ಹದಗೆಟ್ಟ ಕುಕ್ಕುಜಡ್ಕ-ಪೈಲಾರು ರಸ್ತೆ: ಸಂಚಾರ ದುಸ್ತರ 


Team Udayavani, Dec 14, 2018, 2:49 PM IST

14-december-14.gif

ಸುಳ್ಯ : ಕುಕ್ಕುಜಡ್ಕ-ಪೈಲಾರು ನಡುವಿನ 3 ಕಿ.ಮೀ. ದೂರ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರ ದುಸ್ತರವೆನಿಸಿದೆ. ಸಮಸ್ಯೆಯ ಬಗ್ಗೆ ಸ್ಥಳೀಯರು ಎಲ್ಲ ಸ್ತರದ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ, ಸ್ಪಂದನೆ ಸಿಕ್ಕಿಲ್ಲ.

ಇಲ್ಲಿ 200ಕ್ಕೂ ಅಧಿಕ ಮನೆಗಳಿವೆ. ಕುಕ್ಕುಜಡ್ಕ, ಪೈಲಾರಿನಲ್ಲಿ ಶಾಲೆಗಳಿವೆ. ಇವೆಲ್ಲದಕ್ಕೆ ಸಂಪರ್ಕಕ್ಕೆ ಇರುವ ಪ್ರಮುಖ ರಸ್ತೆ ಇದಾಗಿದೆ. ರಸ್ತೆ ಡಾಮರು ಎದ್ದು ಹೋಗಿದ್ದು, ಹತ್ತು ವರ್ಷದಿಂದ ದುರಸ್ತಿ ಕಂಡಿಲ್ಲ. ಶಾಸಕ ಅಂಗಾರ, ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ. ಸುಮಾರು 1.80 ಕೋ.ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಆಗುತ್ತದೆ ಎನ್ನುವ ಭರವಸೆ ಸಿಕ್ಕಿದ್ದರೂ, ಅದು ಈ ತನಕ ಈಡೇರಿಲ್ಲ.

ಐದು ಬಸ್‌ ಓಡಾಟ
ಪುತ್ತೂರು ಮತ್ತು ಸುಳ್ಯ ಡಿಪೋದಿಂದ ಕುಕ್ಕುಜಡ್ಕ ಮಾರ್ಗದಲ್ಲಿ ಪೈಲಾರಿಗೆ ದಿನಂಪ್ರತಿ ಐದು ಬಸ್‌ ಓಡಾಟ ನಡೆಸುತ್ತಿವೆ. ಅದರಲ್ಲಿ ಮೂರು ಬಸ್‌ಗಳು ರಾತ್ರಿ ವೇಳೆ ಪೈಲಾರಿನಲ್ಲಿ ತಂಗಿ ಬೆಳಗ್ಗೆ ಸಂಚಾರ ಆರಂಭಿಸುತ್ತದೆ. ದಿನಂಪ್ರತಿ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಪೈಲಾರು ಭಾಗದಿಂದ ಸುಳ್ಯ ಪುತ್ತೂರಿಗೆ ತೆರಳಲು ಈ ಬಸ್‌ ಅನ್ನು ಬಳಸುತ್ತಾರೆ. ರಸ್ತೆ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವುದರಿಂದ ಬಸ್‌ ಓಡಾಟ ಕೂಡ ಸ್ಥಗಿತಗೊಳ್ಳುವ ಭೀತಿ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಹೆಚ್ಚಾಗಿ ಕೃಷಿ ಕುಟುಂಬಗಳು ಇಲ್ಲಿದ್ದು, ಕೃಷಿ ಉತ್ಪನ್ನಗಳ ಸಾಗಾಟ ಹಾಗೂ ಸಂಚಾರಕ್ಕಾಗಿ ಹಲವು ಖಾಸಗಿ ವಾಹನಗಳು ಈ ಪರಿಸರದಲ್ಲಿವೆ. ಆ ವಾಹನಗಳ ಗುಣಮಟ್ಟದ ಮೇಲೂ ಈ ರಸ್ತೆ ಅವ್ಯವಸ್ಥೆ ಪರಿಣಾಮ ಬೀರಿದೆ. ಜಲ್ಲಿ ರಾಶಿ ಚದುರಿದಂತಿರುವ ರಸ್ತೆಯಲ್ಲಿ ವಾಹನ ಚಲಾಯಿಸುವ ಪರಿಣಾಮ ವಾಹನದ ಬಿಡಿ  ಭಾಗಗಳಿಗೆ ಹಾನಿ ಉಂಟಾಗುತ್ತಿದೆ ಎಂದು ಚಾಲಕರು ಹೇಳುತ್ತಾರೆ.

ಮುಂದಿನ ಮತದಾನ ಬಹಿಷ್ಕಾರ ಈ ರಸ್ತೆಯಲ್ಲಿ ವಾಹನ ಓಡಾಟ ಬಿಡಿ, ನಡೆದಾಡುವುದೇ ಕಷ್ಟ. ಹಲವು ಬಾರಿ ರಸ್ತೆ ದುರಸ್ತಿಗೆ ಮನವಿ ಮಾಡಿದ್ದೇವೆ. ಆದರೆ ನಮ್ಮ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಈ ಬಾರಿಯ ಲೋಕಸಭೆ ಚುನಾವಣೆ ಸಂದರ್ಭ ಮತದಾನ ಬಹಿಷ್ಕರಿಸಿ ಪ್ರತಿಭಟಿಸುವುದೊಂದೇ ಉಳಿದಿರುವ ದಾರಿಯಾಗಿದೆ.
– ಎಂ.ಟಿ. ಶಾಂತಿಮೂಲೆ,
ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.