ಹುಕ್ರಪ್ಪಜ್ಜನಿಗೆ ಆಶ್ರಯ ನೀಡಿದ ಸಾಯಿನಿಕೇತನ


Team Udayavani, Dec 16, 2018, 11:01 AM IST

16-december-4.gif

ಪುತ್ತೂರು : ತನ್ನವರನ್ನು ಕಳೆದುಕೊಂಡು, ಸೂರೂ ಇಲ್ಲದೆ ಅನಾಥರಾಗಿ ಕಳೆದ 6 ತಿಂಗಳಿಂದ ನಗರದ ಮಿನಿ ವಿಧಾನ ಸೌಧ ಕಟ್ಟಡದ ಗೋಡೆ ಬದಿಯಲ್ಲಿ ಆಶ್ರಯ ಪಡೆದಿದ್ದ ಸುಳ್ಯಪದವು ಗ್ರಾಮದ ಹುಕ್ರಪ್ಪ ಮೂಲ್ಯ ಅವರಿಗೆ ಆಶ್ರಯ ನೀಡಲು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ದೈಗೋಳಿಯ ಸಾಯಿನಿಕೇತನ ಸೇವಾಶ್ರಮ ಸಂಸ್ಥೆಯವರು ಮುಂದೆ ಬಂದಿದ್ದಾರೆ.

ಪುತ್ತೂರು ನಗರದಲ್ಲಿ ಅಲೆದಾಡುತ್ತಿದ್ದ ಸುಮಾರು 70ರ ಹರೆಯದ ಹುಕ್ರಪ್ಪ ಮೂಲ್ಯರ ಅಸಹಾಯಕತೆ ಹಾಗೂ ತೊಂದರೆಯ ಕುರಿತು ಮಾಧ್ಯ ಮಗಳಲ್ಲಿ ವರದಿ ಪ್ರಕಟವಾಗಿತ್ತು. ಉದ ಯವಾಣಿ ಸುದಿನದಲ್ಲಿ ಡಿ. 8ರಂದು ‘ಎಲ್ಲವನ್ನೂ ಕಳೆದುಕೊಂಡ ಅಜ್ಜನಿಗೆ ಬೇಕು ನೆರವು’ ಶೀರ್ಷಿಕೆಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. ಅಜ್ಜ ತೋಡಿಕೊಂಡ ನೋವು, ನೆನಪುಗಳ ಮಾತನ್ನು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ವರದಿಗಳನ್ನು ಗಮನಿಸಿದ ಸೇವಾಶ್ರಮ ಸಂಸ್ಥೆಯವರು ಅಜ್ಜನ ಸಮಸ್ಯೆಗೆ ಸ್ಪಂದಿಸಿದ್ದಾರೆ.

ಸಾಯಿ ನಿಕೇತನ ಸೇವಾಶ್ರಮ ಸಂಸ್ಥೆಯ ಡಾ| ಶಾರದಾ ಹಾಗೂ ಡಾ| ಉದಯ ಕುಮಾರ್‌ ಅವರು ಶನಿವಾರ ಬೆಳಗ್ಗೆ ಪುತ್ತೂರಿಗೆ ಆಗಮಿಸಿ ಹುಕ್ರಪ್ಪ ಮೂಲ್ಯ ಅವರನ್ನು ಭೇಟಿಯಾಗಿ ಮನವೊಲಿಸಿ ಆಶ್ರಮಕ್ಕೆ ಕರೆದೊಯ್ದಿದ್ದಾರೆ. ಈ ಸಂದರ್ಭ ಸ್ಥಳೀಯ ನಗರ ಪೊಲೀಸ್‌ ಠಾಣೆಗೆ ಮಾಹಿತಿಯನ್ನೂ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಪ್ರಾಥಮಿಕ ಪ್ರಾಥಮಿಕ ತಪಾಸಣೆಯನ್ನು ನಡೆಸಿ, ಹುಕ್ರಪ್ಪ ಮೂಲ್ಯ ಅವರನ್ನು ಆಶ್ರಮಕ್ಕೆ ವಾಹನದಲ್ಲಿ ಕರೆದೊಯ್ದಿದ್ದಾರೆ.

ದೈಗೋಡಿಯ ಸಾಯಿ ನಿಕೇತನ ಸೇವಾಶ್ರಮದಲ್ಲಿ ಈಗಾಗಲೇ 90 ಮಂದಿ ನಿರ್ಗತಿಕರು, ಮಾನಸಿಕ ತೊಂದರೆಗೊಳಗಾದವರಿಗೆ ಆಶ್ರಯ ನೀಡಲಾಗಿದ್ದು, ಹುಕ್ರಪ್ಪ ಮೂಲ್ಯ ಅವರನ್ನೂ ಸೇರಿಸಿಕೊಳ್ಳಲಾಗದೆ. ಅವರ ಸಮಸ್ಯೆಗಳನ್ನು ಮನಗಂಡು ಧೈರ್ಯ ತುಂಬುವ, ಸೂಕ್ತ ಚಿಕಿತ್ಸೆಗಳನ್ನು ನೀಡುವ ನಿಟ್ಟಿನಲ್ಲಿ ಗಮನ ಹರಿಸಲಾಗುವುದು ಎಂದು ಆಶ್ರಮದ ಸಂಯೋಜಕರು ತಿಳಿಸಿದ್ದಾರೆ.

ಆಶ್ರಮದಲ್ಲಿ ಆಶ್ರಯ
ಹುಕ್ರಪ್ಪ ಮೂಲ್ಯ ಅವರನ್ನು ಆಸ್ಪತ್ರೆಯಲ್ಲಿ ಪ್ರಾಥಮಿಕವಾಗಿ ತಪಾಸಣೆ ನಡೆಸಿ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ಆಶ್ರಮಕ್ಕೆ ಕರೆ ತಂದಿದ್ದೇವೆ. ಇನ್ನು ಯಾವ ರೀತಿಯ ಟ್ರೀಟ್‌ಮೆಂಟ್‌ ಬೇಕೆಂದು ಗಮನಿಸಿ ಮುಂದುವರೆಯುತ್ತೇವೆ. ಅಸಹಾಯಕರು, ನಿರ್ಗತಿಕರಿಗೆ ಆಶ್ರಯ ನೀಡುವುದೇ ನಮ್ಮ ಕೆಲಸ. ಅವರು ಸ್ವಸ್ಥಗೊಂಡ ಬಳಿಕ ಮನೆಯವರು ಅಥವಾ ಸಂಬಂಧಪಟ್ಟವರು ಸಂಪರ್ಕಿಸಿದರೆ ಕಳುಹಿಸಿಕೊಡುತ್ತೇವೆ. ಪುನರ್ವಸತಿಗೂ ವ್ಯವಸ್ಥೆ ಮಾಡುತ್ತೇವೆ.
– ಡಾ| ಶಾರದಾ
ಸಾಯಿ ನಿಕೇತನ ಸೇವಾಶ್ರಮ

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.