ಶಾಲಾಂತ್ಯದಲ್ಲಿ ಮಕ್ಕಳಿಗೆ ಸೈಕಲ್‌ ಸೌಭಾಗ್ಯ!


Team Udayavani, Jan 18, 2019, 12:30 AM IST

cycle-government.jpg

ಪುಂಜಾಲಕಟ್ಟೆ/ಉಡುಪಿ: ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಣೆ ಮಾಡಲು ಬಾಕಿ ಇದ್ದು ತಡೆಹಿಡಿಯಲಾಗಿರುವ ಸೈಕಲ್‌ಗ‌ಳನ್ನು ಕೂಡಲೇ ವಿತರಣೆ ಮಾಡಲು ಆದೇಶಿಸಲಾಗಿದೆ. 

ಈಗಾಗಲೇ ವಿತರಣೆ ಮಾಡಿರುವ ಸೈಕಲ್‌ಗ‌ಳಿಗೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರು ಆನ್‌ಲೈನ್‌ ರ್‍ಯಾಂಡಮ್‌ ಪರಿಶೀಲನ ನಮೂನೆಯಲ್ಲಿ ಭರ್ತಿ ಮಾಡಿರುವ ಅಂಶಗಳ ಬಗ್ಗೆ ಸರಬರಾಜು ಸಂಸ್ಥೆಯವರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಉಚಿತ ಸೈಕಲ್‌ ವಿತರಣೆ ತಡೆಹಿಡಿಯಲು ಈ ಹಿಂದೆ ಸೂಚಿಸಲಾಗಿತ್ತು. ಆದರೆ ಈಗ 2018-19ನೇ ಸಾಲಿನಲ್ಲಿ ಸರಕಾರಿ, ಅನುದಾನಿತ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ವಿತರಿಸಲು; ಆದರೆ ಅದಕ್ಕೂ ಮುನ್ನ ಅವು ಬಳಸಲು ಯೋಗ್ಯವಾಗಿದೆಯೇ ಎಂದು ಖಾತ್ರಿಪಡಿಸಲು ಮತ್ತು ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಕಚೇರಿಗೆ ವರದಿ ಸಲ್ಲಿಸಲು ಸೂಚಿಸಿದೆ.

ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಮುಗಿಯುತ್ತಾ ಬಂದಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತರಲಾಗಿದ್ದ ಸೈಕಲ್‌ ಯೋಜನೆ ಬಳಿಕ ಸಿದ್ದರಾಮಯ್ಯ ಸರಕಾರವಿದ್ದಾಗಲೂ ಮುಂದುವರಿದಿತ್ತು. ಈ ವರ್ಷ ಸೈಕಲ್‌ ವಿತರಣೆಗೆ ಸರಕಾರ ಸಜ್ಜಾಗಿತ್ತು. ಆದರೆ ಇದರ ಗುಣಮಟ್ಟದ ಕುರಿತು ತಕರಾರು ಎದ್ದ ಕಾರಣ ಕೆಲವೆಡೆಯಷ್ಟೇ ವಿತರಣೆಯಾಯಿತು. ಬಳಿಕ ಸಿಎಂ ಕುಮಾರಸ್ವಾಮಿ ಗುಣಮಟ್ಟದ ಸೈಕಲ್‌ ಒದಗಿಸುವ ವರೆಗೆ ವಿತರಣೆ ತಡೆಹಿಡಿದಿದ್ದು, ಬಂಟ್ವಾಳ ತಾಲೂಕಿನ ವಿದ್ಯಾರ್ಥಿಗಳಿಗೆ ಈವರೆಗೂ ದೊರಕಿಲ್ಲವೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಸೈಕಲ್‌ಗ‌ಳು ದೋಷಪೂರಿತ ಹಾಗೂ ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುಣಮಟ್ಟ ಪರಿಶೀಲಿಸಿದ ಬಳಿಕವೇ ವಿತರಿಸಬೇಕೆಂದು ಸರಕಾರ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶ ನೀಡಿದ್ದರಿಂದ ಬಂಟ್ವಾಳ ತಾಲೂಕಿನ ಸೈಕಲ್‌ ವಿತರಣೆ ತಡೆಹಿಡಿಯಲಾಗಿತ್ತು. ಬಳಿಕ ಸರಕಾರದ ಆದೇಶದಂತೆ ಇಲಾಖೆ ಕಲ್ಲಡ್ಕ ಹಾಗೂ ಮುಡಿಪು ಶಾಲೆಗೆ ತೆರಳಿ ಸೈಕಲ್‌ಗ‌ಳ ಗುಣಮಟ್ಟ ಪರಿಶೀಲಿಸಿ ವರದಿ ನೀಡಿತ್ತು. ಉಡುಪಿ ಜಿಲ್ಲೆಯ ಕೆಲವು ಶಾಲೆಗಳಿಗೆ ಸೈಕಲ್‌ ಪೂರೈಕೆ ಆಗಿದ್ದು, ಇದರ ವಿತರಣೆ ತಡೆ ಹಿಡಿಯಲಾಗಿತ್ತು. ಈಗ ಅಂತಹ ಶಾಲೆಗಳಿಗೆ ವಿತರಿಸಲು ಸೂಚನೆ ನೀಡಲಾಗಿದೆ. ಇನ್ನು ಕೆಲವು ಶಾಲೆಗಳಿಗೆ ಸೈಕಲ್‌ ವಿತರಣೆಯಾಗಬೇಕಾಗಿದೆ.

ವಿತರಣೆ ಮಾಡುವ ಸಂದರ್ಭ, ಸಂಬಂಧಿಸಿದ ವಿಭಾಗೀಯ ಹಂತದ ಮತ್ತು ಜಿಲ್ಲಾ ಹಂತದ ಪರಿಶೀಲನ ತಂಡವು ಗುಣಮಟ್ಟದ ಬಗ್ಗೆ ಖಾತ್ರಿಪಡಿಸಿ ರಾಜ್ಯ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಸರಬರಾಜಿಗೆ ಬಾಕಿ ಇರುವ ಸೈಕಲ್‌ಗ‌ಳನ್ನು ವಿತರಣೆ ಮಾಡುವ ಪೂರ್ವದಲ್ಲಿ ಪ್ರತಿ ಶಾಲಾ ಹಂತದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು, ಸ್ಥಳೀಯ ಸರಕಾರಿ ನೌಕರರನ್ನು ಒಳಗೊಂಡ ತ್ರಿಸದಸ್ಯರ ಸಮಿತಿಯನ್ನು ರಚಿಸಿ, ಪರಿಶೀಲಿಸಿ, ಅದನ್ನು ನಮೂದಿಸಿ, ದೃಢೀಕರಿಸಿಕೊಳ್ಳಬೇಕು ಎಂದು ಸೂಚಿಸುವ ಮೂಲಕ ಗುಣಮಟ್ಟ ಪರಿಶೀಲನೆಯ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿ ಮತ್ತು ಇಲಾಖೆಗೆ ಹೊರಿಸಿದೆ.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.