ನಗರೋತ್ಥಾನದಡಿ ಸುಂದರಗೊಳ್ಳುತ್ತಿವೆ ಪುತ್ತೂರು ನಗರದ ರಸ್ತೆಗಳು


Team Udayavani, Jan 17, 2019, 5:42 AM IST

17-january-4.jpg

ನಗರ : ಪುತ್ತೂರು ನಗರಸಭೆಗೆ ನಗರೋತ್ಥಾನ ಯೋಜನೆಯಲ್ಲಿ ಮಂಜೂರಾದ ಅನುದಾನದಿಂದ ನಗರ ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಗೊಳಿಸುವ ಕಾರ್ಯ ಕೆಲ ದಿನಗಳಿಂದ ಭರದಿಂದ ನಡೆಯುತ್ತಿದೆ.

ಹೊಂಡ-ಗುಂಡಿಗಳಿಂದ ಸಂಚಾರ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸುತ್ತಿದ್ದ ರಸ್ತೆಗಳೆಲ್ಲ ಈಗ ಸುಂದರಗೊಳ್ಳುತ್ತಿವೆ. ಇಕ್ಕಟ್ಟಾದ ರಸ್ತೆಗಳು ಒಂದಷ್ಟು ಅಗಲಗೊಳ್ಳುತ್ತಿವೆ. ನಗರದ ನಾಲ್ಕೂ ಮೂಲೆಗಳಲ್ಲಿ ರಸ್ತೆ ಸುಂದರಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.

ಕಳೆದ ಸರಕಾರದ ಅವಧಿಯಲ್ಲಿ ಪುತ್ತೂರು ನಗರಸಭೆಗೆ ಮಂಜೂರಾಗಿದ್ದ 25 ಕೋಟಿ ರೂ. ನಗರೋತ್ಥಾನ ಯೋಜನೆಯಲ್ಲಿ ಸುಮಾರು 20ಕ್ಕೂ ಅಧಿಕ ಕಾಮಗಾರಿಗಳನ್ನು ಆಗಿನ ಶಾಸಕರು ಹಾಗೂ ಆಗಿನ ನಗರಸಭೆ ಆಡಳಿತ ಹಂಚಿಕೆ ಮಾಡಿತ್ತು.

ಬಸ್‌ ನಿಲ್ದಾಣದ ಬಳಿಯಿಂದ ಏಳ್ಮುಡಿ, ಕಲ್ಲಾರೆ ಮೂಲಕ ದರ್ಬೆಯ ವರೆಗೆ ಡಾಮರು ಕಾಮಗಾರಿ ನಡೆದಿದೆ. ದರ್ಬೆಯಿಂದ ಬೆದ್ರಾಳದ ವರೆಗೆ ರಸ್ತೆ ವಿಸ್ತರಣೆ ಮಾಡುವ ಮತ್ತು ಡಾಮರು ಹಾಕುವ ಕೆಲಸ ಆರಂಭಗೊಂಡಿದೆ. ಬೆದ್ರಾಳ ಪ್ರದೇಶದಲ್ಲಿ ಡಾಮರು ಕೆಲಸ ನಡೆಸಲಾಗಿದ್ದು, ಮರೀಲ್‌ ಪ್ರದೇಶದ ಕಾಮಗಾರಿ ನಡೆಯುತ್ತಿವೆ. ಮರಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ಪರ್ಲಡ್ಕದಲ್ಲಿ ಸುಂದರ ರಸ್ತೆ
ಪ್ರಮುಖ ಒಳ ರಸ್ತೆಗಳಲ್ಲಿ ಒಂದಾದ ದರ್ಬೆ-ಪರ್ಲಡ್ಕ ರಸ್ತೆ ಅಗಲ ಮಾಡುವ ಮತ್ತು ಡಾಮರು ಕಾಮಗಾರಿ 30 ಲಕ್ಷ ರೂ. ವೆಚ್ಚದಲ್ಲಿ ವೇಗವಾಗಿ ನಡೆಯುತ್ತಿದೆ.

ದರ್ಬೆ ಫಿಲೋಮಿನಾ ಕಾಲೇಜಿನ ದ್ವಾರದ ಅಭಿಮುಖದಿಂದ ಕವಲೊಡೆದ ರಸ್ತೆಯಲ್ಲಿ ಕೃಷಿ ಇಲಾಖೆ, ಎ.ಸಿ. ಕ್ವಾರ್ಟರ್ಸ್‌, ಪರ್ಲಡ್ಕ ಶಾಲೆ ಮೂಲಕ ಪರ್ಲಡ್ಕ ಕ್ರಾಸ್‌ವರೆಗೆ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯನ್ನು ನಗರೋತ್ಥಾನದಲ್ಲಿ ಸೇರಿಸಿ ಆದ್ಯತೆ ನೀಡಲಾಗಿತ್ತು.

ಸೇತುವೆಯೂ ದುರಸ್ತಿ
ದರ್ಬೆ-ಪರ್ಲಡ್ಕ ರಸ್ತೆಯಲ್ಲಿ ವಾಹನ ಸಂಚಾರವನ್ನು ಪಥ ಬದಲಾಯಿಸಿ ಕೊಡಲಾಗಿದೆ. ದರ್ಬೆ ಕಡೆಯಿಂದ ಹೋಗುವ ವಾಹನಗಳು ಪತ್ರಾವೊ ಆಸ್ಪತ್ರೆ ರಸ್ತೆಯಲ್ಲಿ ತೆರಳಿ ಪರ್ಲಡ್ಕ ಶಾಲೆಯ ಬಳಿ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ವ್ಯವಸ್ಥೆ ಮಾಡಲಾಗಿದೆ. ಈ ರಸ್ತೆಯಲ್ಲಿ ಅಗಲ ಕಿರಿದಾದ ಸೇತುವೆಯನ್ನು ಸರಿಪಡಿಸುವ ಕಾಮಗಾರಿಯೂ ನಡೆಯುತ್ತಿದೆ.

2.30 ಕೋಟಿ ರೂ.
ನಗರದ ಮುಖ್ಯ ರಸ್ತೆಯಲ್ಲಿ ಡಾಮರು ಕಾಮಗಾರಿಗೆ ನಗರೋತ್ಥಾನ ಯೋಜನೆಯಲ್ಲಿ 1 ಕೋಟಿ ರೂ. ನಿಗದಿ ಮಾಡಲಾಗಿದೆ. ಪುತ್ತೂರು ನಗರಕ್ಕೆ ವರ್ತುಲ ರಸ್ತೆಯಂತಿರುವ ಸಾಲ್ಮರ-ಜಿಡೆಕಲ್ಲು ರಸ್ತೆಯ ಅಭಿವೃದ್ಧಿಗೆ 1 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೆಹರೂನಗರದಿಂದ ಬನ್ನೂರು, ಸಾಲ್ಮರ, ರೋಟರಿಪುರ, ಜಿಡೆಕಲ್ಲು ಮೂಲಕ ಬೆದ್ರಾಳವನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ಪ್ರಸ್ತುತ ಸಾಲ್ಮರದಿಂದ ಜಿಡೆಕಲ್ಲುವರೆಗೆ ಅಭಿವೃದ್ಧಿಪಡಿಸಲಾಗಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.