ಪಾಲ್ತಾಡಿ: ಕಿಂಡಿ ಅಣೆಕಟ್ಟಿಗೆ ಕೃಷಿಕರಿಂದಲೇ ಹಲಗೆ ಅಳವಡಿಕೆ


Team Udayavani, Dec 19, 2018, 11:19 AM IST

19-december-4.gif

ಸವಣೂರು : ಜಲಸಂರಕ್ಷಣೆಯೊಂದಿಗೆ ಕೃಷಿಗೂ ಪೂರಕವಾಗುವಂತೆ ಹೊಳೆ ನೀರಿಗೆ ರೈತರೇ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿದ ಸನ್ನಿವೇಶ ಪಾಲ್ತಾಡಿ ಗ್ರಾಮದಲ್ಲಿ ಕಂಡುಬಂದಿದೆ. ಹಲಗೆ ಹಾಕಿರುವ ಕಾರಣ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಪಾಲ್ತಾಡಿ ಗ್ರಾಮದ ನಾಡೋಳಿ, ಜಾಣಮೂಲೆಯಲ್ಲಿ ಹೊಳೆಯಲ್ಲಿನ ಅಣೆಕಟ್ಟಿಗೆ ಹಲಗೆ ಹಾಕಲಾಗಿದೆ. ಪ್ರಸ್ತುತ ಬೋರ್‌ವೆಲ್‌ 700 ಅಡಿ ಕೊರೆದರೂ ನೀರು ಸಿಗದ ಈ ಕಾಲದಲ್ಲಿ ಕಿಂಡಿ ಅಣೆಕಟ್ಟಿನ ಮೂಲಕ ನೀರಿಂಗಿಸುವ ಕಾರ್ಯವನ್ನು ರೈತರೇ ಮಾಡಿರುವುದು ಶ್ಲಾಘನೀಯ. ಈ ಕಿಂಡಿ ಅಣೆಕಟ್ಟನ್ನು ಜಲಸಂಪನ್ಮೂಲ ಇಲಾಖೆ ನಿರ್ಮಿಸಿದೆ. ಆದರೆ ಹಲಗೆಯನ್ನು ಅಳವಡಿಸಿರಲಿಲ್ಲ. 

ಬರದಿಂದ ಕೃಷಿಯ ರಕ್ಷಣೆ
ಪಾಲ್ತಾಡಿ ಗ್ರಾಮದ ಮಂಜುನಾಥನಗರದ ನಾಡೋಳಿಯಲ್ಲಿ ಹರಿಯುವ ಗೌರಿ ಹೊಳೆಗೆ ನಿರ್ಮಿಸಿರುವ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಮೂಲಕ ಸುತ್ತಲಿನ 30ಕ್ಕೂ ಹೆಚ್ಚು ಕೃಷಿಕರ ತೋಟಗಳಿಗೆ ಯಥೇಚ್ಛ  ನೀರು ಸಿಗುತ್ತಲಿದೆ. ಅಡಿಕೆ ಕೃಷಿಕರೇ ಇಲ್ಲಿ ಹೆಚ್ಚಿದ್ದಾರೆ. ಬರದಿಂದ ಕೃಷಿಯ ರಕ್ಷಣೆಯಾದಂತಾಗಿದೆ. ಬಿರುಬೇಸಗೆಯಲ್ಲೂ ತೋಟ ಒಣಗುವ ಸಮಸ್ಯೆ ಇಲ್ಲಿ ದೂರವಾದಂತಾಗಿದೆ. 

ಕೃಷಿಕರಿಂದಲೇ ನಿರ್ವಹಣೆ
ರಮೇಶ್‌ ರಾವ್‌ ಹಾಗೂ ಸತೀಶ್‌ ಬಂಬಿಲದೋಳ ನೇತೃತ್ವದಲ್ಲಿ ಕೃಷಿಕರೇ ಹಲಗೆ ಅಳವಡಿಸಿದ್ದಾರೆ. ರೋಹಿತ್‌ ರೈ, ಸಂಜೀವ ರೈ ಕುಂಜಾಡಿ, ಬೆಳಿಯಪ್ಪ ಗೌಡ, ಹನೀಫ್‌, ರಝಾಕ್‌, ಸೋಮಪ್ಪ ಗೌಡ ಜಾಣಮೂಲೆ, ಚಂದ್ರಶೇಖರ ಗೌಡ ಜಾಣಮೂಲೆ, ಜಿನ್ನಪ್ಪ ಪೂಜಾರಿ ಅವರು ಆರ್ಥಿಕ ಸಹಕಾರ ನೀಡಿದ್ದಾರೆ. ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆಗೆ ಸುಮಾರು 16 ಸಾವಿರದಿಂದ 20 ಸಾವಿರ ರೂ. ವ್ಯಯಿಸಲಾಗಿದೆ. ಕೃಷಿಕರೇ ಕಿಂಡಿ ಅಣೆಕಟ್ಟಗಳ ನಿರ್ವಹಣೆಯನ್ನು ಮಾಡುತ್ತಲಿದ್ದಾರೆ.

