ಬೆಳೆ ಸಮೀಕ್ಷೆ ಶೇ. 70 ಸಂಭಾವನೆ ಬಿಡುಗಡೆ


Team Udayavani, Jan 21, 2019, 1:30 AM IST

bele-sala.jpg

ಸುಳ್ಯ: ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡ ಯುವಕರಿಗೆ ಬಾಕಿಯಾಗಿದ್ದ ಸಂಭಾವನೆಯನ್ನು ನೀಡಲು ಸರಕಾರ ಕೊನೆಗೂ ನಿರ್ಧರಿಸಿದೆ. ಆರಂಭದಲ್ಲಿ ಶೇ. 70ರಷ್ಟು ಹಣ ಖಾತೆಗೆ ಪಾವತಿಯಾಗಲಿದೆ, ಬಳಿಕ ಉಳಿದ ಹಣ ಕೈ ಸೇರಲಿದೆ.

ರಾಜ್ಯ ಸರಕಾರ ಎಲ್ಲ ಜಿಲ್ಲೆಗಳ ಬಹುತೇಕ ಹಳ್ಳಿಗಳಲ್ಲಿ ಮುಂಗಾರು ಪೂರ್ವ ಬೆಳೆ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಗ್ರಾಮ ಲೆಕ್ಕಿಗರ ಜತೆ ಸಮೀಕ್ಷೆ ವೇಳೆ ಸ್ಥಳೀಯ ನಿರುದ್ಯೋಗಿ ಯುವಕರನ್ನು ಬಳಸಿಕೊಂಡಿತ್ತು. ಈ ಯುವಕರಿಗೆ ತರಬೇತಿ ಕೂಡ ನೀಡಲಾಗಿತ್ತು.

ಬಹುತೇಕ ಹಳ್ಳಿಗಳಲ್ಲಿ ಯುವಕರು ಕೃಷಿಕರ ಮನೆಗಳಿಗೆ ತೆರಳಿ ಮೊಬೈಲ್‌ ಆ್ಯಪ್‌ ಬಳಸಿ ಸರ್ವೆ ನಡೆಸಿದ್ದರು. ಪ್ರತಿ ಸರ್ವೆ ನಂಬರಿನ ಸಮೀಕ್ಷೆಗೆ ತಲಾ 10 ರೂ.ನಂತೆ ಸಂಭಾವನೆ ನೀಡಲು ಸರಕಾರ ನಿಗದಿಪಡಿಸಿತ್ತು. ಆದರೆ ಸಮೀಕ್ಷ ಮುಗಿದು 3 ತಿಂಗಳು ಕಳೆದರೂ ಸಂಭಾವನೆ ಸಿಕ್ಕಿರಲಿಲ್ಲ.

“ಉದಯವಾಣಿ’ಯಲ್ಲಿ ವರದಿ ಪ್ರಕಟ
ಸಂಭಾವನೆ ಸಿಗದ ಕುರಿತು ಜ. 16ರ “ಉದಯವಾಣಿ’ಯಲ್ಲಿ ವಿಸ್ತೃತ ವರದಿ ಪ್ರಕಟಿಸಿ ಸರಕಾರ ಮತ್ತು ಅಧಿಕಾರಿಗಳ ಗಮನ ಸೆಳೆದಿತ್ತು. ಈಗ ಸರಕಾರ ಸಂಭಾವನೆ ನೀಡಲು ಒಪ್ಪಿದೆ. ಆದರೆ ಪೂರ್ಣ ಪ್ರಮಾಣಕ್ಕೆ ಬದಲಾಗಿ ಶೇ. 70ರಷ್ಟು ಮಾತ್ರ ಆರಂಭದಲ್ಲಿ ನೀಡಲಾಗುತ್ತಿದೆ. ಮುಂಗಾರು ಬೆಳೆ ಸಮೀಕ್ಷೆ ಮುಗಿದಿದ್ದರೂ ಕೆಲವು ಭಾಗಗಳಲ್ಲಿ ಪರಿಪೂರ್ಣವಾಗಿಲ್ಲ, ಈ ಕಾರಣಕ್ಕೆ ಸಮೀಕ್ಷೆ ಪೂರ್ಣವಾದ ಬಳಿಕ ಪೂರ್ತಿ ಸಂಭಾವನೆಯನ್ನು ನೀಡಲಾಗುವುದು. ಅಲ್ಲಿಯ ತನಕ ಶೇ. 30ರಷ್ಟು ಸಂಭಾವನೆಯನ್ನು ತಡೆಹಿಡಿಯಲಾಗುತ್ತದೆ ಎಂದು ಕಂದಾಯ ಇಲಾಖೆ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣ ಹುಡುಕುತ್ತಿದ್ದಾರೆ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮೀಕ್ಷಕ ಯುವಕರು, ನಮಗೆ ವಹಿಸಿದ ಕಾರ್ಯವನ್ನು ಪೂರ್ಣಗೊಳಿಸಿ ಕೊಟ್ಟಿದ್ದೇವೆ. ಬಿಸಿಲಿಗೆ ಓಡಾಡಿಸಿ ದಿನಕ್ಕೆ ಇಂತಿಷ್ಟು ಮನೆಗಳ ಸಮೀಕ್ಷೆ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದ ಕಂದಾಯ ಅಧಿಕಾರಿಗಳು ಸಂಭಾವನೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ವಿಳಂಬಕ್ಕೆ ಸಬೂಬು ಹುಡುಕುತ್ತಿದ್ದಾರೆ. ಇದು ಸರಿಯಲ್ಲ. ಈ ತಾರತಮ್ಯದಿಂದ ಬೇಸರ ಆಗಿದೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ. 

ವಾರದೊಳಗೆ  ಹಣ ಖಾತೆಗೆ
ಸರಕಾರ ಹಣ ಬಿಡುಗಡೆ ಗೊಳಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಯುವಕರ ಖಾತೆಗಳಿಗೆ ವಾರದೊಳಗೆ ಸಂಭಾವನೆ ಹಣ ಪಾವತಿಯಾಗಲಿದೆ.
– ಸಂತೋಷ್‌ ಕುಮಾರ್‌, ತಹಶೀಲ್ದಾರ್‌, ಸುಳ್ಯ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.