ಅಭಿವೃದ್ಧಿ ಯೋಜನೆ ಸಿದ್ಧಪಡಿಸಲು ಸೂಚನೆ
Team Udayavani, Jan 5, 2019, 9:55 AM IST
ಬೆಳ್ತಂಗಡಿ: ಬೆಳ್ತಂಗಡಿ ನಗರ ಸನಿಹದ ಕಲ್ಲಗುಡ್ಡೆಯಲ್ಲಿ ಸುಮಾರು 25 ಎಕ್ರೆ ವಿಸ್ತೀರ್ಣದ ಟ್ರೀ ಪಾರ್ಕ್ಗೆ ಶುಕ್ರವಾರ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ, ಪಾರ್ಕ್ನ ಮುಂದಿನ ಅಭಿವೃದ್ಧಿ ಕುರಿತು ಯೋಜನೆ ಸಿದ್ಧಪಡಿಸಿ ನೀಡು ವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸ್ತುತ ಪಾರ್ಕಿನಲ್ಲಿ ವಾಕಿಂಗ್ ಟ್ರ್ಯಾಕ್, ಕುಳಿತುಕೊಳ್ಳುವ ವ್ಯವಸ್ಥೆ, ಕೊಳವೆಬಾವಿ, ಶೌಚಾಲಯಗಳಿದ್ದು, ರಸ್ತೆ, ನೀರಿನ ವ್ಯವಸ್ಥೆ ನಿರ್ಮಾಣವಾಗಬೇಕೆಂದು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ, ಸೂಕ್ತ ಅನು ದಾನದೊಂದಿಗೆ ಸುಸಜ್ಜಿತ ಪಾರ್ಕ್ ಆಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಬೆಳ್ತಂಗಡಿ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ ಅವರು ಶಾಸಕರಿಗೆ ಮಾಹಿತಿ ನೀಡಿದರು. ಪ.ಪಂ. ಸದಸ್ಯರಾದ ಜಯಾನಂದ ಗೌಡ, ರಜನಿ ಕುಡ್ವ, ಅಂಬರೀಶ್, ಶರತ್ ಕುಮಾರ್, ತುಳಸಿ ಕರುಣಾಕರ್, ಗೌರಿ, ನಗರ ಬಿಜೆಪಿ ಅಧ್ಯಕ್ಷ ಭುಜಂಗ ಶೆಟ್ಟಿ, ಪ್ರಮುಖರಾದ ಗಣೇಶ್, ರಾಧಿಕಾ, ಜಯರಾಮ್, ಉಪ ಅರಣ್ಯಾಧಿಕಾರಿ ರವೀಂದ್ರ ಅಂಕಲಗಿ, ರಾಘವೇಂದ್ರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