ಅಂತರ್ಜಲ ಮಟ್ಟ ಹೆಚ್ಚಳ
ಹಲಗೆ ಹಾಕಿರುವ ಕಾರಣ ಅಣೆಕಟ್ಟಿನಲ್ಲಿ ಎಪ್ರಿಲ್‌, ಮೇ ವರೆಗೂ ನೀರು ಶೇಖರಣೆಗೊಳ್ಳುತ್ತದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಸುತ್ತಮುತ್ತಲಿನ ಕೆರೆ, ಬಾವಿಗಳಲ್ಲೂ ನೀರಿನ ಮಟ್ಟ ಏರಿಕೆ ಕಂಡುಬಂದಿದೆ. ಅಣೆಕಟ್ಟಿನಲ್ಲಿ 2 ಕಿ.ಮೀ. ಗೂ ಹೆಚ್ಚು ಉದ್ದದಲ್ಲಿ 40 ಅಡಿ ಅಗಲವಾಗಿ 9 ಅಡಿ ನೀರು ಶೇಖರಣೆಯಾಗಿದೆ. ಸುಮಾರು 10 ಅಡಿ ನೀರು ನಿಲ್ಲುವ ಸಾಮರ್ಥ್ಯ ಇಲ್ಲಿದೆ. ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ. ರಮೇಶ್‌ ಅವರ ವಿಶೇಷ ಮುತುವರ್ಜಿಯಿಂದ 10 ವರ್ಷಗಳ ಹಿಂದೆ ಜಲಸಂಪನ್ಮೂಲ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ಇಲ್ಲಿ ಅಣೆಕಟ್ಟು ನಿರ್ಮಾಣಗೊಂಡಿತ್ತು.

ಇಲಾಖೆ ಗಮನಹರಿಸಬೇಕು
ಅಣೆಕಟ್ಟಿನ ಬದಿಯಲ್ಲಿನ ಕಾಂಕ್ರೀಟ್‌ ಕಿತ್ತು ಹೋಗಿ ನೀರು ಸೋರಿಕೆಯಾಗುತ್ತಿತ್ತು. ಇದರ ದುರಸ್ತಿ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ನಡೆಸಬೇಕಿದೆ. ಜಲ ಸಂರಕ್ಷಣೆಯಲ್ಲಿ ಬಂಟ್ವಾಳದ ಇಡ್ಕಿದು ಗ್ರಾಮದ ಅನಂತರದ ಸ್ಥಾನವನ್ನು ಪುತ್ತೂರಿನ ಪಾಲ್ತಾಡಿ ಗ್ರಾಮ ಪಡೆದುಕೊಂಡಿದೆ. ಈ ಗ್ರಾಮದಲ್ಲಿ ಹಲವೆಡೆ ಸಣ್ಣ ಸಣ್ಣ ತೊರೆಗಳಿಗೂ ಮಣ್ಣು ಹಾಗೂ ಅಡಿಕೆ ಮರದ ಹಲಗೆಯನ್ನು ಹಾಕಿ ರೈತರೇ ತಾತ್ಕಾಲಿಕ ಕಟ್ಟಗಳನ್ನು ರಚಿಸಿದ್ದಾರೆ. 

ಜಲಕ್ಷಾಮಕ್ಕೆ ತಡೆ
ಮುಂದೆ ತಲೆದೋರಬಹುದಾದ ಜಲಕ್ಷಾಮವನ್ನು ಕಿಂಡಿ ಅಣೆಕಟ್ಟುಗಳಿಂದ ತಡೆಯಬಹುದು. ಕೃಷಿಕರು ಈಗ ಪಂಪುಗಳಿಗೆ ಆಟೋಸ್ಟಾರ್ಟರ್‌ ಅಳವಡಿಸಿಕೊಂಡಿರುವುದರಿಂದ ಅಗತ್ಯಕ್ಕಿಂತ ಹೆಚ್ಚು ನೀರು ವ್ಯಯವಾಗುತ್ತಿದೆ. ಇದನ್ನು ತಡೆಹಿಡಿಯಬೇಕಾಗಿದೆ. ಹೊಳೆಗಳಲ್ಲಿ ಪ್ರತೀ 2 ಕಿ.ಮೀ. ಗೆ ಒಂದರಂತೆ ಕಿಂಡಿ ಅಣೆಕಟ್ಟು ನಿರ್ಮಿಸುವುದು ಅವಶ್ಯ.
-ಬಿ.ಕೆ. ರಮೇಶ್‌, ನಿರ್ದೇಶಕರು
ಐ.ಸಿ.ಎ.ಆರ್‌., ಹೊಸದಿಲ್ಲಿ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.