ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌: ಇಬ್ಬರು ಅಸ್ವಸ್ಥ  


Team Udayavani, Dec 16, 2018, 10:22 AM IST

shock.jpg

ಪುತ್ತೂರು: ಕಂಬದಲ್ಲಿ ದುರಸ್ತಿ ನಿರತ ಕಾರ್ಮಿಕರಿಬ್ಬರು ವಿದ್ಯುತ್‌ ಶಾಕ್‌ ತಗುಲಿ ಅಸ್ವಸ್ಥಗೊಂಡ ಘಟನೆ ನಗರದಲ್ಲಿ ನಡೆದಿದೆ.

ಶನಿವಾರ ಇಲ್ಲಿನ ಮುಖ್ಯ ರಸ್ತೆಯ ಮಾçದೆ ದೇವುಸ್‌ ಚರ್ಚ್‌ ಎದುರು ಎಲ್‌.ಟಿ. ಲೈನ್‌ನಲ್ಲಿ ಬೈಂಡಿಂಗ್‌ ನಡೆಯುತ್ತಿದ್ದು, ಮೆಸ್ಕಾಂ ಸಿಬಂದಿ ಜತೆಗೆ ಬೆಂಗಳೂರಿನ ಅರವಿಂದ ಎಲೆಕ್ಟ್ರಿಕಲ್‌ ಗುತ್ತಿಗೆ ಸಂಸ್ಥೆಯ 10 ಮಂದಿ ಕೆಲಸ ಮಾಡುತ್ತಿದ್ದರು. 

ವಿದ್ಯುತ್‌ ಶಾಕ್‌ ತಗುಲಿ ಓರ್ವ ಕಾರ್ಮಿಕ ಕಂಬದಿಂದ ಎಸೆಯಲ್ಪಟ್ಟರೆ, ಮತ್ತೋರ್ವ ಕಂಬದಲ್ಲೇ ಕೂತ ಸ್ಥಿತಿಯಲ್ಲಿ 10 ನಿಮಿಷ ಇದ್ದರು. ಬಳಿಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಆಘಾತಕ್ಕೆ ಒಳಗಾದ ಕಾರ್ಮಿಕರು ನಂಜನಗೂಡು ತಾಲೂಕಿನ ಕಸಿವಿನಹಳ್ಳಿ ಸೂರಳ್ಳಿ ಗ್ರಾಮದವರು. ಕಾರ್ಮಿಕ ರವಿ (19) ಕಂಬದಿಂದ ಎಸೆಯಲ್ಪಟ್ಟವರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಮತ್ತೋರ್ವ ಕಾರ್ಮಿಕ ಬಸವನಾಯಕ್‌ (30) ತೀವ್ರ ಗಾಯಗೊಂಡಿದ್ದಾರೆ. 

ಸಾರ್ವಜನಿಕ ಆಕ್ಷೇಪ 
ಬಸವ ನಾಯಕ್‌ ಶಾಕ್‌ನಿಂದ ಕೂತ ಸ್ಥಿತಿಯಲ್ಲೇ ಇದ್ದಾಗ ಉಳಿದ ಕಾರ್ಮಿಕರು ಕಂಬಕ್ಕೆ ಹತ್ತಿ ಹಗ್ಗದ ಸಹಾಯದಿಂದ ಅವರನ್ನು ಇಳಿಸುವ ಯತ್ನ ಮಾಡಿದರು. ಈ ವೇಳೆ ಮೆಸ್ಕಾಂ ಸಿಬಂದಿ ಯಾವುದೇ ಪ್ರಯತ್ನ ಮಾಡದೇ ಮಾರ್ಗದರ್ಶನದಲ್ಲಿ ಸಮಯ ಕಳೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಈ ವೇಳೆ ಎಚ್ಚೆತ್ತುಕೊಂಡ ಮೆಸ್ಕಾಂ ಸಿಬಂದಿ ಕಂಬಕ್ಕೆ ಹತ್ತಿ ಗುತ್ತಿಗೆ ಕಾರ್ಮಿಕರೊಂದಿಗೆ ಸೇರಿ ಬಸವ ನಾಯಕನನ್ನು ಇಳಿಸುವಲ್ಲಿ ಸಹಕರಿಸಿದರು. 

ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದ ಕಾರಣ ಅರ್ಧ ಗಂಟೆ ಟ್ರಾಫಿಕ್‌ ಜಾಮ್‌ ಉಂಟಾಯಿತು. ಗಾಯಾಳುವನ್ನು ರಿಕ್ಷಾದಲ್ಲಿ ಕೊಂಡೊಯ್ಯಲೂ ಹರಸಾಹಸ ಪಡಬೇಕಾಯಿತು.

ವಿದ್ಯುತ್‌ ಇರಲಿಲ್ಲ
ಪುತ್ತೂರು ನಗರ ಹಾಗೂ ಗ್ರಾಮಾಂತರದ ಕೆಲವು ಕಡೆಗಳಲ್ಲಿ ದುರಸ್ತಿಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಎಲ್ಲೆಡೆ ವಿದ್ಯುತ್‌ ಸ್ಥಗಿತಗೊಳಿಸಲಾಗಿತ್ತು.  ಆದರೂ ವಿದ್ಯುತ್‌ ಶಾಕ್‌ಗೆ ಒಳಗಾಗಿರುವುದು ಚರ್ಚೆಗೆ ಕಾರಣವಾಯಿತು.

ದುರಸ್ತಿ ವೇಳೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದಾಗ್ಯೂ ಇನ್ವರ್ಟರ್‌, ಜನರೇಟರ್‌ಗಳು ಬಳಕೆಯಾ ಗುತ್ತಿರುವುದರಿಂದ ಮತ್ತು ಅವುಗಳಲ್ಲಿ ಅಟೋ ಮೆಟಿಕ್‌ ಚೇಂಜ್‌ ಓವರ್‌ಗಳು ಇರುವುದರಿಂದ ಕರೆಂಟ್‌ ರಿಟರ್ನ್ ಆಗಿದೆ. ಅಪಾಯವಾಗಿಲ್ಲ. ಕಾರ್ಮಿಕ ಬೆಳಗ್ಗಿನಿಂದ ಆಹಾರ ಸೇವಿಸ ದ್ದರಿಂದ ನಿಶ್ಶಕ್ತಿ ಉಂಟಾಗಿದೆ. ಇಬ್ಬರೂ ಚೇತರಿಸಿಕೊಂಡಿದ್ದಾರೆ. ಒಂದು ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು.
– ರಾಮಚಂದ್ರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಪುತ್ತೂರು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.