ಕುಕ್ಕೆ: ವೈಭವದ ಬ್ರಹ್ಮರಥೋತ್ಸವ; 362 ಭಕ್ತರಿಂದ ಎಡೆಸ್ನಾನ 


Team Udayavani, Dec 14, 2018, 9:35 AM IST

kukke-3.jpg

ಸುಬ್ರಹ್ಮಣ್ಯ: ಚಂಪಾ ಷಷ್ಠಿ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಬುಧವಾರ ರಾತ್ರಿ ಪಂಚಮಿ ರಥೋತ್ಸವ ಹಾಗೂ ಗುರುವಾರ ಮುಂಜಾನೆ ಬ್ರಹ್ಮರಥೋತ್ಸವ ವೈಭವದಿಂದ ನೆರವೇರಿತು. 400 ವರ್ಷಗಳ ಇತಿಹಾಸವಿರುವ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡರು.

ದೇಗುಲದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿ, ಮುಂಜಾನೆ 6.41ರ ವೃಶ್ಚಿಕ ಲಗ್ನದಲ್ಲಿ ರಥೋತ್ಸವ ಜರಗಿತು. 98 ಭಕ್ತರು ಈ ಬಾರಿಯ ಮಹಾರಥೋತ್ಸವ 
ಸೇವೆಯನ್ನು ನಡೆಸಿದರು.

ರಥೋತ್ಸವದ ಬಳಿಕ ಧನ, ಕನಕ, ಹೂವು, ಫಲವಸ್ತುಗಳನ್ನು ಅರ್ಚಕರು ರಥದಿಂದ ಭಕ್ತರತ್ತ ಚಿಮ್ಮಿದರು. ಭಕ್ತರು ರಥಕ್ಕೆ ಸಾಸಿವೆ, ನಾಣ್ಯ, ಏಲಕ್ಕಿ, ಕಾಳುಮೆಣಸು ಇತ್ಯಾದಿ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಗುರುವಾರ ರಾತ್ರಿ ಒಳಾಂಗಣದಲ್ಲಿ ಉತ್ಸವ ಮೂರ್ತಿಯ ಬಲಿ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ, ಕಾಶಿಕಟ್ಟೆ ಮಹಾಗಣಪತಿ ಸನ್ನಿಧಿಯಲ್ಲಿ ಪೂಜೆ ನೆರವೇರಿತು. ಪಂಚಮಿ ಮತ್ತು ಷಷ್ಠಿಯಂದು ದೇಗುಲದ ಅನ್ನಛತ್ರ ಹಾಗೂ ಅಂಗಡಿಗುಡ್ಡೆಯ ವಿಶಾಲವಾದ ಸುಸಜ್ಜಿತ ಸ್ಥಳದಲ್ಲಿ ಸಹಸ್ರಾರು ಮಂದಿ ಅನ್ನಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ನಡೆದ ಎಡೆಸ್ನಾನ ಸೇವೆಯಲ್ಲಿ 362 ಮಂದಿ ಹರಕೆ ಸೇವೆ ಸಲ್ಲಿಸಿದರು. ಕೊಳ್ಳೇಗಾಲ ಸುಬ್ಬ ಶೆಟ್ಟಿ ಸ್ಮರಣಾರ್ಥ ಅವರ ಸಹೋದರ ರಾಧಾಕೃಷ್ಣ ಅವರು 1 ಲಕ್ಷ ರೂ. ವೆಚ್ಚದಲ್ಲಿ ಸಿಹಿತಿಂಡಿ ನೀಡಿದರು.

ಗಣ್ಯರ ಉಪಸ್ಥಿತಿ
ರಥೋತ್ಸವದ ವೇಳೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಪ್ರಮೀಳಾ, ಹೈಕೋರ್ಟ್‌ ನ್ಯಾಯಾಧೀಶ ಸತ್ಯನಾರಾಯಣ, ಸುಳ್ಯ ನ್ಯಾಯಾಧೀಶ ಪುರುಷೋತ್ತಮ, ಪುತ್ತೂರು ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಹಣಾಧಿಕಾರಿ ಎಚ್‌.ಎಂ. ರವೀಂದ್ರ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್‌, ನೂತನ ಬ್ರಹ್ಮರಥ ದಾನಿ ಉದ್ಯಮಿ ಅಜಿತ್‌ ರೈ, ಎಂ.ಬಿ. ಸದಾಶಿವ ಉಪಸ್ಥಿತರಿದ್ದರು. ಪಂಚಮಿ ಮತ್ತು ಚೌತಿ ದಿನಗಳಲ್ಲಿ ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಸಹಿತ ಹಲವು ಗಣ್ಯರು ದೇಗುಲಕ್ಕೆ ಭೇಟಿಯಿತ್ತರು.

ಇಂದು ನೌಕಾವಿಹಾರ: ಶುಕ್ರವಾರ ಶ್ರೀ ಸುಬ್ರಹ್ಮಣ್ಯ ದೇವರ ಅವಭೃಥ ಉತ್ಸವ ಮತ್ತು ನೌಕಾ ವಿಹಾರ ಕುಮಾರಧಾರಾ ನದಿಯಲ್ಲಿ ನಡೆಯಲಿದೆ.

ಮುಂದಿನ ವರ್ಷ ಹೊಸ ರಥ
400 ವರ್ಷ ಹಳೆಯ ಬ್ರಹ್ಮರಥ ಶಿಥಿಲಗೊಂಡಿರುವ ಕಾರಣ ಹೊಸ ರಥ ನಿರ್ಮಾಣಕ್ಕೆ ಸಂಕಲ್ಪಿಸಲಾಗಿದ್ದು, ಮುಂದಿನ ವರ್ಷದ ಜಾತ್ರೆಗೂ ಮೊದಲು ಸಮರ್ಪಣೆಗೊಳ್ಳಲಿದೆ. ಶಿಥಿಲಗೊಂಡಿರುವ ಹಳೆಯ ರಥ ಇತಿಹಾಸದ ಪುಟಗಳನ್ನು ಸೇರಲಿದೆ. 

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.