ಬೆಳೆ ಸಮೀಕ್ಷೆ: ಯುವಕರ ಕೈಸೇರದ ಸಂಭಾವನೆ


Team Udayavani, Jan 17, 2019, 12:30 AM IST

cover-crop-survey.jpg

ಸುಬ್ರಹ್ಮಣ್ಯ: “ನಿರುದ್ಯೋಗಿ ಯುವಕರ ಸಂಪಾದನೆಗೆ ಸುವರ್ಣಾವಕಾಶ; ಮೊಬೈಲ್‌ನಲ್ಲಿ ಕಾಲಹರಣ ಮಾಡುವ ಬದಲು ಮುಂಗಾರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ ಹಣ ಗಳಿಸಿ’ ಎಂಬಿತ್ಯಾದಿ ಹೇಳಿಕೆಗಳ ಮೂಲಕ ನಿರುದ್ಯೋಗಿ ಯುವಕರಲ್ಲಿ ಆಸೆ ಹುಟ್ಟಿಸಿ ಮುಂಗಾರು ಬೆಳೆ ಸಮೀಕ್ಷೆ ಮಾಡಿಸಿಕೊಂಡಿದ್ದ ಸರಕಾರ ಇದೀಗ ಸಂಭಾವನೆ ನೀಡದೆ ಸತಾಯಿಸುತ್ತಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಬೆಳೆ ಸಮೀಕ್ಷೆಯನ್ನು ಸರಕಾರಿ ಸಿಬಂದಿ ಜತೆ ಖಾಸಗಿ ನಿರುದ್ಯೋಗಿ ಯುವಕರ ಕೈಯಲ್ಲಿ ಮಾಡಿಸಲಾಗಿತ್ತು. ಸಮೀಕ್ಷೆ ಪೂರ್ಣಗೊಂಡು ಮೂರು ತಿಂಗಳಾ ದರೂ ಸಂಭಾವನೆ ಕೈಸೇರಿಲ್ಲ.

ಏಕೆ ಈ ಕ್ರಮ?
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೃಷಿಕರ ಮುಂಗಾರು ಪೂರ್ವ ಬೆಳೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿತ್ತು. ಕಳೆದ ಬಾರಿ ಗ್ರಾಮ ಲೆಕ್ಕಿಗರ ಮೂಲಕ ಸಮೀಕ್ಷೆ ಕೈಗೊಂಡಿತ್ತು. ಇದರಿಂದ ಎರಡು ತಿಂಗಳ ಅವಧಿ ಅವರಿಗೆ ಬೇರೆ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತದೆಂಬ ಕಾರಣಕ್ಕೆ ಈ ಬಾರಿ ಆಯಾ ಗ್ರಾಮದ ಖಾಸಗಿ ವ್ಯಕ್ತಿಗಳನ್ನು ಬೆಳೆ ಸಮೀಕ್ಷೆಗಾಗಿ ನಿಯೋಜಿಸಲಾಗಿತ್ತು.

422 ಗ್ರಾಮಗಳಲ್ಲಿ ಸಮೀಕ್ಷೆ 
ಪ್ರತಿ ಸರ್ವೆ ನಂಬರಿನ ಸಮೀಕ್ಷೆಗೆ ತಲಾ 10 ರೂ. ಸಂಭಾವನೆಯನ್ನು ನಿಗದಿ ಪಡಿಸಲಾಗಿತ್ತು. ದ.ಕ. ಜಿಲ್ಲೆಯ 422 ಗ್ರಾಮಗಳಲ್ಲಿ ಸಮೀಕ್ಷೆ ಮಾಡಲು 1,250 ಖಾಸಗಿ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಸೆಪ್ಟಂಬರ್‌ನಲ್ಲಿ ಸಮೀಕ್ಷೆಗೆ ಬಳಸಿ ಕೊಂಡಿದ್ದು, ಎರಡು ಬಾರಿ ತರಬೇತಿ ನೀಡಲಾಗಿತ್ತು. ಬಳಿಕ ಯುವಕರು ರೈತರ ಮನೆ, ಕೃಷಿ ಭೂಮಿಗಳಿಗೆೆ ತೆರಳಿ ಮೊಬೈಲ್‌ನಲ್ಲಿ ಆ್ಯಪ್‌ ಮೂಲಕ ಮಾಹಿತಿ ಪಡೆದುಕೊಂಡು ಹಿಂದಿರುಗಿದ್ದರು. ಇದರಿಂದ ರೈತರಿಗೆ ವಿಮ ಪರಿಹಾರ ನೀಡಲು ಸರಕಾರಕ್ಕೆ ಅನುಕೂಲವಾಗಿತ್ತು.

ಬಣ್ಣದ ಭರವಸೆ!
ಸಮೀಕ್ಷೆ ಪೂರ್ಣವಾದ ತತ್‌ಕ್ಷಣದಲ್ಲಿ ಹಣ ನಿಮ್ಮ ಖಾತೆಗೆ ಸಂದಾಯವಾಗುತ್ತದೆ ಎಂದು ಯುವಕರ ಕೈಯಿಂದ ಆಧಾರ್‌ ಕಾರ್ಡ್‌, ಬ್ಯಾಂಕು ಖಾತೆ ವಿವರಗಳನ್ನು ಅಧಿಕಾರಿಗಳು ಕಲೆಹಾಕಿದ್ದರು. ಉತ್ತಮ ನಿರ್ವಹಣೆ ತೋರಿದ ಯುವಕರಿಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ತಾತ್ಕಾಲಿಕವಾಗಿ ಅವಕಾಶ ನೀಡುವುದಾಗಿಯೂ ಅಧಿಕಾರಿಗಳು ಭರವಸೆ ನೀಡಿದ್ದರು. ಅದೂ ಈಡೇರಿಲ್ಲ ಎಂದು ಯುವಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಹಿತಿ ಕೇಳುತ್ತೇವೆ
ಸಮೀಕ್ಷೆಯಲ್ಲಿ ಭಾಗವಹಿಸಿದ ಯುವಕರಿಗೆ ಸರಕಾರದಿಂದ ನೀಡಬೇಕಿರುವ ಸಂಭಾವನೆ ವಿಳಂಬ ವಿಚಾರವಾಗಿ ತಾಲೂಕು ದಂಡಾಧಿಕಾರಿಗಳ ಬಳಿಯಿಂದ ಮಾಹಿತಿ ಪಡೆಯಲಾಗುವುದು.
– ಎಚ್‌.ಕೆ. ಕೃಷ್ಣ ಮೂರ್ತಿ, ಸ. ಆಯುಕ್ತರು, ಪುತ್ತೂರು

ಹಣ ಬಂದಿಲ್ಲ
ಸಮೀಕ್ಷೆ ವೇಳೆ ಪಹಣಿ ಪತ್ರವೊಂದಕ್ಕೆ ತಲಾ 10 ರೂ.ನಂತೆ ಸಂಭಾವನೆ ನೀಡಲಾಗುವುದು ಎಂದಿದ್ದರು. ಆದರೆ ಇಂದಿನ ವರೆಗೆ ಹಣ ನಮಗೆ ದೊರಕಿಲ್ಲ.
– ಆದರ್ಶ, ಸಮೀಕ್ಷೆಯಲ್ಲಿ ಪಾಲ್ಗೊಂಡ ಯುವಕ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.