ಮಠತ್ತಾರು: ಕಿಂಡಿ ಅಣೆಕಟ್ಟಿನಿಂದ ಜಲ ಸಮೃದ್ಧಿ


Team Udayavani, Jan 9, 2019, 10:35 AM IST

8-january-3.jpg

ಕಾಣಿಯೂರು : ಜಲ ಸಂರಕ್ಷಣೆ ಇಂದು ಅನಿವಾರ್ಯ. ಆರಂಭದಲ್ಲಿ ಅಬ್ಬರಿಸಿದರೂ ಕೊನೆಗೆ ಮಳೆಯ ಪ್ರಮಾಣ ಕಡಿಮೆಯಾಗಿ, ಭೂಮಿಯಲ್ಲಿ ನೀರಿನ ಒಸರು ಕ್ಷೀಣಸಿದೆ. ನೀರಿನ ಸಮಸ್ಯೆ ಅಲ್ಲಲ್ಲಿ ತಲೆದೋರುತ್ತಿದೆ. ಜಲ ಸಂರಕ್ಷಣೆಗೆ ಸರಕಾರದ ಜತೆಗೆ ಸಾರ್ವಜನಿಕರೂ ಮುಂದಾಗಿದ್ದಾರೆ.

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಕೊಳವೆ ಬಾವಿಗಳಿಗೆ ನೀರಿಂಗಿಸುವಿಕೆ, ಇಂಗು ಗುಂಡಿಗಳ ನಿರ್ಮಾಣ, ಕಿಂಡಿ ಅಣೆಕಟ್ಟು, ಡ್ಯಾಮ್‌ಗಳ ನಿರ್ಮಾಣ ಇತ್ಯಾದಿ ಉಪಕ್ರಮಗಳು ನಡೆಯುತ್ತಿವೆ. ದೊಡ್ಡ ನದಿ, ಹೊಳೆಗಳ ನೀರಿನ ಹರಿವಿಗೆ ಅಡ್ಡಲಾಗಿ ಒಡ್ಡುಗಳನ್ನು ಕಟ್ಟಿ, ಅದಕ್ಕೆ ಫೈಬರ್‌ ಅಥವಾ ಮರದ ಹಲಗೆಗಳನ್ನು ಅಳವಡಿಸಿ ನೀರು ಶೇಖರಿಸಲಾಗುತ್ತದೆ.

ಕಾಣಿಯೂರು ಗ್ರಾಮದ ಶ್ರೀ ರಾಮತೀರ್ಥ ಮಠದ ಸಮೀಪದ ಮಠತ್ತಾರು ಎಂಬಲ್ಲಿ 5 ವರ್ಷಗಳ ಹಿಂದೆ ದೊಡ್ಡ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದ್ದು, ಸುಳ್ಯ ಶಾಸಕ ಎಸ್‌. ಅಂಗಾರ ಅವರು ಸಣ್ಣ ಮತ್ತು ಕಿರು ನೀರಾವರಿ ಇಲಾಖೆಯಿಂದ 50 ಲಕ್ಷ ರೂ. ಅನುದಾನ ಒದಗಿಸಿದ್ದರು. ಈ ಅಣೆಕಟ್ಟಿನಿಂದ ಈ ಭಾಗದ 50-60 ಮನೆಗಳ ಕೃಷಿ ಚಟುವಟಿಕೆಗಳಿಗೆ ನೀರು ಲಭ್ಯವಾಗುವಂತಾಗಿದೆ.

ಇದರೊಂದಿಗೆ ಪರೋಕ್ಷ ಲಾಭ ಎಂಬಂತೆ ಸುಮಾರು 1ರಿಂದ 2 ಕಿ.ಮೀ. ಆಸುಪಾಸಿನ ಕೆರೆ, ಬಾವಿ, ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಠತ್ತಾರು, ಗುಂಡಿಗದ್ದೆ, ಮುಗರಂಜ, ಅನಿಲ, ಕಟ್ಟತ್ತಾರು, ಬಂಡಾಜೆ, ಕಲ್ಪಡ, ಪೆರ್ಲೋಡಿ ಭಾಗದಲ್ಲಿ ಅಂತರ್ಜಲ ಗಣನೀಯವಾಗಿ ಹೆಚ್ಚಳವಾಗಿರುವುದು ಕಂಡುಬರುತ್ತಿದೆ.

