ಸುಬ್ರಹ್ಮಣ್ಯ ಪೇಟೆ: ಸಂಚಾರ ನಿರ್ವಹಣೆ ದೊಡ್ಡ ಸವಾಲು


Team Udayavani, Dec 18, 2018, 4:15 AM IST

subrahmanya-18-12.jpg

ಸುಬ್ರಹ್ಮಣ್ಯ: ವಾಹನ ನಿಷೇಧಿತ ಸ್ಥಳವಾಗಿದ್ದರೂ ರಸ್ತೆ, ಫ‌ುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸುವ ಸವಾರರು, ಪರದಾಡುವ ಪಾದಚಾರಿಗಳು. ಪಾರ್ಕಿಂಗ್‌ ಜಾಗವಿದ್ದರೂ ನಿಯಂತ್ರಣಕ್ಕೆ ಯಾವುದೇ ಸಮರ್ಪಕ ವಾದ ವ್ಯವಸ್ಥೆ ಜಾರಿ ಇಲ್ಲದಿರುವುದರಿಂದ ಎಲ್ಲರಿಗೂ ಸಮಸ್ಯೆ. ಇದು ಕುಕ್ಕೆ ಸುಬ್ರಹ್ಮಣ್ಯ ನಗರದ ಚಿತ್ರಣ. ದಕ್ಷಿಣ ಭಾರತದ ಸರ್ವಶ್ರೇಷ್ಠ, ರಾಜ್ಯದ ನಂ. 1 ದೇಗುಲವೆನಿಸಿದ ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ ಸಂಚಾರ ಸಮಸ್ಯೆ ಪ್ರತಿನಿತ್ಯದ ಗೋಳು. ಸಂಚಾರ ನಿರ್ವಹಣೆಯೇ ಇಲ್ಲಿ ಬಹುದೊಡ್ಡ ಸವಾಲಾಗಿದೆ. ವರ್ಷದಿಂದ ವರ್ಷಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ದಿನಕ್ಕೆ ಸರಾಸರಿ 10 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಇಲ್ಲಿಗೆ ಭೇಟಿ ಕೊಡುತ್ತಿದ್ದಾರೆ. ಹೆಚ್ಚಿನವರು ಇಲ್ಲಿಗೆ ಸ್ವಂತ ವಾಹನಗಳಲ್ಲಿಯೇ ಬರುತ್ತಾರೆ. ಆದ್ದರಿಂದ ಇಲ್ಲಿ ಜನಸಂದಣಿಯ ಜತೆಗೆ ವಾಹನ ದಟ್ಟನೆಯೂ ಅಧಿಕವಾಗಿದೆ.

ಬಸ್‌ಗಳ ಪೈಪೋಟಿ
ಕಾಶಿಕಟ್ಟೆಯಿಂದ ಸ್ವಲ್ಪ ಮುಂದಕ್ಕೆ ಸಾಗಿದಾಗ ಅಲ್ಲಿಂದ ಸಂಚಾರ ಸಮಸ್ಯೆ ಪ್ರಾರಂಭವಾಗುತ್ತದೆ. ಸಾಲು ಸಾಲಾಗಿ ಬರುವ ಖಾಸಗಿ ವಾಹನಗಳು, ಮುಂದೆ ಸಾಗಲು ಕಿರಿದಾದ ರಸ್ತೆ ಸಮಸ್ಯೆ ತಂದೊಡ್ಡುತ್ತಿದೆ. ಪ್ರಮುಖ ರಸ್ತೆಗೆ ತಾಗಿಕೊಂಡೇ ಸರಕಾರಿ ಬಸ್‌ ನಿಲ್ದಾಣ ಇದೆ. ಇಲ್ಲಿ ತಾಸುಗಟ್ಟಲೆ ವಾಹನಗಳು ರಸ್ತೆಯಲ್ಲೆ ಕರ್ಕಶ ಹಾರ್ನ್ ಹಾಕುತ್ತ ನಿಲ್ಲುವುದು ಸಾಮಾನ್ಯವಾಗಿದೆ. ಸರಕಾರಿ ಸಾರಿಗೆ ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಪೈಪೋಟಿ ಇದ್ದು, ಅವರೂ ಇಲ್ಲಿನ ಸಮಸ್ಯೆಗೆ ಕಾರಣರಾಗುತ್ತಿದ್ದಾರೆ. ದೇಗುಲಕ್ಕೆ ತೆರಳುವ ರಥಬೀದಿ ಪ್ರವೇಶಿಸುವ ಮುಖ್ಯ ಪೇಟೆಯ ಜಂಕ್ಷನ್‌ ಗೇಟಿನ ಬಳಿ ಇನ್ನೊಂದು ದೊಡ್ಡ ಸಮಸ್ಯೆ. ಈ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿ ಜನರನ್ನು ಇಳಿಸಿ ವಾಹನಗಳು ಮುಂದೆ ಸಾಗುತ್ತವೆ. ಆದರೆ ಭಕ್ತರನ್ನು ಇಳಿಸಲು ಸಾಕಷ್ಟು ಹೊತ್ತು ತೆಗೆದುಕೊಳ್ಳುತ್ತಿರುವ ಕಾರಣ ಇಲ್ಲಿಯೂ ಟ್ರಾಫಿಕ್‌ ಜಾಮ್‌ ಸಮಸ್ಯೆ ತಲೆದೋರುತ್ತದೆ.

