ನಾಡಕಚೇರಿ ಸ್ಥಳಾಂತರಕ್ಕೆ ಸಿಬಂದಿ ನಿರಾಸಕ್ತಿ: ಆರೋಪ


Team Udayavani, Jan 18, 2019, 6:24 AM IST

18j-anuary-8.jpg

ಉಪ್ಪಿನಂಗಡಿ: ಅಪಾಯದ ಅಂಚಿನಲ್ಲಿರುವ ಹೋಬಳಿ ಮಟ್ಟದ ನಾಡ ಕಚೇರಿ ಸ್ಥಳಾಂತರಕ್ಕೆ ಸ್ಥಳವಕಾಶ ಒದಗಿಸಿಕೊಟ್ಟರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಕಿ ಉಳಿದಿದೆ.

ಇಲ್ಲಿನ ನಾಡ ಕಚೇರಿ ಸುಮಾರು 20 ಗ್ರಾಮಗಳಿಗೆ ಸಂಬಂಧಿಸಿದೆ. ಕಟ್ಟಡ ಹಳೆಯದಾಗಿದ್ದು, ಮುರಿದು ಬೀಳುವ ಆತಂಕ ಎದುರಾಗಿತ್ತು. ಕಚೇರಿ ಎತ್ತರವೂ ಕಡಿಮೆಯಿದ್ದು, ತುಸು ಎತ್ತರದ ವ್ಯಕ್ತಿಗಳು ಪ್ರವೇಶಿಸಿದರೆ ಫ್ಯಾನ್‌ ಬಡಿಯುವ ಭೀತಿಯಲ್ಲಿ ಬಗ್ಗಿಯೇ ನಿಲ್ಲಬೇಕು. ಕೈ ಎತ್ತಿದರೆ ಛಾವಣಿಯೇ ಬೀಳುವಂತಿದೆ. ಖುದ್ದು ಜಿಲ್ಲಾಧಿಕಾರಿಗಳೇ ಭೇಟಿ ನೀಡಿ, ಸ್ಥಳಾಂತರಕ್ಕೆ ಜಾಗ ಹುಡುಕುವಂತೆ ಸೂಚನೆಯನ್ನೂ ನೀಡಿದ್ದರು. ಆದರೆ, ಏಳೆಂಟು ತಿಂಗಳಿಂದ ಬದಲಿ ಸರಕಾರಿ ಕಟ್ಟಡಗಳಲ್ಲಿ ಸ್ಥಳಾಂತರಕ್ಕೆ ಕೊಠಡಿಗಳು ಸಿಗದೆ ಸಿಬಂದಿ ಕೈಚೆಲ್ಲಿದ್ದರು. ಇದನ್ನು ಮನಗಂಡ ಪುತ್ತೂರು ಸಹಾಯಕ ಆಯುಕ್ತರು ಪಕ್ಕದಲ್ಲೇ ಇರುವ ಗ್ರಾ.ಪಂ. ಕಟ್ಟಡದಲ್ಲಿ ಅವಕಾಶ ಕೋರಿ, ಲಿಖಿತ ಮನವಿ ಸಲ್ಲಿಸಿದ್ದರು.

ಸ್ಥಳೀಯ ಪಂಚಾಯತ್‌ ಆಡಳಿತ ಸಾಮಾನ್ಯ ಸಭೆಯಲ್ಲಿ ಸದಸ್ಯರ ಮೂಲಕ ಸಾಧಕ-ಬಾಧಕಗಳ ಸುದೀರ್ಘ‌ ಚರ್ಚೆ ನಡೆಸಿ, ಸ್ಥಳಾವಕಾಶಕ್ಕೆ ಅನುಮೋದನೆ ನೀಡುವ ಕುರಿತಾಗಿ ಸದಸ್ಯರು ಸರ್ವಾನುಮತದ ಸಮ್ಮತಿ ಸೂಚಿಸಿದ್ದರು. ಪಂಚಾಯತ್‌ನ ಒಪ್ಪಿಗೆ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿಕೊಟ್ಟು ತಿಂಗಳು ಕಳೆದಿದೆ. ಗ್ರಾಮ ಕರಣಿಕರಿಂದ ತೊಡಗಿ ಹಿರಿಯ ಅಧಿಕಾರಿಗಳ ವರೆಗೆ ಕೊಠಡಿಗಳ ಪರಿಶೀಲನೆಯಲ್ಲೇ ಕಾಲಹರಣವಾಗಿದೆ. ಆದರೆ, ಕಚೇರಿಯನ್ನು ಇನ್ನೂ ಸ್ಥಳಾಂತರಿಸದೇ ಇರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕಚೇರಿಯನ್ನು ಶೀಘ್ರ ಸ್ಥಳಾಂತರಿಸಿ ಸಿಬಂದಿಯ ಆತಂಕ ದೂರವಾಗಿ, ಗ್ರಾಹಕರಿಗೆ ನಿಶ್ಚಿಂತೆಯಿಂದ ಸೇವೆ ನೀಡುವಂತಾಗಲಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅನುದಾನ ನಿರೀಕ್ಷೆ
ನಾಡಕಚೇರಿಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಕಳೆದ ಒಂದು ವರ್ಷದಿಂದ ಸರಕಾರಿ ಕಟ್ಟಡವನ್ನು ಹುಡುಕುತ್ತಿದ್ದೆವು. ಆದರೆ, ಮೇಲಧಿಕಾರಿಗಳ ಆದೇಶದಂತೆ ಉಪ್ಪಿನಂಗಡಿ ಗ್ರಾ.ಪಂ.ಗೆ ಸ್ಥಳಾವಕಾಶ ಕೋರಿ ಮನವಿ ಸಲ್ಲಿಸಿದ್ದು, ಅದರಂತೆ ಮನವಿಗೆ ಸ್ಪಂದಿಸಿದ ಪಂಚಾಯತ್‌ ಸ್ಥಳಾವಕಾಶ ಒದಗಿಸುವ ಭರವಸೆ ನೀಡಿತ್ತು. ಸ್ಥಳ ಪರಿಶೀಲನೆ ಮಾಡಿದಾಗ ಗ್ರಾ.ಪಂ. ಆಡಳಿತ ಮೌಖಿಕವಾಗಿ ಹಳೆಯ ಪೀಠೊಪಕರಣಗಳನ್ನು ವಿಲೇವಾರಿ ಮಾಡಿ ಹಾಗೂ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಿ ಪಂಚಾಯತ್‌ಗೆ ಸ್ಥಳಾಂತರಿಸಿ ಎಂದು ಹೇಳಿತ್ತು. ಪೀಠೊಪಕರಣ ವಿಲೇವಾರಿ ಹಾಗೂ ಸಿಬಂದಿ ಹುದ್ದೆ ಭರ್ತಿ ತಯಾರಿಯಲ್ಲಿದ್ದು, ಅನುದಾನದ ನಿರೀಕ್ಷೆಯಲ್ಲಿದ್ದೇವೆ.
 – ಸದಾಶಿವ
ನಾಡಕಚೇರಿ ಸಹಾಯಕ ಉಪತಹಶೀಲ್ದಾರ್‌

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.