ಮನ್ನಾ ಆಗುವವರೆಗೆ ಸಾಲ ಮರುಪಾವತಿಸುವುದಿಲ್ಲ: ಬಸವರಾಜು


Team Udayavani, Dec 19, 2018, 12:22 PM IST

19-december-7.gif

ನಗರ : ಸಾಲ ವಿಚಾರದಲ್ಲಿ ಮನೆ- ಮಠ ಜಪ್ತಿ ಮಾಡುವ ಅವಕಾಶ ಕಾನೂನಿನಲ್ಲಿ ಇಲ್ಲ. ಆದ್ದರಿಂದ ಸಂಪೂರ್ಣ ಮನ್ನಾ ಆಗುವವರೆಗೆ ಸಾಲ ಮರುಪಾವತಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಎಚ್‌.ಆರ್‌. ಬಸವರಾಜು ಹೇಳಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರಿನ ಮಿನಿ ವಿಧಾನಸೌಧದ ಎದುರು ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಗೊಂದಲದ ಗೂಡು
ರಾಜ್ಯದಲ್ಲಿ ಶೇ. 65ರಷ್ಟು ಸಂಖ್ಯೆಯಲ್ಲಿ ರೈತರಿದ್ದಾರೆ. ಜಮೀನು ಹರಾಜು ಪ್ರಕ್ರಿ ಯೆಗೆ ಮುಂದಾದರೆ ಸರ್ಕಾರ ಮೂರು ಗಂಟೆಯೂ ಉಳಿಯುವುದಿಲ್ಲ. ಸಾಲ ಮನ್ನಾ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಈ ವರ್ಷ ಬಡ್ಡಿ ಮನ್ನಾ ಮಾಡುವುದಾಗಿ ಹೇಳುತ್ತಿದ್ದು, ಸಾಲ ಮನ್ನಾ ವಿಚಾರವೇ ಗೊಂದಲದ ಗೂಡಾಗಿದೆ. ಬ್ಯಾಂಕ್‌ಗಳಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಇಲ್ಲ. ಸಾಲದ ವಿಚಾರದಲ್ಲಿ ಜಪ್ತಿಗೆ ಬಂದರೆ ಪ್ರತಿಭಟಿಸಿ ಎಂದು ಕರೆ ನೀಡಿದರು.

ಡಾ| ಸ್ವಾಮಿನಾಥನ್‌ ವರದಿಯ ಜಾರಿಗೆ ಯಾವುದೇ ಸರಕಾರ ಕ್ರಮ ಕೈಗೊಂಡಿಲ್ಲ. ಈ ವರದಿಯನ್ನು ಜಾರಿಗೊಳಿಸುವುದಾಗಿ ವಾಗ್ಧಾನ ನೀಡಿದ ಬಿಜೆಪಿ ಸರಕಾರ, ಅದಕ್ಕೆ ಮೊದಲಿದ್ದ ಕಾಂಗ್ರೆಸ್‌ ಸರಕಾರ ಭರವಸೆಯನ್ನು ಈಡೇರಿಸಿಲ್ಲ. ಇದರಿಂದಾಗಿ ರೈತ ವರ್ಗಕ್ಕೆ ಬೇಡುವ ಸ್ಥಿತಿ ಬಂದಿದೆ ಎಂದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಸಮಿತಿ ಸಂಚಾಲಕ ರಾಜು ಹಿಟ್ಟೂರು ಮಾತನಾಡಿ, ಕನಿಷ್ಠ ಶಿಕ್ಷಣ ಪಡೆದವರಿಗೆ ರೈತರು ಉದ್ಯೋಗ ನೀಡುವ ಪರಿಸ್ಥಿತಿ ಇಂದು ಬಂದಿದೆ ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್‌ ರೈ ಬೈಲುಗುತ್ತು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ, ರಾಜ್ಯ ರೈತ ಸಂಘ- ಹಸಿರುಸೇನೆಯ ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷ ಶೇಖರಪ್ಪ, ದ.ಕ. ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಧರ್ಣಪ್ಪ ಗೌಡ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಭಟ್‌ ಬಡಿಲ ಮತ್ತು ಹೊನ್ನಪ್ಪ ಗೌಡ ಪರಣೆ, ಗೌರವ ಸಲಹೆಗಾರ ಮುರುವ ಮಹಾಬಲ ಭಟ್‌, ಕಾರ್ಯದರ್ಶಿ ಈಶ್ವರ ಗೌಡ ಕುಂತೂರು, ಕಡಬ ತಾಲೂಕು ಅಧ್ಯಕ್ಷ ವಿಕ್ಟರ್‌ ಡಿ’ಸೋಜಾ, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುದೇಶ್‌ ಭಂಡಾರಿ, ಸುಳ್ಯ ತಾಲೂಕು ಕಾರ್ಯದರ್ಶಿ ಸಿರಿಲ್‌ ಕ್ರಾಸ್ತಾ, ಸಂಘಟನೆಯ ಪ್ರಮುಖರಾದ ಸುದೇಶ್‌ ಮಯ್ಯ, ಶೇಖರ್‌ ರೈ ಕುಂಬ್ರ, ಸುದರ್ಶನ್‌ ನಾೖಕ್‌ ಕಂಪ, ಜಯಪ್ರಕಾಶ್‌ ರೈ ನೂಜಿಬೈಲು ಉಪಸ್ಥಿತರಿದ್ದರು.

ಸರಕಾರ ರೈತ ಪರವಾಗಿಲ್ಲ
ಅಧಿಕಾರಕ್ಕೆ ಬಂದ ಒಂದೇ ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಮೋದಿ ಅವರು ಭರವಸೆ ಈಡೇರಿಸಿಲ್ಲ. ಫಸಲ್‌ ಬಿಮಾ ಯೋಜನೆ ರೈತ ಪರವಾಗಿಲ್ಲ. ಮಧ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್‌ ನಡೆಸಲಾಯಿತು. ರೈತರನ್ನು ದಿಲ್ಲಿಗೆ ಹೋಗದಂತೆ ತಡೆಯಲಾಯಿತು. ಇದರ ಪರಿಣಾಮ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ರೈತರು ಅವರ ನ್ನು ರಾಜ್ಯಕ್ಕೆ ಬಾರದಂತೆ ತಡೆಯುವ ಕೆಲಸ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.