ಪತ್ನಿಯನ್ನು ಕತ್ತಿಯಿಂದ ಕಡಿದು, ತನ್ನ ಕುತ್ತಿಗೆ ಸೀಳಿಕೊಂಡ ಪತಿ


Team Udayavani, Jan 15, 2019, 5:53 AM IST

15-january-6.jpg

ಕಡಬ : ಸುಮಾರು 7 ವರ್ಷಗಳ ಹಿಂದೆ ಐತ್ತೂರು ಗ್ರಾಮದ ಮಂಡೆಕರ ತಮಿಳು ಕಾಲನಿಯನ್ನು ತಲ್ಲಣಗೊಳಿಸಿದ್ದ ಘಟನೆ. 2011 ಸೆ. 20 ರಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್‌ ತೋಟದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಟ್ಯಾಪಿಂಗ್‌ ಕೆಲಸ ಮಾಡುತ್ತಿದ್ದ ತಮಿಳು ಮೂಲದ 25ರ ಹರೆಯದ ಪರಮೇಶ್ವರಿಯನ್ನು ಆಕೆಯ ಗಂಡ ಸುಂದರಮೂರ್ತಿ ಕತ್ತಿಯಿಂದ ಕಡಿದು ಕೊಲೆಗೈದು ತಾನೂ ಚೂರಿಯಿಂದ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಬಂದಿದ್ದ ಪೊಲೀಸರು ಜೀವನ್ಮರಣ ಸ್ಥಿತಿಯಲ್ಲಿದ್ದ ಸುಂದರಮೂರ್ತಿಯನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದರು.

ಕತ್ತು ಸೀಳಿಕೊಂಡ ಪತಿ
ಪರಮೇಶ್ವರಿಯ ತಲೆಯ ಹಿಂಭಾಗ, ಕುತ್ತಿಗೆ ಹಾಗೂ ಭುಜದಲ್ಲಿ ಕತ್ತಿಯಿಂದ ಕಡಿದ ಗಾಯಗಳಾಗಿತ್ತು. ಸುಂದರಮೂರ್ತಿಯ ಮರ್ಮಾಂಗಕ್ಕೂ ಗಾಯವಾಗಿತ್ತು. ಕುತ್ತಿಗೆಯನ್ನು ತಾನೇ ಕುಯ್ದುಕೊಂಡಿದ್ದರೆ, ಘಟನೆಯ ಸಂದರ್ಭ ಪತಿಯ ಮರ್ಮಾಂಗಕ್ಕೆ ಪರಮೇಶ್ವರಿ ಚೂರಿಯಿಂದ ಇರಿದಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೊಲೀಸರು, ಆತ ಗುಣಮುಖನಾದ ಬಳಿಕ ಬಂಧಿಸಿ ಜೈಲಿಗಟ್ಟಿದ್ದರು. 5 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಆತ ಬಿಡು ಗಡೆಗೊಂಡು ತಮಿಳುನಾಡಿಗೆ ತೆರಳಿದ್ದಾನೆ.

