ಸುಸ್ಥಿರ ಅಭಿವೃದ್ಧಿ ಕಡೆಗೆ ಚಿಂತನೆ ನಡೆಸಬೇಕು


Team Udayavani, Jan 23, 2019, 8:19 AM IST

23-january-13.jpg

ಸುಬ್ರಹ್ಮಣ್ಯ: ಸುಸ್ಥಿರ ಬಳಕೆ ಮತ್ತು ಉತ್ಪಾದನೆಯ ಅಸ್ಥಿರತೆ ಸ್ಥಿರಪಡಿಸಿ, ಜಾಗತಿಕ ಸುಸ್ಥಿರ ಅಭಿವೃದ್ಧಿ ಗುರಿಗಳ ಕಡೆಗೆ ಚಿಂತನೆ ನಡೆಸಬೇಕಿದೆ ಎಂದು ಮುಂಬಯಿ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್‌ ಸೈನ್ಸ್‌ ಪ್ರೋಗ್ರಾಮ್‌ ಕೋ-ಆರ್ಡಿನೇಟರ್‌ ಡಾ| ಅನುಪಮಾ ಸಿಂಗ್‌ ಹೇಳಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಸಾಮಾಜಿಕ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು, ಶಿಕ್ಷಕರು ಸಾಮಾಜಿಕ ಉದ್ಯಮಶೀಲತೆಯಲ್ಲಿ ಶೋಧನೆಗಳನ್ನು ತೊಡಗಿಸಿಕೊಳ್ಳಬೇಕಿದೆ. ದೇಶ ಅಭಿವೃದ್ಧಿ ಕಡೆಗೆ ಸಾಗಲು ಸುಸ್ಥಿರ ಅಭಿವೃದ್ಧಿ ಜತೆಗೆ ಸಾಮಾಜಿಕ ಉದ್ಯಮ ಶೀಲತೆಸರಿಯಾದ ದಿಕ್ಕಿನಲ್ಲಿ ಸಾಗಬೇಕು ಎಂದರು.

ಸಂಯೋಜಕ ವಿನ್ಯಾಸ್‌, ಡಾ| ಉದಯಕುಮಾರ್‌ ಎಂ.ಎ., ಮಂಗಳ ಗಂಗೋತ್ರಿ ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಪ್ರೊ| ಶ್ರೀಧರ್‌ ಟಿ.ಎನ್‌. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್‌ ರೈ ಉಪಸ್ಥಿತರಿದ್ದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ| ರಂಗಯ್ಯ ಶೆಟ್ಟಿಗಾರ್‌ ಪ್ರಸ್ತಾವನೆಗೈದು ಸ್ವಾಗತಿಸಿದರು. ಉಪನ್ಯಾಸಕಿ ಪುಷ್ಪಾ ಡಿ. ಕಾರ್ಯಕ್ರಮ ನಿರೂಪಿಸಿದರು. ಸಂಘಟನ ಕಾರ್ಯದರ್ಶಿ ಪ್ರೊ| ಉದಯಕುಮಾರ್‌ ಕೆ. ವಂದಿಸಿದರು.

ಲಿಂಗೈಕ್ಯರಾದ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಾಗಾರದಲ್ಲಿ ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿವಿಧ ವಿಷಯಗಳ ಮಾಹಿತಿ
ಸಾಮಾಜಿಕ ಉದ್ಯಮಶೀಲತೆಯಲ್ಲಿ ಹೊಸ ಅವಕಾಶಗಳನ್ನು ಪರಿಶೋಧಿಸುವಲ್ಲಿ ಸಹಾಯ, ಕ್ರಿಯಾತ್ಮಕ ಚಿಂತನೆಗೆ ಅವಕಾಶ, ಸುಸ್ಥಿರ ಅಭಿವೃದ್ಧಿಯ ಪ್ರಾಮುಖ್ಯತೆ ಬಗ್ಗೆ ಅರಿವು, ಭಾರತ ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಮಾಜಿಕ ಉದ್ಯಮಶೀಲತೆ ಪಾತ್ರವನ್ನು ವಿವರಿಸುವುದು, ಸಮಾಜ ಎದುರಿಸುತ್ತಿರುವ ಸಮಸ್ಯೆಯ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವ ಉದ್ದೇಶಗಳ ಕುರಿತು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಆಸಕ್ತಿ ಹೊಂದಬೇಕು
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಣದ ಜತೆಗೆ ಸಾಮಾಜಿಕ ಚಿಂತ ನೆಗಳು, ಉದ್ಯಮದ ಕಡೆಗಿನ ಆಸಕ್ತಿ ಹೊಂದಿರಬೇಕು. ಯುವ ಜನಾಂಗ ಇಂತಹ ಕಾರ್ಯಾಗಾರದಲ್ಲಿ ಭಾಗವಹಿ ಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ ಎಂದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.