ಪುತ್ತೂರು: ಅಗಲಿದ ಯಜಮಾನನಿಗೆ ಅರ್ಥಪೂರ್ಣ ಶೃದ್ಧಾಂಜಲಿ ನೀಡಿದ ಕೋಣಗಳು
Team Udayavani, Jan 20, 2019, 11:36 AM IST
ಪುತ್ತೂರು: ಶನಿವಾರ ಆರಂಭವಾದ ಪುತ್ತೂರಿನ 26 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಭಾನುವಾರ ಸಂಜೆಯ ವೇಳೆಗೆ ವಿಜೃಂಭಣೆಯಿಂದ ಸಂಪನ್ನವಾಯಿತು. ಹಗ್ಗ ಹಿರಿಯ ವಿಭಾಗದಲ್ಲಿ ಸ್ಪರ್ಧಿಸಿದ್ದ ಮೂಡಬಿದ್ರೆ ಕರಿಂಜೆ ವಿನು ವಿಶ್ವನಾಥ ಶೆಟ್ಟರ ಕೋಣಗಳು ಪ್ರಥಮ ಸ್ಥಾನ ಪಡೆದು ಇತ್ತೀಚಿಗೆ ಅಗಲಿದ ಪ್ರೀತಿಯ ಯಜಮಾನನಿಗೆ ಅರ್ಥಪೂರ್ಣ ಶ್ರದ್ಧಾಂಜಲಿ ನೀಡಿದವು.
ಕಂಬಳ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದ ವಿನು ವಿಶ್ವನಾಥ್ ಶೆಟ್ಟರು, ಇತ್ತೀಚಿಗೆ ಹೊಕ್ಕಾಡಿಗೋಳಿ ಕಂಬಳದಿಂದ ಹಿಂದೆ ಬರುವ ಸಮಯದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದರು. ಹೊಕ್ಕಾಡಿಗೋಳಿ ಕಂಬಳದಲ್ಲಿ ವಿನು ವಿಶ್ವನಾಥ್ ಶೆಟ್ಟರ ಕೋಣಗಳು ಪ್ರಥಮ ಸ್ಥಾನ ಪಡೆದಿದ್ದವು. ಆದರೆ ಆ ಸಂತೋಷ ಹೆಚ್ಚು ಸಮಯ ಉಳಿದಿರಲಿಲ್ಲ. ನಂತರದ ಎರಡು ಕಂಬಳದಲ್ಲಿ ಈ ಕೋಣಗಳು ಭಾಗವಹಿಸಿರಲಿಲ್ಲ.
ಈಗ ಪುತ್ತೂರು ಕಂಬಳದಲ್ಲಿ ವಿನು ವಿಶ್ವನಾಥ ಶೆಟ್ರ ಕೋಣಗಳು ಪ್ರಥಮ ಸ್ಥಾನ ಪಡೆದು ಸಾಕಿ ಸಲಹಿದ್ದ ಪ್ರೀತಿಯ ಯಜಮಾನನ ಹೆಸರನ್ನು ಮತ್ತೆ ಮೊಳಗುವಂತೆ ಮಾಡಿವೆ.
ಪುತ್ತೂರು ಕಂಬಳ ಕೂಟದಲ್ಲಿ ಒಟ್ಟು 133 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ: 3 ಜೊತೆ, ಅಡ್ಡಹಲಗೆ: 4 ಜೊತೆ, ಹಗ್ಗ ಹಿರಿಯ: 18 ಜೊತೆ, ನೇಗಿಲು ಹಿರಿಯ: 22 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 72 ಜೊತೆ
ಫಲಿತಾಂಶ
ಕನೆಹಲಗೆ: ರಾಕೇಶ್ ಮಲ್ಲಿ
ಓಡಿಸಿದವರು: ನಾರಾವಿ ಯುವರಾಜ್ ಜೈನ್
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ವಾಮಂಜೂರು ತಿರುವೈಲು ಗುತ್ತು ನವೀನ್ಚಂದ್ರ ಆಳ್ವ
ಓಡಿಸಿದವರು: ಬೈಂದೂರು ಬಾಸ್ಕರ ದೇವಾಡಿಗ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಗ್ಗ ಹಿರಿಯ:
ಪ್ರಥಮ: ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ “B”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ಹಗ್ಗ ಕಿರಿಯ
ಪ್ರಥಮ: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಕಾಂತಾವರ ಅಂಬೋಡಿಮಾರ್ ರಘನಾಥ ದೇವಾಡಿಗ “A”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ನೇಗಿಲು ಹಿರಿಯ
ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “A”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.M.ಶೆಟ್ಟಿ
ದ್ವಿತೀಯ: ಬೋಳದ ಗುತ್ತು ಜಗದೀಶ್ ಶೆಟ್ಟಿ “B”
ಓಡಿಸಿದವರು: ಮರೋಡಿ ಶ್ರೀಧರ್
ನೇಗಿಲು ಕಿರಿಯ
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ
ಓಡಿಸಿದವರು: ನತೀಶ್ ಬಾರಾಡಿ
ದ್ವಿತೀಯ: ಬಾರ್ಯ ಬಳ್ಳಿ ದಡ್ಯ ಗುತ್ಯಂಡ ಪರಮೇಶ್ವರ ದೊಂಬಯ್ಯ ಗೌಡ
ಓಡಿಸಿದವರು: ಮರೋಡಿ ಶ್ರೀಧರ್
ಅಡ್ಡಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಓಡಿಸಿದವರು: ಮಂದಾರ್ತಿ ಶಿರೂರು ಮುದ್ದುಮನೆ ಗೋಪಾಲ ನಾಯ್ಕ್
ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಓಡಿಸಿದವರು: ನಾರಾವಿ ಯುವರಾಜ್ ಜೈನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