಸಲಾಗಿದೆ. ದ್ವಿಚಕ್ರ ವಾಹನಗಳಿಗೆ ಪೊಲೀಸ್‌ ಗ್ರೌಂಡ್‌, ಲಘು ವಾಹನಗಳಿಗೆ ವಲ್ಲೀಶ ಸಭಾಭವನ ಪಕ್ಕದ ಖಾಲಿ ಸ್ಥಳ, ಹೆಲಿಪ್ಯಾಡ್‌ ಸ್ಥಳದಲ್ಲಿ ನಾಲ್ಕು ಚಕ್ರಗಳ ವಾಹನ ನಿಲುಗಡೆ. ಈ ಕಡೆಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಕೆಎಸ್‌ ಆರ್‌ಟಿಸಿ ಹಾಗೂ ಖಾಸಗಿ ಬಸ್ಸಿನವರು ಮಾರ್ಗ ಬದಿಯಲ್ಲಿ ಪ್ರಯಾಣಿಕರನ್ನು ಇಳಿಸುವುದು ಮತ್ತು ಹತ್ತಿಸುವುದಕ್ಕೆ ಅವಕಾಶವಿಲ್ಲ.

ವಿಶೇಷ ತಪಾಸಣ ತಂಡ
ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಹೆಚ್ಚುವರಿ ತಾತ್ಕಾಲಿಕ ಶೌಚಾಲಯ ನಿರ್ಮಾಣ, ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಚೌತಿ, ಪಂಚಮಿ, ಷಷ್ಠಿ ಈ ಮೂರು ದಿನ ಮದ್ಯ ನಿಷೇಧಿಸಿ ಮದ್ಯದಂಗಡಿ, ಬಾರ್‌ ಮುಚ್ಚುವುದು. ಮಾಂಸ ಮಾರಾಟ, ಪ್ಲಾಸ್ಟಿಕ್‌ ಬಳಕೆ, ತಂಬಾಕು ಪದಾರ್ಥಗಳ ನಿಷೇ ಧಿಸುವುದು. ಇದಕ್ಕಾಗಿಯೇ ವಿಶೇಷ ತಪಾಸಣ ತಂಡ ರಚಿಸಲಾಗಿದೆ. ಲಗೇಜ್‌ ಕೊಠಡಿ, ಧ್ವನಿವರ್ಧಕ, ಪಾರ್ಕಿಂಗ್‌, ಡ್ರೆಸ್ಸಿಂಗ್‌, ಬೆಳಕು, ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷಿಮೇಳ, ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಅಲ್ಲಲ್ಲಿ ಸಿಸಿ
ಕೆಮರಾ ಅಳವಡಿಕೆ ಕಾನೂನು ಸುವ್ಯವಸ್ಥೆ ಕುರಿತು ಹೆಚ್ಚಿನ ನಿಗಾ ಇಡಲಾಗಿದೆ. ಅಹಿತಕರ ನಡೆಯದಂತೆ ಹೆಚ್ಚುವರಿ ಸಿಬಂದಿ, ಗೃಹರಕ್ಷಕ ದಳ ಹಾಗೂ ಸಿಸಿ ಟಿವಿ ಕೆಮರಾ ಅಳವಡಿಸಲಾಗಿದೆ. ಸೋಮವಾರ ಸಂಜೆ ವೇಳೆಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಬಹತೇಕ ಕಾರ್ಯ ಪೂರ್ಣವಾಗುತ್ತದೆ.
-ಗೋಪಾಲ ಪಿಎಸ್‌ಐ,
ಸುಬ್ರಹ್ಮಣ್ಯ ಪೊಲೀಸ್‌ ಠಾಣೆ 

ವಿಶೇಷ ವರದಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.