ಸಂತೆ ವ್ಯಾಪಾರಕ್ಕೆ ತೆರೆದುಕೊಳ್ಳುತ್ತಿದೆ ಕುಕ್ಕೆ ಜಾತ್ರೆ


Team Udayavani, Dec 12, 2018, 10:33 AM IST

12-december-2.gif

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಧಾರ್ಮಿಕ ವೈಶಿಷ್ಟ್ಯ ಗಳಿಗಷ್ಟೆ ಸೀಮಿತವಾಗಿಲ್ಲ. ವ್ಯಾಪಾರ ವಹಿವಾಟು ಕೂಡ ಇಲ್ಲಿ ಜೋರಾಗಿಯೇ ನಡೆಯುತ್ತದೆ. ಜಾತ್ರೆಗಾಗಿ ಇಲ್ಲಿನ ಶಾಲಾ ಮೈದಾನದಲ್ಲಿ ವ್ಯಾಪಾರ ಮಳಿಗೆಗಳು ತೆರೆದುಕೊಂಡು ಸಹಸ್ರಾರು ಮಂದಿಯನ್ನು ಆಕರ್ಷಿಸುತ್ತಿವೆ.

ಡಿ. 6ರಂದು ಕ್ಷೇತ್ರದಲ್ಲಿ ನಡೆದ ಲಕ್ಷ ದೀಪೋತ್ಸವದ ಅನಂತರದಲ್ಲಿ ವ್ಯಾಪಾರ ಮಳಿಗೆಗಳು ಇಲ್ಲಿ ತೆರೆದಿವೆ. ಧರ್ಮಸ್ಥಳದ ಲಕ್ಷ ದೀಪೋತ್ಸವ ಮುಗಿದ ಬಳಿಕ ಅಲ್ಲಿಂದ ವ್ಯಾಪಾರಿಗಳು ಕುಕ್ಕೆಗೆ ಆಗಮಿಸಿದ್ದಾರೆ. ಇಲ್ಲಿಯೂ ವ್ಯಾಪಾರ ಆರಂಭಿಸುತ್ತಾರೆ. ಹಿಂದಿನಿಂದಲೂ ಇದು ಹೀಗೆಯೇ ನಡೆದು ಬಂದಿದೆ.

ಚಂಪಾ ಷಷ್ಠಿ ವೇಳೆ ತಾತ್ಕಾಲಿಕ ಅಂಗಡಿ ತೆರೆಯಲು ಇಲ್ಲಿನ ಶಾಲಾ ಮೈದಾನದಲ್ಲಿ ಪಂಚಾಯತ್‌ ಮತ್ತು ದೇವಸ್ಥಾನ ಸ್ಥಳ ಗುರುತಿಸಿ ಏಲಂ ಮೂಲಕ ಹಂಚಲಾಗಿದೆ. ಮಣಿ ಸರಕು, ಕಂಬಳಿ, ಗೃಹ ಬಳಕೆಯ ಸಾಮಗ್ರಿಗಳು ಹಾಗೂ ಪಾದರಕ್ಷೆಗಳ ವ್ಯಾಪಾರ ಶುರುವಾಗಿದೆ. ಚುರುಂಬುರಿ, ಜ್ಯೂಸ್‌, ಗೋಬಿ ಮಂಚೂರಿ, ಬೇಲ್‌ಪುರಿಯಂತಹ ಚಾಟ್ಸ್‌, ಕಬ್ಬಿನಹಾಲು, ಐಸ್‌ಕ್ರೀಂ ಇತ್ಯಾದಿ ಮಳಿಗೆಗಳು ವ್ಯಾಪಾರ ಆರಂಭಿಸಿವೆ. ರಸ್ತೆ ಬದಿಯಲ್ಲೂ ವ್ಯಾಪಾರ ಜೋರಾಗಿದೆ.

