ಬಾಳೆಕಜೆ: ಕಾಂಕ್ರೀಟ್ ರಸ್ತೆಗೆ ಅನುದಾನ ಕೊರತೆ


Team Udayavani, Jan 9, 2019, 10:26 AM IST

8-january-2.jpg

ಅರಂತೋಡು: ತೊಡಿಕಾನ- ಚಿಟ್ಟನ್ನೂರು – ಬಾಳೆಕಜೆ-ಹರ‌್ಲಡ್ಕ – ದರ್ಬೆಮಜಲು ಬಂಗಾರಕೋಡಿ ರಸ್ತೆ ತೀರಾ ಹದಗೆಟ್ಟಿದ್ದು, ಈ ಭಾಗದ ಕೆಲವು ಮನೆಯವರು ಹಣವನ್ನು ತಾವೇ ಸಂಗ್ರಹಿಸಿ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಸುತ್ತಿದ್ದಾರೆ.

ತೊಡಿಕಾನದಿಂದ ದರ್ಬೆಮಜಲು ಬಂಗಾರಕೋಡಿಗೆ 3.5 ಕಿ.ಮೀ. ದೂರವಿದೆ. ಇದರಲ್ಲಿ ಹಾಸ್ಪಾರೆ ಸಮೀಪ ಶಾಸಕರು, ಜಿ.ಪಂ. ಹಾಗೂ ತಾ.ಪಂ. ಅನುದಾನದಲ್ಲಿ ಸುಮಾರು 90 ಮೀ. ಕಾಂಕ್ರೀಟ್ ಕಾಮಗಾರಿ, ಹಾಸ್ಪಾರೆ ತೋಡಿಗೆ ಕಿರು ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ರಸ್ತೆ ಅಭಿವೃದ್ಧಿಗೆ ಸರಕಾರದಿಂದ ಇನ್ನಷ್ಟು ಅನುದಾನವನ್ನು ಕೇಳಿಕೊಂಡರೂ ಅನುದಾನ ದೊರೆಯಲಿಲ್ಲ. ರಸ್ತೆ ಅಭಿವೃದ್ಧಿಯಾಗದ ಪರಿಣಾಮ ಸುಗಮ ವಾಹನ ಸಂಚಾರವಿಲ್ಲದೆ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಇದರಿಂದ ಹೇಗಾದರೂ ಮಾಡಿ ರಸ್ತೆ ಅಭಿವೃದ್ಧಿ ಮಾಡಬೇಕೆಂದು ಗ್ರಾಮದ ಜನರು ಪಣ ತೊಟ್ಟರು.

ಒಂದುಗೂಡಿದ ಮನೆಮಂದಿ
ಕಾಂಕ್ರೀಟ್ ಕಾಮಗಾರಿ ನಡೆಸಲು 18ರಿಂದ 20 ಮನೆಯವರು ಒಂದುಗೂಡಿ ಹಣ ಸಂಗ್ರಹಕ್ಕೆ ಮುಂದಾದರು. ಹಿರಿಯರಾದ ಶೇಷಪ್ಪ ಗೌಡ ಬಾಳೆಕಜೆ ಅವರ ನೇತೃತ್ವದಲ್ಲಿ ಜಲ್ಲಿ, ಕಬ್ಬಿಣ, ಮರಳು, ಸಿಮೆಂಟ್ ತಂದು 17 ಮೀ. ರಸ್ತೆಗೆ ಕಾಂಕ್ರೀಟ್ ಹಾಕಿ ಸ್ವತಃ ಅವರೇ ಕೆಲಸ ಮಾಡಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಇನ್ನು ಸುಮಾರು 55 ಮೀ. ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಸುತ್ತಿದ್ದಾರೆ. ಕೆಲ ಗುತ್ತಿಗೆದಾರರು ಜಲ್ಲಿಯನ್ನು ದಾನವಾಗಿ ನೀಡಿದ್ದಾರೆ.

