ಗುರಿ ಸಾಧಿಸಲಿ, ಪ್ರಯೋಜನ ಸಿಗಲಿ


Team Udayavani, Jan 23, 2019, 4:37 AM IST

23-january-1.jpg

ಪುತ್ತೂರು : ಸ್ವಚ್ಛ ಭಾರತ್‌ ಮಿಷನ್‌ ಅಡಿ ಪರಿಸರ ನೈರ್ಮಲ್ಯ ಕಾಪಾ ಡುವ ನಿಟ್ಟಿನಲ್ಲಿ ಗ್ರಾ.ಪಂ. ಮಟ್ಟದಲ್ಲಿ ಘನ ಹಾಗೂ ದ್ರವ ತ್ಯಾಜ್ಯಗಳ ಘಟಕ ನಿರ್ಮಾಣಕ್ಕೆ ಸರಕಾರ ಮುಂದಾಗಿದೆ. ಆದರೆ ಗ್ರಾಮೀಣ ಭಾಗದ ಗ್ರಾ.ಪಂ. ಗಳಲ್ಲಿ ಇದರ ಅಸ್ತಿತ್ವ, ಅಗತ್ಯದ ಕುರಿತು ಚರ್ಚೆಗಳೂ ಹುಟ್ಟಿಕೊಂಡಿವೆ. ಒಂದು ಘಟಕಕ್ಕಾಗಿ ಸರಕಾರ 20 ಲಕ್ಷ ರೂ. ವೆಚ್ಚ ಮಾಡುತ್ತಿದ್ದು, ಇದರಲ್ಲಿ 15 ಲಕ್ಷ ರೂ. ಘಟಕ ನಿರ್ಮಾಣಕ್ಕೆ ಹಾಗೂ 5 ಲಕ್ಷ ರೂ. ವಾಹನ ಖರೀದಿಗೆಂದು ವಿಂಗಡಿಸಲಾಗಿದೆ.

ತೀರಾ ಗ್ರಾಮೀಣಕ್ಕೆ ಬೇಕೇ?
ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಹೊಂದಿ ರುವ ಗ್ರಾ.ಪಂ.ಗಳಲ್ಲಿ ತ್ಯಾಜ್ಯ ವಿಲೇವಾರಿ ಕಷ್ಟಕರ. ಅದಕ್ಕಾಗಿ ಘನ, ದ್ರವ ತ್ಯಾಜ್ಯ ಘಟಕಗಳ ನಿರ್ಮಾಣ ಅಗತ್ಯವಾಗಿದೆ. ಆದರೆ ಗ್ರಾಮೀಣ ಭಾಗದ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಇಂತಹ ತ್ಯಾಜ್ಯ ಸಮಸ್ಯೆಗಳು ಕಂಡುಬರುತ್ತಿಲ್ಲ. ಇಂತಹ ಕಡೆಗಳಲ್ಲಿ ಭಾರೀ ವೆಚ್ಚದ ಘಟಕ ಸ್ಥಾಪನೆ ಅಗತ್ಯವಿದೆಯೇ ಎನ್ನುವ ಚರ್ಚೆಗಳು ಸಾರ್ವಜನಿಕರಲ್ಲಿವೆ. ತೀರಾ ಗ್ರಾಮೀಣದ ಗ್ರಾ.ಪಂ.ಗಳಲ್ಲಿ 10 ರೂ. ವೆಚ್ಚದ ಕಸ ಸಂಗ್ರಹಣೆಯ ವಿಲೇವಾರಿಗೆ 100 ರೂ. ವೆಚ್ಚ ಮಾಡುವ ಯೋಜನೆ ಇದಾಗಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ತಾಲೂಕಿನ ಉಪ್ಪಿನಂಗಡಿ, ಕಡಬ, ನೆಲ್ಯಾಡಿ, ಒಳಮೊಗ್ರು, ಕಬಕ, ನೆಕ್ಕಿಲಾಡಿ ಮೊದಲಾದ ಗ್ರಾ.ಪಂ.ಗಳು ತ್ಯಾಜ್ಯ ಸಮಸ್ಯೆಯ ಸಂಕಟ ಅನುಭವಿಸುತ್ತಿದ್ದು, ಇಂತಹ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಘನ, ದ್ರವ ತ್ಯಾಜ್ಯ ಘಟಕಗಳ ನಿರ್ಮಾಣದ ಅನಿವಾರ್ಯತೆ ಇದೆ. ಆದರೆ ಗ್ರಾಮೀಣ ಭಾಗದ ಬಹುತೇಕ ಗ್ರಾ.ಪಂ.ಗಳಲ್ಲಿ ಇಂತಹ ಪರಿಸ್ಥಿತಿ ಸದ್ಯಕ್ಕಂತೂ ಇಲ್ಲ. ಹಳ್ಳಿಗಳಲ್ಲಿ ಕಸ ಉತ್ಪತ್ತಿಯಾದರೆ ತೆಂಗು, ಅಡಿಕೆ ಬುಡಗಳಿಗೆ ಗೊಬ್ಬರ ಸಹಿತ ಸಾಂಪ್ರದಾಯಿಕ ವಿಲೇವಾರಿ ಕ್ರಮ ಅನುಸರಿಸಲಾಗುತ್ತಿದೆ. ಇರುವ ಕೆಲವೇ ಅಂಗಡಿಗಳ ಅತ್ಯಲ್ಪ ಕಸ ಸಂಗ್ರಹಣೆ ಮಾಡಲಾಗುತ್ತಿದೆ.

