ಕೋಡಿಂಬಾಡಿ: ಬೈಹುಲ್ಲು ಸಾಗಾಟದ ಪಿಕಪ್ಗೆ ಬೆಂಕಿ
Team Udayavani, Jan 10, 2019, 5:31 AM IST
ಪುತ್ತೂರು: ಹೊರ ಜಿಲ್ಲೆಯಿಂದ ಬೈ ಹುಲ್ಲು ತರುತ್ತಿದ್ದ ಪಿಕಪ್ ವಾಹನಕ್ಕೆ ಕೋಡಿಂಬಾಡಿ ಗ್ರಾಮದ ಕಿನ್ನೆತ್ತಿ ಪಳಿಕೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ ಉಂಟಾಗಿ ಬೆಂಕಿ ಸ್ಪರ್ಶವಾದ ಘಟನೆ ಬುಧವಾರ ಸಂಭವಿಸಿದೆ.
ಬೆಂಕಿ ಸ್ಪರ್ಶವಾದ ಕೂಡಲೇ ವಾಹನದಲ್ಲಿದ್ದ ಚಾಲಕ ಮತ್ತು ಇತರ ಇಬ್ಬರು ಹೊರಗಿಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಶಾಂತಿ ನಗರ ರಸ್ತೆಯ ಮೂಲಕ ಬಂದ ವಾಹನ ಕಿನ್ನೆತ್ತಿಪಳಿಕೆ ಸಮೀಪಿಸುತ್ತಿದ್ದಂತೆ ವಿದ್ಯುತ್ ತಂತಿಗಳು ಬೈ ಹುಲ್ಲಿಗೆ ಸ್ಪರ್ಶಿಸಿ ಬೆಂಕಿ ಸ್ಪರ್ಶವಾಯಿತು. ಕೂಡಲೇ ಇಡೀ ವಾಹನವನ್ನು ಆವರಿಸಿಕೊಂಡಿತು. ಘಟನೆ ನಡೆದ ಸ್ಥಳದಲ್ಲಿ ವಿದ್ಯುತ್ ತಂತಿಗಳು ಜೋತಾಡುತ್ತಿದ್ದು, ರಸ್ತೆ ಮತ್ತು ತಂತಿಗಳ ನಡುವಿನ ಅಂತರ ಕಡಿಮೆ ಇದ್ದುದೇ ದುರಂತಕ್ಕೆ ಕಾರಣವೆನ್ನಲಾಗಿದೆ. ಪುತ್ತೂರು ಅಗ್ನಿಶಾಮಕ ದಳದವರು ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..