ಈ ಭಾಗದಲ್ಲಿ ಇನ್ನೂ 3.3 ಕಿ.ಮೀ. ರಸ್ತೆ ಅಭಿವೃದ್ಧಿಯಾಗಬೇಕಾಗಿದೆ. ಕಚ್ಚಾ ರಸ್ತೆಯಾಗಿದ್ದು, ತುಂಬಾ ಏರು-ಪೇರುಗಳಿಂದ ಕೂಡಿದೆ. ಬಂಗಾರ ಕೋಡಿ ಭಾಗದವರು ಈ ರಸ್ತೆಯ ಮೂಲಕ ತೊಡಿಕಾನ ದೇವಸ್ಥಾನಕ್ಕೆ ಬರುತ್ತಿದ್ದಾರೆ. ಜತೆಗೆ ರಸ್ತೆಯಲ್ಲಿ ಕಲ್ಲಿನ ಭಾಗ ಜಾಸ್ತಿ ಇರುವುದರಿಂದ ರಸ್ತೆ ದುರಸ್ತಿಗೆ ಸಮರ್ಪಕವಾಗಿ ಚರಂಡಿ ನೀಡಲೂ ಸಮಸ್ಯೆಯಾಗುತ್ತಿದೆ.

ಹಾಸ್ಪಾರೆ ಬಳಿ ರಸ್ತೆಯಲ್ಲಿದ್ದ ದೊಡ್ಡ ಕಲ್ಲೊಂದನ್ನು ಈ ಭಾಗದ ಜನರು ಸ್ಫೋಟಿಸಿ ತೆಗೆದಿದ್ದಾರೆ. ಮುಂದಿನ ದಿನದಲ್ಲಿ ಈ ರಸ್ತೆಗೆ ಇನ್ನಷ್ಟು ಅನುದಾನದ ಅಗತ್ಯವಿದೆ. ಜನರು ಮತ್ತೆ ಸರಕಾರದ ಅನುದಾನದ ನಿರೀಕ್ಷೆಯಲ್ಲಿದ್ದಾರೆ.

ರಸ್ತೆ ತೀರಾ ಹದಗೆಟ್ಟಿದೆ
ಶಾಸಕರು, ಜಿ.ಪಂ., ತಾ.ಪಂ. ವತಿಯಿಂದ ಸ್ವಲ್ಪ ಅನುದಾನ ದೊರೆತು, ಕಿರು ಸೇತುವೆ ಹಾಗೂ ಸ್ವಲ್ಪ ಭಾಗಕ್ಕೆ ಕಾಂಕ್ರೀಟ್ ಮಾಡಲಾಗಿದೆ. ನಮ್ಮ ರಸ್ತೆ ತೀರಾ ಹದಗೆಟ್ಟಿದ್ದು, ಇದಕ್ಕೆ ಇನ್ನಷ್ಟು ಅನುದಾನದ ಅಗತ್ಯವಿದೆ. ನಾವು ಸುಮಾರು 18 ಮನೆಯವರು ಹಣ ಸಂಗ್ರಹಿಸಿಕೊಂಡು ಕಾಂಕ್ರೀಟ್ ಹಾಕಿದ್ದೇವೆ. ಕೆಲ ಗುತ್ತಿಗೆದಾರರು ಜಲ್ಲಿ ಕೊಟ್ಟಿದ್ದಾರೆ. ಇದನ್ನು ನಾವು ರಸ್ತೆಗೆ ಬಳಸಿಕೊಂಡಿದ್ದೇವೆ. ಮುಂದಿನ ರಸ್ತೆ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಿಕೊಡಬೇಕು. 
– ಶೇಷಪ್ಪಗೌಡ ಬಾಳೆಕಜೆ, 
  ರಸ್ತೆ ಫ‌ಲಾನುಭವಿ

ಟೆಂಡರ್‌ ಶೀಘ್ರ
ತೊಡಿಕಾನ-ಚಿಟ್ಟನ್ನೂರು-ಬಾಳೆಕಜೆ-ಹರ‌್ಲಡ್ಕ ರಸ್ತೆ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ 2.95 ಸಾವಿರ ರೂ. ಅನುದಾನ ಇರಿಸಲಾಗಿದೆ. ಅದರ ಸಾಮಗ್ರಿ ಸರಬರಾಜಿಗೆ ಸದ್ಯದಲ್ಲಿ ಟೆಂಡರ್‌ ಕರೆಯಲಾಗುವುದು. 
– ಜಯಪ್ರಕಾಶ್‌, 
  ಅರಂತೋಡು ಪಿಡಿಒ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.