ಪ್ರತೀ ವರ್ಷ ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಲ್ಲಿ ಡ್ಯಾಮ್‌ಗೆ ಫೈಬರ್‌ ಹಲಗೆಗಳನ್ನು ಅಳವಡಿಸಲಾಗುತ್ತಿದ್ದು, ಮಳೆಗಾಲ ಆರಂಭವಾದೊಡನೆ ಹಲಗೆ ತೆಗೆದು ನೀರು ಸರಾಗವಾಗಿ ಹರಿಯು ವಂತೆ ಮಾಡಲಾಗುತ್ತದೆ. ಸ್ಥಳೀಯರು ಒಟ್ಟು ಸೇರಿ ಹಲಗೆ ಜೋಡಿಸುವ ಕೆಲಸ ಮಾಡುತ್ತಾರೆ. ಅಣೆಕಟ್ಟು ನಿರ್ವ ಹಣೆಯ ಹೊಣೆಯೂ ಅವರದೇ. ಈ ಕಿಂಡಿ ಅಣೆಕಟ್ಟಿನಿಂದ ಸುಮಾರು 1 ಕಿ.ಮೀ ದೂರದ ಬೈಲಡ್ಯೆ ಎಂಬಲ್ಲಿ ಇದೇ ರೀತಿಯ ಮತ್ತೂಂದು ಡ್ಯಾಮ್‌ ನಿರ್ಮಾಣ ಮಾಡಲಾಗಿದ್ದು, ಎರಡೂ ಡ್ಯಾಮ್‌ಗಳು ಭರ್ತಿಯಾಗಿ, ಹೆಚ್ಚುವರಿ ನೀರು ಹರಿದು ಹೋಗುತ್ತಿದೆ. ಹೊಳೆಗೆ ಈ ರೀತಿಯ ಕಿಂಡಿ ಅಣೆಕಟ್ಟನ್ನು ಅಲ್ಲಲ್ಲಿ ನಿರ್ಮಾಣ ಮಾಡಿದರೆ ಬಹುತೇಕ ನೀರಿನ ಸಮಸ್ಯೆ ಪರಿಹಾರವಾಗುವುದಲ್ಲದೆ, ಅಂತರ್ಜ ಲದ ವೃದ್ಧಿಗೂ ಸಹಕಾರಿಯಾಗಲಿದೆ.

ಮುಂದಿನ ಪೀಳಿಗೆಗೆ ಉಳಿಸೋಣ
ಹಿಂದೆ ಹಳ್ಳಿಗಳಲ್ಲಿ ಸಣ್ಣ ತೋಡುಗಳಿಗೆ ಮಣ್ಣಿನ ಕಟ್ಟ ನಿರ್ಮಾಣ ಮಾಡಿ ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಲಾಗುತ್ತಿತ್ತು. ಆದರೆ ಈಗ ಸರಕಾರವೇ ಲಕ್ಷಗಟ್ಟಲೆ ರೂ. ವೆಚ್ಚ ಮಾಡಿ ಅಣೆಕಟ್ಟುಗಳನ್ನು ನಿರ್ಮಿಸುತ್ತಿದೆ. ಆದರೆ ಕೆಲವು ಕಡೆ ಇದಕ್ಕೆ ಹಲಗೆಗಳನ್ನು ಜೋಡಿಸದೆ ನೀರು ಹರಿದುಹೋಗುತ್ತಿರುವುದು ಕಂಡುಬಂದಿದೆ. ಮುಂದಿನ ತಲೆಮಾರಿಗಾಗಿ ಹಾಗೂ ಅಂತರ್ಜಲ ವೃದ್ಧಿಗಾಗಿ ಜಲ ಸಂರಕ್ಷಣೆ, ವೈಜ್ಞಾನಿಕ ಕೃಷಿ ಪದ್ಧತಿ ಅನುಷ್ಠಾನ ಅನಿವಾರ್ಯ ಎನ್ನುತ್ತಾರೆ ಕಾಣಿಯೂರು ಗ್ರಾ.ಪಂ. ಸದಸ್ಯ ಸುರೇಶ್‌ ಓಡಬಾಯಿ ಅವರು.

ವಿಶೇಷ ವರದಿ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.