ಸುಬ್ರಹ್ಮಣ್ಯ ಪೇಟೆ: ಸಂಚಾರ ನಿರ್ವಹಣೆ ದೊಡ್ಡ ಸವಾಲು


Team Udayavani, Dec 18, 2018, 4:15 AM IST

subrahmanya-18-12.jpg

ಸುಬ್ರಹ್ಮಣ್ಯ: ವಾಹನ ನಿಷೇಧಿತ ಸ್ಥಳವಾಗಿದ್ದರೂ ರಸ್ತೆ, ಫ‌ುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸುವ ಸವಾರರು, ಪರದಾಡುವ ಪಾದಚಾರಿಗಳು. ಪಾರ್ಕಿಂಗ್‌ ಜಾಗವಿದ್ದರೂ ನಿಯಂತ್ರಣಕ್ಕೆ ಯಾವುದೇ ಸಮರ್ಪಕ ವಾದ ವ್ಯವಸ್ಥೆ ಜಾರಿ ಇಲ್ಲದಿರುವುದರಿಂದ ಎಲ್ಲರಿಗೂ ಸಮಸ್ಯೆ. ಇದು ಕುಕ್ಕೆ ಸುಬ್ರಹ್ಮಣ್ಯ ನಗರದ ಚಿತ್ರಣ. ದಕ್ಷಿಣ ಭಾರತದ ಸರ್ವಶ್ರೇಷ್ಠ, ರಾಜ್ಯದ ನಂ. 1 ದೇಗುಲವೆನಿಸಿದ ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ ಸಂಚಾರ ಸಮಸ್ಯೆ ಪ್ರತಿನಿತ್ಯದ ಗೋಳು. ಸಂಚಾರ ನಿರ್ವಹಣೆಯೇ ಇಲ್ಲಿ ಬಹುದೊಡ್ಡ ಸವಾಲಾಗಿದೆ. ವರ್ಷದಿಂದ ವರ್ಷಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ದಿನಕ್ಕೆ ಸರಾಸರಿ 10 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಇಲ್ಲಿಗೆ ಭೇಟಿ ಕೊಡುತ್ತಿದ್ದಾರೆ. ಹೆಚ್ಚಿನವರು ಇಲ್ಲಿಗೆ ಸ್ವಂತ ವಾಹನಗಳಲ್ಲಿಯೇ ಬರುತ್ತಾರೆ. ಆದ್ದರಿಂದ ಇಲ್ಲಿ ಜನಸಂದಣಿಯ ಜತೆಗೆ ವಾಹನ ದಟ್ಟನೆಯೂ ಅಧಿಕವಾಗಿದೆ.

ಬಸ್‌ಗಳ ಪೈಪೋಟಿ
ಕಾಶಿಕಟ್ಟೆಯಿಂದ ಸ್ವಲ್ಪ ಮುಂದಕ್ಕೆ ಸಾಗಿದಾಗ ಅಲ್ಲಿಂದ ಸಂಚಾರ ಸಮಸ್ಯೆ ಪ್ರಾರಂಭವಾಗುತ್ತದೆ. ಸಾಲು ಸಾಲಾಗಿ ಬರುವ ಖಾಸಗಿ ವಾಹನಗಳು, ಮುಂದೆ ಸಾಗಲು ಕಿರಿದಾದ ರಸ್ತೆ ಸಮಸ್ಯೆ ತಂದೊಡ್ಡುತ್ತಿದೆ. ಪ್ರಮುಖ ರಸ್ತೆಗೆ ತಾಗಿಕೊಂಡೇ ಸರಕಾರಿ ಬಸ್‌ ನಿಲ್ದಾಣ ಇದೆ. ಇಲ್ಲಿ ತಾಸುಗಟ್ಟಲೆ ವಾಹನಗಳು ರಸ್ತೆಯಲ್ಲೆ ಕರ್ಕಶ ಹಾರ್ನ್ ಹಾಕುತ್ತ ನಿಲ್ಲುವುದು ಸಾಮಾನ್ಯವಾಗಿದೆ. ಸರಕಾರಿ ಸಾರಿಗೆ ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಪೈಪೋಟಿ ಇದ್ದು, ಅವರೂ ಇಲ್ಲಿನ ಸಮಸ್ಯೆಗೆ ಕಾರಣರಾಗುತ್ತಿದ್ದಾರೆ. ದೇಗುಲಕ್ಕೆ ತೆರಳುವ ರಥಬೀದಿ ಪ್ರವೇಶಿಸುವ ಮುಖ್ಯ ಪೇಟೆಯ ಜಂಕ್ಷನ್‌ ಗೇಟಿನ ಬಳಿ ಇನ್ನೊಂದು ದೊಡ್ಡ ಸಮಸ್ಯೆ. ಈ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿ ಜನರನ್ನು ಇಳಿಸಿ ವಾಹನಗಳು ಮುಂದೆ ಸಾಗುತ್ತವೆ. ಆದರೆ ಭಕ್ತರನ್ನು ಇಳಿಸಲು ಸಾಕಷ್ಟು ಹೊತ್ತು ತೆಗೆದುಕೊಳ್ಳುತ್ತಿರುವ ಕಾರಣ ಇಲ್ಲಿಯೂ ಟ್ರಾಫಿಕ್‌ ಜಾಮ್‌ ಸಮಸ್ಯೆ ತಲೆದೋರುತ್ತದೆ.