ಎಲ್ಲವೂ ಗುರಿ ಸಾಧನೆಗಾಗಿ
ಗುರಿ ಸಾಧಿಸುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಅಗತ್ಯವಿಲ್ಲದ ಗ್ರಾ.ಪಂ. ವ್ಯಾಪ್ತಿಗಳಿಗೆ ಅಧ್ಯಯನ ನಡೆಸದೆ ಘಟಕಗಳನ್ನು ಅಳವಡಿಸುವ ಪ್ರಯತ್ನ ಜಿಲ್ಲಾಮಟ್ಟದ ಅಧಿಕಾರಿಗಳ ಒತ್ತಡ ನಡೆಯುತ್ತಿದೆ. ಗ್ರಾ.ಪಂ. ಅಧಿಕಾರಿ ವರ್ಗ ಹಾಗೂ ಆಡಳಿತ ವ್ಯವಸ್ಥೆಗೆ ‘ಅನಪೇಕ್ಷಿತ’ ಸಂಕಟ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪಗಳೂ ವ್ಯಕ್ತವಾಗುತ್ತಿವೆ.

ಪ್ರಾಯೋಗಿಕವಾಗಿ ನಡೆಯಲಿ
ತೀರಾ ಅಗತ್ಯವಾಗಿರುವ ಕಡೆಗಳಲ್ಲಿ ಈ ಘನ ಹಾಗೂ ದ್ರವ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಪ್ರಾಯೋಗಿಕವಾಗಿ ಇದನ್ನು ಜಾರಿಗೆ ತರಬೇಕಾದ ಚಿಂತನೆಗಳು ಜಿ.ಪಂ. ಮಟ್ಟದಿಂದ ನಡೆಯಬೇಕು. ಕಸ ಸಂಗ್ರಹಣೆ ಇಲ್ಲದ ಗ್ರಾ.ಪಂ.ಗಳಲ್ಲಿ ಈ ಘಟಕ ನಿರ್ಮಾಣ ಮಾಡಿ ಅನಂತರ ‘ಅನಾಥ’ವಾಗುವ ಸ್ಥಿತಿ, ಸರಕಾರಿ ಹಣ ಪೋಲು ಮಾಡುವುದು ಸರಿಯಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯ.

