ಪಾಸ್‌ ಇದ್ದರೂ ನೇತಾಡುವ ಸ್ಥಿತಿ


Team Udayavani, Dec 14, 2018, 10:51 AM IST

14-december-3.gif

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಪ್ರತಿವರ್ಷ ಸುಮಾರು 7 ಸಾವಿರಕ್ಕೂ ಅಧಿಕ ವಿದ್ಯಾರ್ಥಿ ಪಾಸ್‌ಗಳನ್ನು ನೀಡಲಾಗುತ್ತಿದೆ. ಆದರೆ ಶಾಲಾ ವಿದ್ಯಾರ್ಥಿಗಳು ಪಾಸ್‌ ಸೌಲಭ್ಯವನ್ನು ಪಡೆದುಕೊಂಡು ಬಸ್‌ನ ಬಾಗಿಲಿನಲ್ಲೇ ನೇತಾಡಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ.

ದಿನನಿತ್ಯ ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ವಿದ್ಯಾರ್ಥಿಗಳು ಸರಕಾರಿ ಬಸ್‌ಗಳನ್ನೇ ಅವಲಂಬಿಸಿಕೊಂಡು ವಿವಿಧ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದು, ಸಮಯಕ್ಕೆ ಸರಿಯಾಗಿ ಆವಶ್ಯಕತೆಯಷ್ಟು ಬಸ್‌ಗಳ ಸೌಲಭ್ಯವಿಲ್ಲದೆ ದಿನನಿತ್ಯ ಬೆಳಗ್ಗೆ ಹಾಗೂ ಸಂಜೆ ವೇಳೆ ವಿದ್ಯಾರ್ಥಿಗಳು ಬಸ್‌ನ ಮೆಟ್ಟಿಲಲ್ಲೇ ನೇತಾಡಿಕೊಂಡು ಹೋಗುವ ಪರಿಸ್ಥಿತಿಯಿದ್ದು, ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ರೀತಿಯ ಸ್ಪಂದನೆ ಇಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜಿಗೆ ಸೇರಬೇಕಾದರೆ ಬೆಳಗ್ಗಿನ ನಿಗದಿತ ಸಮಯದ ಒಂದೋ ಎರಡೋ ಬಸ್‌ ಗಳನ್ನು ಏರಬೇಕು. ಸಂಜೆಯೂ ಇದೇ ಪಾಡು. ಒಂದು ಬಸ್‌ ಬಿಟ್ಟು ಬೇರೊಂದರಲ್ಲಿ ಹೋಗೋಣ ಎಂದುಕೊಂಡರೆ ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜಿಗೆ ಹೋಗಲು ಆಗುವುದಿಲ್ಲ. ಹೀಗೆ ದಿನನಿತ್ಯ ವಿದ್ಯಾರ್ಥಿಗಳು ಪಡುವ ಕಷ್ಟ ಅಷ್ಟಿಷ್ಟಲ್ಲ.

ಸಾಮರ್ಥಯಕ್ಕಿಂತ ಹೆಚ್ಚು ಮಂದಿ
ವಾರ್ಷಿಕ ಪಾಸ್‌ ಪಡೆದುಕೊಂಡು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಮಾತ್ರ ಸಮಯಕ್ಕೆ ಸರಿಯಾಗಿ ಅಗತ್ಯಕ್ಕೆ ತಕ್ಕಂತೆ ಬಸ್‌ ಸಂಚಾರವಿಲ್ಲದೆ ಒಂದೇ ಬಸ್‌ನಲ್ಲಿ ಅದರ ಸಾಮರ್ಥಯಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸುವ ಸ್ಥಿತಿ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುವ ಬೆರಳೆಣಿಕೆಯ ಬಸ್‌ ಗಳಲ್ಲಿ ಸಮರ್ಪಕವಾದ ಬಾಗಿಲಿನ ವ್ಯವಸ್ಥೆಯಾಗಲಿ, ಕಿಟಕಿಗಳ ಗಾಜುಗಳ ವ್ಯವಸ್ಥೆಯಾಗಲಿ ಸರಿಯಿಲ್ಲ ಎನ್ನುವ ದೂರು ಇದೆ. ಕೇವಲ ವಿದ್ಯಾರ್ಥಿಗಳು ಮಾತ್ರ ಸಂಚರಿಸುವುದಲ್ಲದೆ ಮಾಸಿಕ ಪಾಸ್‌ ಪಡೆದ ಎಷ್ಟೋ ಮಂದಿ ನೌಕರರು ಕೂಡ ಸರಕಾರಿ ಬಸ್ಸನ್ನೇ ಅವಲಂಬಿಸಿದ್ದು ಅವರ ಕಷ್ಟವೂ ದೇವರಿಗೆ ಪ್ರೀತಿ.