ಸ್ಥಳ ಗುರುತಿಸಲಾಗಿದೆ
ನಗರದ ಆಂಜನೇಯ ಗುಡಿ, ಸವಾರಿ ಮಂಟಪ, ಬಿಲದ್ವಾರ, ಮೊದಲಾದ ಕಡೆಗಳಲ್ಲಿ ವಾಹನ ಪಾರ್ಕಿಂಗ್‌ ಸ್ಥಳ ಗುರುತಿಸಲಾಗಿದೆ. ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲಿ ಕಲ್ಪಿಸಿದ್ದರೂ, ಸಮರ್ಪಕ ನಿರ್ವಹಣೆಯ ಕೊರತೆ ಇದೆ. ರಜಾ ದಿನಗಳಲ್ಲಿ ಕಿಕ್ಕಿರಿದು ಬರುವ ವಾಹನಗಳಿಂದ ಇಲ್ಲಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತಿದೆ. ಮುಖ್ಯ ಪೇಟೆಯಲ್ಲಿ ಪೊಲೀಸರು, ಗೃಹರಕ್ಷಕ ಸಿಬಂದಿ ನಿಯೋಜಿಸಿದ್ದರೂ ದಟ್ಟಣೆ ಹೆಚ್ಚಾದರೆ ಅವರೂ ಅಸಹಾಯಕರಾಗುತ್ತಿದ್ದಾರೆ. ಬೇಸಗೆಯಲ್ಲಿ ಇಲ್ಲಿನ ಜೂನಿಯರ್‌ ಕಾಲೇಜು ಬಳಿ ರಸ್ತೆ ಬದಿ ಇರುವ ವಸತಿಗೃಹದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಜನದಟ್ಟಣೆ ಅಧಿಕವಿರುತ್ತದೆ. ವಾಹನಗಳು ರಸ್ತೆ ಬದಿಯಲ್ಲಿ ನಿಲ್ಲುವುದರಿಂದ ಇಲ್ಲಿಯೂ ಸಂಚಾರ ಸಮಸ್ಯೆ ಕಂಡುಬರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ಇಲ್ಲಿ ಸೂಕ್ತ ವ್ಯವಸ್ಥೆಗಳು ಆಗಬೇಕಿದೆ.

ಹತೋಟಿ ಕಷ್ಟ
ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಇದೆ. ದೇಗುಲದ ಸಿಬಂದಿ ಸಹಕಾರ ಪಡೆದು ಲಭ್ಯವಿರುವ ಪೊಲೀಸ್‌ ಸಿಬಂದಿ ಹಾಗೂ ಗೃಹರಕ್ಷಕದಳ ಸಿಬಂದಿ ಬಳಸಿಕೊಂಡು ಸಂಚಾರ ಸುವ್ಯವಸ್ಥೆಗೆ ತರುವ ಯತ್ನ ನಡಸುತ್ತಿದ್ದೇವೆ. ಸರಣಿ ರಜಾ ದಿನಗಳಲ್ಲಿ ನಿಯಂತ್ರಣ ಕಷ್ಟವಾಗುತ್ತಿದೆ.
-ಗೋಪಾಲ್‌, ಉಪನಿರೀಕ್ಷಕರು, ಸುಬ್ರಹ್ಮಣ್ಯ ಠಾಣೆ

— ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.