ಕೊಳವೆ ಬಾವಿಯಿಂದ ಚಿಮ್ಮಿದ ನೀರು: ವೀಡಿಯೋ ವೈರಲ್‌


Team Udayavani, Jan 20, 2019, 6:03 AM IST

20-january-7.jpg

ಪುತ್ತೂರು : ಇಲ್ಲಿನ ಪಾಪೆಮಜಲು ಗರಡಿಯಲ್ಲಿ ಬೋರ್‌ವೆಲ್‌ ಕೊರೆಸುವಾಗ ನೀರು ಕಾರಂಜಿ ಯಂತೆ ಚಿಮ್ಮಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಎರಡು ವರ್ಷಗಳ ಹಿಂದೆ ಪಾಪೆಮಜಲು ಗರಡಿಯ ನೇಮದ ಸಂದರ್ಭ ಕೊಳವೆ ಬಾವಿ ಕೊರೆಯುವ ಬಗ್ಗೆ ಪ್ರಶ್ನೆ ಕೇಳಲಾಯಿತು. ಆಗ ಬೈದೇರುಗಳು ಆಯುಧವನ್ನು ನೆಲಕ್ಕೆ ಚುಚ್ಚಿ, ನೀರಿರುವ ಸೆಲೆಯನ್ನು ಗುರುತಿಸಿದ್ದರು. ಇದೀಗ ಕೊಳವೆ ಬಾವಿ ಕೊರೆಸಿದ್ದು, 4 ಇಂಚಿನಷ್ಟು ನೀರು ಲಭ್ಯವಾಗಿದ್ದು ಮಾತ್ರವಲ್ಲ, ಭಾರೀ ಎತ್ತರಕ್ಕೆ ನೀರು ಚಿಮ್ಮಿ ಸುದ್ದಿಯಾಗಿದೆ. ಇದು ಕೋಟಿ – ಚೆನ್ನಯರ ಕಾರಣಿಕ ಎಂಬ ಬಗ್ಗೆ ಚರ್ಚೆ ಆಗುತ್ತಿದೆ.

ಬೋರ್‌ವೆಲ್‌ ಕೊರೆಸುವಾಗ 280 ಅಡಿ ಆಳದಲ್ಲೇ ನೀರು ಸಿಕ್ಕಿತು. ಹಾಗಿದ್ದೂ ಬೋರ್‌ವೆಲ್‌ ಕೊರೆಯುವುದನ್ನು ಮುಂದು ವರಿಸಲಾಯಿತು. ನೀರು ರಭಸವಾಗಿ ಮೇಲೆ ಚಿಮ್ಮಲಾರಂಭಿಸಿತು. ನೀರಿನ ರಭಸ ಹೆಚ್ಚಿದ್ದರಿಂದ 340 ಅಡಿಯಲ್ಲಿ ಬೋರ್‌ ತೆಗೆಸುವುದನ್ನು ನಿಲ್ಲಿ ಸಲಾಗಿದೆ. ಇದು ಕೋಟಿ – ಚೆನ್ನಯರ ತೀರ್ಥ ಎಂಬ ಬರಹ ದೊಂದಿಗೆ ವೀಡಿಯೋ ವೈರಲ್‌ ಆಗುತ್ತಿದೆ.

ಕೋಟಿ ಚೆನ್ನಯರು ಪಡುಮಲೆ ಯಿಂದ ಇಳಿದು ಎಣ್ಮೂರಿನತ್ತ ಹೋಗುವಾಗ ಪಾಪೆಮಜಲು ಪ್ರದೇಶ ದಲ್ಲಿ ಮಕ್ಕಳೊಂದಿಗೆ ಆಟವಾಡಿದ್ದಾರೆ. ಒಂದು ರಾತ್ರಿ ಈ ಪ್ರದೇಶದಲ್ಲಿ ತಂಗಿದ್ದರು ಎಂದು ಹೇಳಲಾಗಿದೆ.

ಕೋಟಿ – ಚೆನ್ನಯರ ತೀರ್ಥ
2017ರಲ್ಲಿ ನೇಮ ನಡೆದಾಗ ಬೋರ್‌ವೆಲ್‌ ಕೊರೆಸುವ ಬಗ್ಗೆ ಕೇಳಿ ಕೊಂಡಿದ್ದೆವು. ಈ ವೇಳೆ ಕೋಟಿ ನರ್ತಕ ಒಂದು ಜಾಗಕ್ಕೆ ಬಂದು ಸುರ್ಯ ಹಾಕಿದರು. ಈ ವರ್ಷ ಬೋರ್‌ ಕೊರೆಸಿದ್ದೇವೆ. 4 ಇಂಚಿನಷ್ಟು ನೀರು ಸಿಕ್ಕಿದ್ದು, ಇದು ಕೋಟಿ – ಚೆನ್ನಯರ ತೀರ್ಥ ಎಂದೇ ಹೇಳಬಹುದು.
– ಎಂ.ಎಸ್‌. ಮುಕುಂದ,
ಆಡಳಿತ ಮೊಕ್ತೇಸರ, ಪಾಪೆಮಜಲು ಗರಡಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.