ಎಲ್ಲೆಲ್ಲಿ ಜಾರಿ?
ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ, ಆಲಂಕಾರುಗಳಲ್ಲಿ ಘಟಕ ನಿರ್ಮಾಣವಾಗಿದೆ. ಗೋಳಿತೊಟ್ಟು, ಹಿರೇಬಂಡಾಡಿ, ಕೊಳ್ತಿಗೆ, ಮರ್ಧಾಳ, ನೆಲ್ಯಾಡಿ, ಸವಣೂರು ಗ್ರಾ.ಪಂ.ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಕೆಲಸ ನಡೆಯುತ್ತಿದೆ. ಒಳಮೊಗ್ರು, ಪಾಣಾಜೆ, ಕೊೖಲ, ನೆಕ್ಕಿಲಾಡಿಗಳಲ್ಲಿ 20 ಲಕ್ಷ ರೂ. ಅಂಗೀಕಾರಕ್ಕೆ ಕಳುಹಿಸಲಾಗಿದೆ. ಉಳಿದ 13 ಗ್ರಾ.ಪಂ. ಗಳಾದ ಬಜತ್ತೂರು, ಅರಿಯಡ್ಕ, ಆರ್ಯಾಪು, ಬಡಗನ್ನೂರು, ಮುಂಡೂರು, ಕೆಯ್ಯೂರು, ಕೋಡಿಂಬಾಡಿ, ನರಿಮೊಗರು, ನೆಟ್ಟಣಿಗೆ ಮುಟ್ನೂರು, ನಿಡ್ಪಳ್ಳಿ, ಪೆರಾಬೆ ಮತ್ತು ಕಬಕ ಗ್ರಾ.ಪಂ.ಗಳ ಹೆಸರನ್ನು ಘಟಕ ನಿರ್ಮಾಣಕ್ಕೆ ಶಿಫಾರಸು ಮಾಡಲಾಗಿದೆ.

ಸ್ವಚ್ಛತೆಯ ದೃಷ್ಟಿಯಿಂದ ಜಾರಿ
ಸ್ವಚ್ಛತೆಯ ದೃಷ್ಟಿಯಿಂದ ಜಾರಿಗೊಂಡಿರುವ ಈ ಯೋಜನೆಯಲ್ಲಿ ಪೇಟೆಗಳು ಇರುವ ಮತ್ತು ತ್ಯಾಜ್ಯಗಳು ಹೆಚ್ಚು ಉತ್ಪಾದನೆಯಾಗುವ ಕಡೆಗಳ ಗ್ರಾ.ಪಂ.ಗಳನ್ನು ಪರಿಗಣಿಸಲಾಗುತ್ತಿದೆ. ಕೆಲ ಗ್ರಾ.ಪಂ.ಗಳಲ್ಲಿ ಪೂರ್ಣಗೊಂಡಿದ್ದರೆ, ಇನ್ನು ಕೆಲವು ಗ್ರಾ.ಪಂ.ಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಮತ್ತೆ ಕೆಲವು ಕಡೆ ಜಾಗ ಗುರುತಿಸಲಾಗಿದೆ.
-ನವೀನ್‌ ಭಂಡಾರಿ,
ಸಹಾಯಕ ನಿರ್ದೇಶಕರು, ತಾ.ಪಂ. ಪುತ್ತೂರು

ಎಲ್ಲ ಕಡೆಯೂ ಅಸಾಧ್ಯ
ಪುತ್ತೂರು ತಾಲೂಕಿನ ಎಲ್ಲ ಗ್ರಾ.ಪಂ.ಗಳಿಗೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುವುದು ಕಷ್ಟ. ಆದ್ದರಿಂದ ಸಣ್ಣ ಗ್ರಾ.ಪಂ.ಗಳ ತ್ಯಾಜ್ಯವನ್ನು ಸಮೀಪದ ಗ್ರಾ.ಪಂ.ನ ಘಟಕಕ್ಕೆ ಕಳುಹಿಸುವ ವ್ಯವಸ್ಥೆ ಮಾಡುವ ಚಿಂತನೆ ಇದೆ. ಪುತ್ತೂರು ತಾಲೂಕಿನ 41 ಗ್ರಾ.ಪಂ.ಗಳ ಪೈಕಿ 30ಕ್ಕಾದರೂ ಘಟಕ ನಿರ್ಮಾಣ ಮಾಡಬೇಕು.
-ಜಗದೀಶ್‌,
ಇಒ, ಪುತ್ತೂರು ತಾ.ಪಂ.

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.