ಕ್ರಮಕ್ಕೆ ಅವಕಾಶವಿದೆ
ಬಸ್‌ಗಳಲ್ಲಿ ನೇತಾಡಿಕೊಂಡು ಹೋದರೆ ಅದಕ್ಕೆ ಕ್ರಮಕೈಗೊಳ್ಳುವ ಅವಕಾಶವಿದೆ. ಆದರೆ ಸದ್ಯಕ್ಕೆ ನಾನು ಬೆಳಗಾವಿ ಅಧಿವೇಶನದ ಕರ್ತವ್ಯದಲ್ಲಿದ್ದೇನೆ.
– ಓಡಿಯಪ್ಪ ಗೌಡ,
ಸಬ್‌ ಇನ್‌ಸ್ಪೆಕ್ಟರ್‌ ಬೆಳ್ತಂಗಡಿ ಸಂಚಾರಿ ಠಾಣೆ 

ಅಪಾಯ ತಪ್ಪಿಸಿ
ಶಾಲಾ ವಾಹನಗಳಿಗೆ ಇರುವ ಕಟ್ಟುನಿಟ್ಟಿನ ನೀತಿಯನ್ನು ಬಸ್‌ಗಳಿಗೂ ಅನ್ವಯಿಸುವಂತೆ ಮಾಡಿದರೆ ಆವಶ್ಯಕತೆಯಷ್ಟು ಬಸ್‌ಗಳ ಸೌಲಭ್ಯ ಲಭಿಸಬಹುದು. ಶಾಲಾ ಕಾಲೇಜಿನ ಮಕ್ಕಳಿಗೆ ನೀಡಿದ ಪಾಸ್‌ಗಳ ಆಧಾರದಲ್ಲಿ ಹೆಚ್ಚುವರಿ ಬಸ್‌ಗಳನ್ನು ನೀಡಬೇಕಾಗಿರುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿ. ಜತೆಗೆ ಇತರ ಪ್ರಯಾಣಿಕರಿಗೂ ಅನುಕೂಲವಾಗುತ್ತದೆ ಎನ್ನುವ ಮಾತು ಪ್ರಯಾಣಿಕರದ್ದು. ಸಂಬಂಧಪಟ್ಟ ಇಲಾಖೆಯವರು ಸೂಕ್ತ ಕ್ರಮಕೈಗೊಂಡು ಹೆಚ್ಚುವರಿ ಬಸ್‌ ಸೌಲಭ್ಯವನ್ನು ಒದಗಿಸಿ ಅಪಾಯವನ್ನು ತಪ್ಪಿಸಬೇಕಾಗಿದೆ.

ಬಸ್‌ ಟ್ರಿಪ್‌ ಹೆಚ್ಚಿಸಲಾಗಿದೆ
ಧರ್ಮಸ್ಥಳ – ಮಂಗಳೂರು ಮಾರ್ಗವಾಗಿ ಮಂಗಳೂರು ವಿಭಾಗದ ಬಸ್‌ಗಳು ಓಡುತ್ತಿರುವುದರಿಂದ ಪುತ್ತೂರು ವಿಭಾಗದ ಬಸ್‌ಗಳನ್ನು ಹಾಕುವಂತಿಲ್ಲ. ಕಳೆದ ವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿದ ಸೂಚನೆಯಂತೆ ಈಗಾಗಲೇ ಬಸ್‌ಗಳ ಟ್ರಿಪ್‌ಗ್ಳನ್ನು ಹೆಚ್ಚಿಸಲಾಗಿದೆ. ಜತೆಗೆ ನಿಲುಗಡೆಯ ಬದಲಾವಣೆ ಕೂಡ ನಡೆದಿದೆ. ಮುಂದೆ ಇನ್ನಷ್ಟು ಬೇಡಿಕೆಗಳು ಇದ್ದಲ್ಲಿ ಮಂಗಳೂರು ವಿಭಾಗದವರೇ ನೀಡಬೇಕು.
ಶಿವರಾಮ್‌ ನಾಯ್ಕ,
 ಡಿಪೊ ಮೆನೇಜರ್‌, ಧರ್ಮಸ್ಥಳ

ವಿಶೇಷ ವರದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.