ಚೆನ್ನೈನಲ್ಲಿ ಕೆಲಸ ಮಾಡಿದ್ದ
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡಲೂರು ನಿವಾಸಿ ಸುಂದರಮೂರ್ತಿ ಮತ್ತು ಪರಮೇಶ್ವರಿಯ ವಿವಾಹ ನಡೆದು ಅದಾಗಲೇ 5 ವರ್ಷಗಳಾಗಿದ್ದವು. ಮದುವೆಯಾದ ಹೊಸದರಲ್ಲಿ ಚೆನ್ನೈ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಂದರಮೂರ್ತಿ ಪತ್ನಿಯನ್ನೂ ಚೆನ್ನೈಗೆ ಕರೆದೊಯ್ದಿದ್ದ. 2 ವರ್ಷ ಅಲ್ಲಿ ಕೆಲಸ ಮಾಡಿ ಬಳಿಕ ಪತ್ನಿಯೊಂದಿಗೆ ಮಾವನ ಮನೆ ಸೇರಿಕೊಂಡ ಆತ ಮತ್ತೆ ಕೆಲಸಕ್ಕೆ ಹೋಗಲೇ ಇಲ್ಲ. ಅತ್ತೆ, ಮಾವ ಹಾಗೂ ಪತ್ನಿ ಕೆಲಸಕ್ಕೆ ಹೋಗುತ್ತಿದ್ದರೂ ತಾನು ಮಾತ್ರ ಮನೆಯಲ್ಲೇ ಇರುತ್ತಿದ್ದ. ಕುಡಿದು ಬಂದು ಪತ್ನಿಯೊಂದಿಗೆ ಪದೇ ಪದೇ ಜಗಳ ಕಾಯುತ್ತಿದ್ದ. ಕೆಲಸಕ್ಕೆ ಹೋಗದಿದ್ದರೂ ತೊಂದರೆ ಇಲ್ಲ. ಪತ್ನಿಯೊಂದಿಗೆ ಅನ್ಯೋನ್ಯತೆಯಿಂದ ಇರುವಂತೆ ಬುದ್ಧಿವಾದ ಹೇಳುತ್ತಿದ್ದ ಮಾವ ಗೋವಿಂದಸ್ವಾಮಿ ಮತ್ತು ದೇವಕಿ ದಂಪತಿ, ತಮಗೆ ಗಂಡು ಮಕ್ಕಳು ಇಲ್ಲದ ಕಾರಣ ಮಗಳು ಮತ್ತು ಅಳಿಯನನ್ನು ಮನೆಯಲ್ಲೇ ಇರಿಸಿಕೊಂಡಿದ್ದರು. ಆದರೆ ಮಗನಂತೆ ಮನೆ ನಡೆಸಬೇಕಾಗಿದ್ದ ಅಳಿಯ ಸುಂದರ ಮೂರ್ತಿ ಮಾತ್ರ ಮನೆಯನ್ನೇ ಮಸಣವಾಗಿಸಿ ಹೋಗಿದ್ದ.

ಘಟನ ಸ್ಥಳಕ್ಕೆ ಎಸ್ಪಿ ಭೇಟಿ
ಘಟನೆಯ ಸುದ್ದಿ ತಿಳಿದು ಅಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಲಾಬುರಾಮ್‌, ಅಡಿಷನಲ್‌ ಎಸ್ಪಿ ಪ್ರಭಾಕರ್‌ ಹಾಗೂ ಪುತ್ತೂರು ಗ್ರಾಮಾಂತರ ವೃತ್ತನಿರೀಕ್ಷಕ ಎಚ್.ವೈ. ಜಗದೀಶ್‌ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದರು. ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಗಳ ಕೊಲೆಯಲ್ಲಿ ಅಂತ್ಯ
ಮಂಡೆಕರ ನಿವಾಸಿಗಳಾದ ಗೋವಿಂದ ಸ್ವಾಮಿ ಮತ್ತು ದೇವಕಿ ದಂಪತಿಯ ಮೂವರು ಪುತ್ರಿಯರ ಪೈಕಿ ಪರಮೇಶ್ವರಿ ಎರಡನೆಯವರಾಗಿದ್ದರು. ಮಂಡೆಕರದಲ್ಲಿ ನಿಗಮದ ಖಾಯಂ ಕಾರ್ಮಿಕೆಯಾಗಿರುವ ತನ್ನ ತಾಯಿ ದೇವಕಿ ಅವರ ಹೆಸರಿನಲ್ಲಿರುವ ವಸತಿಗೃಹದಲ್ಲಿ ಹೆತ್ತವರೊಂದಿಗೆ ಗಂಡ ಸುಂದರಮೂರ್ತಿ ಹಾಗೂ ಮೂರೂವರೆ ವರ್ಷದ ಪುತ್ರನ ಜತೆ ವಾಸವಾಗಿದ್ದರು. ತಂದೆ ಗೋವಿಂದ ಸ್ವಾಮಿ ಬಂಟ್ವಾಳದ ಬಿ.ಸಿ. ರೋಡ್‌ ಬಳಿ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಕೆಲಸ, ಗಂಡ ಸುಂದರಮೂರ್ತಿ ಮಾತ್ರ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದ.

ಘಟನೆ ನಡೆದ ದಿನ ಬೆಳಗ್ಗೆ ಎಂದಿನಂತೆ ಟ್ಯಾಪಿಂಗ್‌ ಕೆಲಸಕ್ಕೆ ಹೋಗಿದ್ದ ಪರಮೇಶ್ವರಿ ಉಪಾಹಾರ ಸೇವಿಸುವುದಕ್ಕಾಗಿ ಮನೆಗೆ ಬಂದಾಗ ಅವರಿಬ್ಬರ ಮಧ್ಯೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.

••ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.