ಮನರಂಜನೆ ಸರಕು
ಕ್ಷೇತ್ರದಲ್ಲಿ 200ಕ್ಕೂ ಅಧಿಕ ಅಂಗಡಿ ಮಳಿಗೆಗಳು, ಮನರಂಜನ ವ್ಯವಸ್ಥೆಗಳು ತೆರೆದುಕೊಂಡಿವೆ. ಮಕ್ಕಳ ಮನರಂಜನೆಯ ಜಾಯಿಂಟ್‌ ವೀಲ್‌, ಪುಟಾಣಿ ರೈಲು, ಟೊರೆಂಟೊರೋ, ಚುಕುಬುಕ್‌ ರೈಲು, ಪ್ರಾಣಿಗಳ ಮೇಲೆ ಸವಾರಿ ಮೊದಲಾದ ವ್ಯವಸ್ಥೆಗಳು ಸಿದ್ಧಗೊಳ್ಳುತ್ತಿವೆ. ಮಕ್ಕಳ ಆಟಿಕೆಯ ಸಾಮಾನುಗಳಾದ ಪೀಪಿ, ಬಲೂನ್‌, ವಾಲಗ ಇತ್ಯಾದಿಗಳಿದ್ದರೆ, ವಾದ್ಯಗಳನ್ನು ನುಡಿಸುತ್ತ, ಶಂಖ ಊದಿ ಜಾಗಟೆ ಬಾರಿಸುತ್ತ ಹೊಟ್ಟೆಪಾಡಿಗೆ ದಾರಿ ಮಾಡಿಕೊಂಡವರೂ ಇದ್ದಾರೆ. ವ್ಯಾಪಾರಿಗಳು ಜನರನ್ನು ಕೂಗಿ ಕರೆದು ತಮ್ಮಲ್ಲಿರುವ ವಸ್ತುಗಳನ್ನು ಕೊಳ್ಳುವಂತೆ ಪ್ರೇರಣೆ ನೀಡುತ್ತಿದ್ದಾರೆ. ಇವೆಲ್ಲ ಸೇರಿ ಜಾತ್ರೆಯ ಸೊಬಗಿಗೆ ಮತ್ತಷ್ಟೂ ರಂಗು ತುಂಬುತ್ತಿವೆ. ಪಂಚಮಿ, ಷಷ್ಠಿ ಹಾಗೂ ಅವಭೃಥ ದಿನಗಳಲ್ಲಿ ಭರ್ಜರಿ ವ್ಯಾಪಾರ ನಡೆದು ಮುಂದಿನ ಕಿರು ಷಷ್ಠಿ ತನಕವೂ ವ್ಯಾಪಾರ ಇಲ್ಲಿ ಜೋರಾಗಿಯೇ ಇರುತ್ತವೆ. 

ದೀಪಾಲಂಕಾರ ಆಕರ್ಷಣೆ
ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಪ್ರಯುಕ್ತ ನಗರ ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡು ಶೋಭಿಸುತ್ತಿದೆ. ದೇವಸ್ಥಾನದ ಮಹಾದ್ವಾರ. ಒಳಾಂಗಣ, ಹೊರಾಂಗಣ ಮೊದಲಾದ ಕಡೆಗಳಲ್ಲಿ ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡು ಸಹಸ್ರಾರು ಮಂದಿಯನ್ನು ಆಕರ್ಷಿಸುತ್ತದೆ. ನಗರದ ಅಂಗಡಿಮುಂಗಟ್ಟುಗಳು ಕೂಡ ಅಲಂಕಾರಗೊಂಡಿವೆ.

ಅಜಗಜಾಂತರ
ಹತ್ತು ವರ್ಷದಿಂದ ವ್ಯಾಪಾರ ಮಾಡುತ್ತಿದ್ದೇನೆ. ಅಂದಿನ ಜಾತ್ರೆಗೂ ಇಂದಿಗೂ ಅಜಗಜಾಂತರವಿದೆ. ಹಿಂದಿನಷ್ಟು ವ್ಯಾಪಾರವೂ ಈಗಿಲ್ಲ. ಆಯ್ಕೆಗಳು ಜಾಸ್ತಿಯಾಗಿದ್ದರಿಂದ ವ್ಯಾಪಾರ ಕಡಿಮೆಯಾಗುತ್ತಿದೆ.
 - ಬಸವಮ್ಮ ಹುಣಸೂರು,
    ಮಣಿಸರಕಿನ ವ್ಯಾಪಾರಸ್ಥೆ  

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.