ಸ್ಥಳ ಗುರುತಿಸಲಾಗಿದೆ
ನಗರದ ಆಂಜನೇಯ ಗುಡಿ, ಸವಾರಿ ಮಂಟಪ, ಬಿಲದ್ವಾರ, ಮೊದಲಾದ ಕಡೆಗಳಲ್ಲಿ ವಾಹನ ಪಾರ್ಕಿಂಗ್‌ ಸ್ಥಳ ಗುರುತಿಸಲಾಗಿದೆ. ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲಿ ಕಲ್ಪಿಸಿದ್ದರೂ, ಸಮರ್ಪಕ ನಿರ್ವಹಣೆಯ ಕೊರತೆ ಇದೆ. ರಜಾ ದಿನಗಳಲ್ಲಿ ಕಿಕ್ಕಿರಿದು ಬರುವ ವಾಹನಗಳಿಂದ ಇಲ್ಲಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತಿದೆ. ಮುಖ್ಯ ಪೇಟೆಯಲ್ಲಿ ಪೊಲೀಸರು, ಗೃಹರಕ್ಷಕ ಸಿಬಂದಿ ನಿಯೋಜಿಸಿದ್ದರೂ ದಟ್ಟಣೆ ಹೆಚ್ಚಾದರೆ ಅವರೂ ಅಸಹಾಯಕರಾಗುತ್ತಿದ್ದಾರೆ. ಬೇಸಗೆಯಲ್ಲಿ ಇಲ್ಲಿನ ಜೂನಿಯರ್‌ ಕಾಲೇಜು ಬಳಿ ರಸ್ತೆ ಬದಿ ಇರುವ ವಸತಿಗೃಹದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಜನದಟ್ಟಣೆ ಅಧಿಕವಿರುತ್ತದೆ. ವಾಹನಗಳು ರಸ್ತೆ ಬದಿಯಲ್ಲಿ ನಿಲ್ಲುವುದರಿಂದ ಇಲ್ಲಿಯೂ ಸಂಚಾರ ಸಮಸ್ಯೆ ಕಂಡುಬರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ಇಲ್ಲಿ ಸೂಕ್ತ ವ್ಯವಸ್ಥೆಗಳು ಆಗಬೇಕಿದೆ.

ಹತೋಟಿ ಕಷ್ಟ
ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಇದೆ. ದೇಗುಲದ ಸಿಬಂದಿ ಸಹಕಾರ ಪಡೆದು ಲಭ್ಯವಿರುವ ಪೊಲೀಸ್‌ ಸಿಬಂದಿ ಹಾಗೂ ಗೃಹರಕ್ಷಕದಳ ಸಿಬಂದಿ ಬಳಸಿಕೊಂಡು ಸಂಚಾರ ಸುವ್ಯವಸ್ಥೆಗೆ ತರುವ ಯತ್ನ ನಡಸುತ್ತಿದ್ದೇವೆ. ಸರಣಿ ರಜಾ ದಿನಗಳಲ್ಲಿ ನಿಯಂತ್ರಣ ಕಷ್ಟವಾಗುತ್ತಿದೆ.
-ಗೋಪಾಲ್‌, ಉಪನಿರೀಕ್ಷಕರು, ಸುಬ್ರಹ್ಮಣ್ಯ ಠಾಣೆ

— ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.