ಹೂವಿನ ರಾಶಿಯಲ್ಲಿ ಕಂಗೊಳಿಸಿದ ಪೆರುವಾಜೆ ಜಲದುರ್ಗಾ ದೇವಾಲಯ


Team Udayavani, Jan 19, 2019, 5:00 AM IST

19-january-1.jpg

ಸುಳ್ಯ : ಜಾತ್ರಾ ಸಂಭ್ರಮದಲ್ಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನವಿಡಿ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ-ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಅಬ್ಟಾ..ಅಬ್ಟಾ.. ಅನ್ನುವಷ್ಟು ಹೂವಿನ ರಾಶಿಯೇ ತುಂಬಿದೆ. ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ ಸೇವಾ ರೂಪದಲ್ಲಿ ಈ ಹೂವಿನ ಅಲಂಕಾರ ಅರ್ಪಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಅದರ ಪ್ರಮಾಣ ಹೆಚ್ಚಾಗುತ್ತಿರುವುದಿಂದ ಇಡಿ ದೇವಾಲಯದಲ್ಲಿ ಹೂವುಗಳ ತೋಟವೇ ಮೈದಳೆದಂತಿದೆ.

ಭಕ್ತನ ಭಕ್ತಿಯ ಸೇವೆ
ಪೆರುವಾಜೆ ಶ್ರೀ ಜಲದುರ್ಗಾ ದೇವಿಯ ಭಕ್ತ, ಪೆರುವಾಜೆ ಗ್ರಾಮದ ನಿವಾಸಿ, ಮಂಗಳೂರಿನ ಐರಿಷ್‌ ಫ್ಲವರ್‌ ಸ್ಟಾಲ್‌ ಮಾಲಕ ಉಮೇಶ್‌ ಕೊಟ್ಟೆಕಾೖ ಮತ್ತು ಅವರ ಮನೆ ಮಂದಿ ಪ್ರತಿ ವರ್ಷ ದೇವಸ್ಥಾನವನ್ನು ಹೂವಿನಿಂದ ಅಲಂಕರಿಸುತ್ತಾರೆ. ಹಲವು ವರ್ಷಗಳಿಂದ ಸೇವೆ ಮಾಡುವ ಉಮೇಶ್‌ ಮತ್ತು ಅವರ ಕುಟುಂಬ ಶ್ರೀ ಕ್ಷೇತ್ರದ ಪರಮ ಭಕ್ತರು.

ಉಮೇಶ್‌ ಅವರು ಹೂವಿನ ಮಾರುಕಟ್ಟೆಯಲ್ಲಿ ಕೆಲಸ ಆರಂಭಿಸಿ, ಬಳಿಕ ಮಂಗಳೂರು ಮತ್ತು ಉಡುಪಿಯಲ್ಲಿ ಐರಿಷ್‌ ಫ್ಲವರ್‌ ಸ್ಟಾಲ್‌ ಸ್ವಂತ ಮಾರಾಟ ಕೇಂದ್ರ ಸ್ಥಾಪಿಸಿದ್ದರು. 100ಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಿದ್ದಾರೆ. ವ್ಯವಹಾರದಲ್ಲಿ ಯಶಸ್ಸು ಗಳಿಸಿರುವ ಇವರು, ಇದಕ್ಕೆ ಜಲದುರ್ಗಾದೇವಿಯ ಕೃಪೆಯೇ ಕಾರಣ ಎಂದು ಭಕ್ತನ ನೆಲೆಯಲ್ಲಿ ದೇವಿಗೆ ಹೂವಿನ ಅಲಂಕಾರ ಮಾಡುತ್ತಾರೆ.

8 ಲಕ್ಷ ರೂ. ಮೌಲ್ಯದ ಹೂವು ಬಳಕೆ
2006ರಿಂದ ಈ ಸೇವೆ ಆರಂಭಿಸಿದ್ದು, 2016ರ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕೂಡ ದೇವಾಲಯವನ್ನು ಹೂವಿನಿಂದ ಶೃಂಗರಿಸಿದ್ದರು. ಪ್ರತಿ ವರ್ಷವು ಹೆಚ್ಚು-ಹೆಚ್ಚು ಹೂವು ಅರ್ಪಿಸುತ್ತಾರೆ. ಈ ಬಾರಿಯ ಜಾತ್ರೆಗೆ ಮಾರುಕಟ್ಟೆ ಮೌಲ್ಯದ ಪ್ರಕಾರ 7ರಿಂದ 8 ಲಕ್ಷ ರೂ.ಮೌಲ್ಯದ ಹೂವು ಬಳಸಲಾಗಿದೆ.

ಸ್ಟಾಲ್‌ ಮಾಲಕರಾದ ಕಾರಣ, ರಖಂ ದರದಲ್ಲಿ ಇವರಿಗೆ ಹೂವು ಸಿಕ್ಕಿದೆ. ಸೇವಂತಿಗೆ, ಚೆಂಡು ಹೂವು – ಹೀಗೆ ಹಲವು ವಿಧದ ಹೂವುಗಳಿವೆ. ಇವರು ಬರಿ ಹೂವು ಕೊಟ್ಟು ಸುಮ್ಮನಾಗುವುದಿಲ್ಲ. ಬದಲಿಗೆ ತಮ್ಮ ಸ್ಟಾಲ್‌ನ ಕಾರ್ಮಿಕರನ್ನು ಕಳುಹಿಸಿ ಅಲಂಕಾರದ ಕೆಲಸ ನಿರ್ವಹಿಸುತ್ತಾರೆ. ಹೂವಿನಿಂದ ಹಿಡಿದು, ಅದರ ಜೋಡಣೆಗೆ ತಗಲುವ ಎಲ್ಲ ಖರ್ಚುಗಳನ್ನು ತಾವೇ ಭರಿಸುತ್ತಾರೆ.

ಹೂವುಗಳ ರಾಶಿಯಿಂದ ಸೇವೆ ಬೆಳಕಿಗೆ
ಪ್ರಚಾರ ಬಯಸದ ಉಮೇಶ್‌ ಕೊಟ್ಟೆಕಾೖ ಅವರ ಸೇವೆ ಹೂವಿನ ರಾಶಿಗಳಿಂದ ಗಮನ ಸೆಳೆದಿದೆ. ಇಷ್ಟೊಂದು ಹೂವು ಎಲ್ಲಿಂದ ಎಂಬ ಭಕ್ತರ ಕಣ್ಣರಳಿಸುವ ನೋಟಕ್ಕೆ ಉಮೇಶ್‌ ಕೊಟ್ಟೆಕಾೖ ಅವರ ಸೇವೆ ಬೆಳಕಿಗೆ ಬಂದಿದೆ. ‘ನಾನು ಇಲ್ಲಿನ ಭಕ್ತ. ಪ್ರತಿ ವರ್ಷ ಭಕ್ತಿಯಿಂದ ಹೂವು ಅರ್ಪಿಸುತ್ತೇನೆ. ಜಾತ್ರೆಯ ದಿನ ಇಲ್ಲೇ ಇರುತ್ತೇನೆ’ ಎನ್ನುತ್ತಾರೆ ಹೂವಿನ ಸೇವೆಗೈದ ಉಮೇಶ್‌ ಕೊಟ್ಟೆಕಾೖ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.