ನಡೆದು ಬಾಯಾರಿದವರಿಗೆ ಕುಡಿಯುವ ನೀರಿನ ವ್ಯವಸ್ಥೆ


Team Udayavani, Jan 10, 2019, 5:57 AM IST

10-january-5.jpg

ನಗರ : ಸಾರಿಗೆ ವ್ಯವಸ್ಥೆ ಇಲ್ಲದಿರುವ ಸೇಡಿಯಾಪು-ಪೆರ್ನೆ ರಸ್ತೆ ಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರ ಬಾಯಾರಿಕೆ ನೀಗಿಸಲು ವ್ಯಕ್ತಿಯೊಬ್ಬರು ತಮ್ಮ ಮನೆಯ ಕಾಂಪೌಂಡ್‌ನ‌ಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ.

ರಾಜಾಡಳಿತದ ಕಾಲದಲ್ಲಿ ಜನ ಸಾಮಾನ್ಯರು ನಡೆದುಕೊಂಡು ಹೋಗ ಬೇಕಾಗಿತ್ತು. ಆ ಸಂದರ್ಭ ಬಾಯಾರಿಕೆ ನೀಗಿಸಲು ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಕಾಲ ಕಳೆದಂತೆ ಸಾರ್ವಜನಿಕ ಬೋರ್‌ವೆಲ್‌ಗ‌ಳು ಈ ಸ್ಥಾನವನ್ನು ತುಂಬಿದ್ದವು. ಇಂತಹ ವ್ಯವಸ್ಥೆಗಳು ಇಲ್ಲದಿರುವ ಈ ಕಾಲದಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದ ಕಡೆ ನಡೆದುಕೊಂಡು ಹೋಗುವವರಿಗೆ ಆಯಾಸವಾದಾಗ ನೀರು ಬೇಕಾಗುತ್ತದೆ. ಇದನ್ನು ಮನಗಂಡ ಸೇಡಿಯಾಪು-ಪೆರ್ನೆ ರಸ್ತೆಯಲ್ಲಿರುವ ತನ್ನ ಮನೆಯ ಕಾಂಪೌಂಡ್‌ನ‌ಲ್ಲಿ ರಾಜೇಶ್‌ ಪ್ರಭು ಅವರು ತಂಪಾದ ಹೂಜಿ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ನಡೆದಾಡುವವರು ಹೆಚ್ಚು
ಸೇಡಿಯಾಪುವಿನಿಂದ 1 ಕಿ.ಮೀ. ಮುಂದಕ್ಕೆ ರಾಜೇಶ್‌ ಪ್ರಭು ಅವರು ವಾಸ್ತವ್ಯವಿದ್ದು, ಕಳೆದ 3 ವರ್ಷಗಳಿಂದ ಅವರು ಸಾರ್ವಜನಿಕ ಸ್ನೇಹಿ, ಮಾನವೀಯ ಕಾರ್ಯ ಮಾಡುತ್ತಾ ಬಂದಿದ್ದಾರೆ. ಈ ರಸ್ತೆಯಲ್ಲಿ ಸರಕಾರಿ ಅಥವಾ ಖಾಸಗಿ ಸರ್ವೀಸ್‌ ವಾಹನಗಳ ಓಡಾಟವಿಲ್ಲ. ದಿನಂಪ್ರತಿ ಉದ್ಯೋಗಕ್ಕೆ ತೆರಳುವವರು, ಶಾಲಾ ಕಾಲೇಜಿಗೆ ತೆರಳುವ ಮಕ್ಕಳು, ಸಾರ್ವಜನಿಕರು ನಡೆದುಕೊಂಡೇ ಮುಖ್ಯ ರಸ್ತೆಯನ್ನು ಸಂಪರ್ಕಿಸಬೇಕು. ಈ ಸಂದರ್ಭ ಕುಡಿಯಲು ನೀರು ಅತ್ಯವಶ್ಯ.

ಬೀಗ ಹಾಕಿ ಭದ್ರಪಡಿಸಿದ್ದಾರೆ
ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಹೂಜಿಯ ಬಳಿ ಇರುವ ನೀರು ಹರಿಯುವ ಚರಂಡಿಗೆ ಸಿಮೆಂಟ್ ಹಾಸನ್ನೂ ತಮ್ಮ ಸ್ವಂತ ಖರ್ಚಿನಿಂದ ಅವರು ಅಳವಡಿಸಿದ್ದಾರೆ. ಹೂಜಿಯ ನೀರಿಗೆ ಧೂಳು, ಇನ್ನಿತರ ಯಾವುದೇ ಕಸಕಡ್ಡಿಗಳು ಬಿದ್ದು ಹಾಳಾಗದಂತೆ ಎಚ್ಚರ ವಹಿಸಿದ್ದಾರೆ. ಅದಕ್ಕಾಗಿ ಮುಚ್ಚಳವನ್ನು ಮುಚ್ಚಿ ಮೇಲ್ಗಡೆಯಲ್ಲಿ ಬೀಗ ಹಾಕಿ ಭದ್ರಪಡಿಸಿಕೊಂಡಿದ್ದಾರೆ.

ಪ್ರತೀದಿನ ನೀರು ಬದಲಾವಣೆ
ರಾಜೇಶ್‌ ಪ್ರಭು ತಮ್ಮ ಮನೆಯ ಕಾಂಪೌಂಡ್‌ಗೆ ಸ್ಟ್ಯಾಂಡ್ ಅಳವಡಿಸಿ ಅದರಲ್ಲಿ ಮಣ್ಣಿನ ಹೂಜಿಯನ್ನು ಇರಿಸಿ ಪ್ರತೀದಿನ ಕುಡಿಯಲು ಯೋಗ್ಯ ನೀರು ತುಂಬಿಸುತ್ತಾರೆ. ಈ ದಾರಿಯಲ್ಲಿ ನಡೆದುಕೊಂಡು ಹೋಗುವವರು, ಸ್ವಂತ ವಾಹನದಲ್ಲಿ ಸಾಗುವವರು ಬಾಯಾರಿದಾಗ ಈ ಹೂಜಿಯ ತಂಪಾದ ಕುಡಿಯುವ ನೀರನ್ನು ಕುಡಿಯುತ್ತಾರೆ.

ಸಣ್ಣ ಪ್ರಯತ್ನ; ತೃಪ್ತಿ ಇದೆ
ಈ ರಸ್ತೆಯಲ್ಲಿ ಸುಮಾರು ದೂರದವರೆಗೆ ವಾಹನದ ವ್ಯವಸ್ಥೆಯಿಲ್ಲ. ಶಾಲಾ ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುವ ಅನಿವಾರ್ಯತೆಯ ಮಧ್ಯೆ ಬಾಯಾರಿಕೆ ನೀಗಿಸಲೂ ವ್ಯವಸ್ಥೆ ಇಲ್ಲದಿರುವುದನ್ನು ಅರಿತು ಕುಡಿಯುವ ನೀರಿನ ವ್ಯವಸ್ಥೆಯ ಸಣ್ಣ ಪ್ರಯತ್ನ ಮಾಡಿದ್ದೇನೆ. ಈ ಕೆಲಸದಲ್ಲಿ ನನಗೆ ತುಂಬಾ ಖುಷಿ ಇದೆ.
– ರಾಜೇಶ್‌ ಪ್ರಭು,
ನೀರಿನ ವ್ಯವಸ್ಥೆ ಕಲ್ಪಿಸಿದವರು

••ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.