ಕುಕ್ಕೆ: ವೈಭವದ ಬ್ರಹ್ಮರಥೋತ್ಸವ; 362 ಭಕ್ತರಿಂದ ಎಡೆಸ್ನಾನ 


Team Udayavani, Dec 14, 2018, 9:35 AM IST

kukke-3.jpg

ಸುಬ್ರಹ್ಮಣ್ಯ: ಚಂಪಾ ಷಷ್ಠಿ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಬುಧವಾರ ರಾತ್ರಿ ಪಂಚಮಿ ರಥೋತ್ಸವ ಹಾಗೂ ಗುರುವಾರ ಮುಂಜಾನೆ ಬ್ರಹ್ಮರಥೋತ್ಸವ ವೈಭವದಿಂದ ನೆರವೇರಿತು. 400 ವರ್ಷಗಳ ಇತಿಹಾಸವಿರುವ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡರು.

ದೇಗುಲದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿ, ಮುಂಜಾನೆ 6.41ರ ವೃಶ್ಚಿಕ ಲಗ್ನದಲ್ಲಿ ರಥೋತ್ಸವ ಜರಗಿತು. 98 ಭಕ್ತರು ಈ ಬಾರಿಯ ಮಹಾರಥೋತ್ಸವ 
ಸೇವೆಯನ್ನು ನಡೆಸಿದರು.

ರಥೋತ್ಸವದ ಬಳಿಕ ಧನ, ಕನಕ, ಹೂವು, ಫಲವಸ್ತುಗಳನ್ನು ಅರ್ಚಕರು ರಥದಿಂದ ಭಕ್ತರತ್ತ ಚಿಮ್ಮಿದರು. ಭಕ್ತರು ರಥಕ್ಕೆ ಸಾಸಿವೆ, ನಾಣ್ಯ, ಏಲಕ್ಕಿ, ಕಾಳುಮೆಣಸು ಇತ್ಯಾದಿ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಗುರುವಾರ ರಾತ್ರಿ ಒಳಾಂಗಣದಲ್ಲಿ ಉತ್ಸವ ಮೂರ್ತಿಯ ಬಲಿ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ, ಕಾಶಿಕಟ್ಟೆ ಮಹಾಗಣಪತಿ ಸನ್ನಿಧಿಯಲ್ಲಿ ಪೂಜೆ ನೆರವೇರಿತು. ಪಂಚಮಿ ಮತ್ತು ಷಷ್ಠಿಯಂದು ದೇಗುಲದ ಅನ್ನಛತ್ರ ಹಾಗೂ ಅಂಗಡಿಗುಡ್ಡೆಯ ವಿಶಾಲವಾದ ಸುಸಜ್ಜಿತ ಸ್ಥಳದಲ್ಲಿ ಸಹಸ್ರಾರು ಮಂದಿ ಅನ್ನಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ನಡೆದ ಎಡೆಸ್ನಾನ ಸೇವೆಯಲ್ಲಿ 362 ಮಂದಿ ಹರಕೆ ಸೇವೆ ಸಲ್ಲಿಸಿದರು. ಕೊಳ್ಳೇಗಾಲ ಸುಬ್ಬ ಶೆಟ್ಟಿ ಸ್ಮರಣಾರ್ಥ ಅವರ ಸಹೋದರ ರಾಧಾಕೃಷ್ಣ ಅವರು 1 ಲಕ್ಷ ರೂ. ವೆಚ್ಚದಲ್ಲಿ ಸಿಹಿತಿಂಡಿ ನೀಡಿದರು.

ಗಣ್ಯರ ಉಪಸ್ಥಿತಿ
ರಥೋತ್ಸವದ ವೇಳೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಪ್ರಮೀಳಾ, ಹೈಕೋರ್ಟ್‌ ನ್ಯಾಯಾಧೀಶ ಸತ್ಯನಾರಾಯಣ, ಸುಳ್ಯ ನ್ಯಾಯಾಧೀಶ ಪುರುಷೋತ್ತಮ, ಪುತ್ತೂರು ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಹಣಾಧಿಕಾರಿ ಎಚ್‌.ಎಂ. ರವೀಂದ್ರ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್‌, ನೂತನ ಬ್ರಹ್ಮರಥ ದಾನಿ ಉದ್ಯಮಿ ಅಜಿತ್‌ ರೈ, ಎಂ.ಬಿ. ಸದಾಶಿವ ಉಪಸ್ಥಿತರಿದ್ದರು. ಪಂಚಮಿ ಮತ್ತು ಚೌತಿ ದಿನಗಳಲ್ಲಿ ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಸಹಿತ ಹಲವು ಗಣ್ಯರು ದೇಗುಲಕ್ಕೆ ಭೇಟಿಯಿತ್ತರು.

ಇಂದು ನೌಕಾವಿಹಾರ: ಶುಕ್ರವಾರ ಶ್ರೀ ಸುಬ್ರಹ್ಮಣ್ಯ ದೇವರ ಅವಭೃಥ ಉತ್ಸವ ಮತ್ತು ನೌಕಾ ವಿಹಾರ ಕುಮಾರಧಾರಾ ನದಿಯಲ್ಲಿ ನಡೆಯಲಿದೆ.

ಮುಂದಿನ ವರ್ಷ ಹೊಸ ರಥ
400 ವರ್ಷ ಹಳೆಯ ಬ್ರಹ್ಮರಥ ಶಿಥಿಲಗೊಂಡಿರುವ ಕಾರಣ ಹೊಸ ರಥ ನಿರ್ಮಾಣಕ್ಕೆ ಸಂಕಲ್ಪಿಸಲಾಗಿದ್ದು, ಮುಂದಿನ ವರ್ಷದ ಜಾತ್ರೆಗೂ ಮೊದಲು ಸಮರ್ಪಣೆಗೊಳ್ಳಲಿದೆ. ಶಿಥಿಲಗೊಂಡಿರುವ ಹಳೆಯ ರಥ ಇತಿಹಾಸದ ಪುಟಗಳನ್ನು ಸೇರಲಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.