‘ಯೋಧರ ವೀರಮರಣಕ್ಕೆ ಸರಕಾರಿ ರಜೆ ಘೋಷಿಸಿ’


Team Udayavani, Jan 24, 2019, 7:53 AM IST

24-january-15.jpg

ಕೆಯ್ಯೂರು : ದೇಶದ ಗಡಿ ಕಾಯುವ ಸೈನಿಕರ ರಕ್ಷಾ ಕವಚದಿಂದ ನಾವೆಲ್ಲ ಇಂದು ನೆಮ್ಮದಿಯ ಜೀವನ ನಡೆಸುವಂತಾಗಿರುವುದು. ಸೈನಿಕರಿಲ್ಲದೆ ಹೋಗಿದ್ದರೆ ದೇಶದಲ್ಲಿ ಯಾವ ರಾಜಕೀಯ ಚಟುವಟಿಕೆಯೂ ನಡೆಯುತ್ತಿರಲಿಲ್ಲ. ದುರಂತ ಎಂದರೆ ಸೈನಿಕರು ವೀರಮರಣ ಹೊಂದಿದಾಗ ಸರಕಾರ ರಜೆ ಕೊಟ್ಟು ಗೌರವ ಸಲ್ಲಿಸುತ್ತಿಲ್ಲ. ಆದರೆ ಓರ್ವ ರಾಜಕಾರಣಿ ಮರಣ ಹೊಂದಿದರೆ ಸರಕಾರಿ ರಜೆ ಘೋಷಣೆ ಆಗುತ್ತಿರುವುದು ವಿಪರ್ಯಾಸ ಎಂದು ನಿವೃತ್ತ ಡಿವೈಎಸ್‌ಪಿ ಶಾಂತಾರಾಮ ರೈ ಮುಂಡಾಳಗುತ್ತು ಅವರು ಹೇಳಿದರು.

ಕೆದಂಬಾಡಿ ಗ್ರಾಮದ ಶ್ರೀ ಶಿರಾಡಿ ದೈವಸ್ಥಾನ ಇದ್ಪಾಡಿ ಮಂಜಕೊಟ್ಯ ಇದರ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಶ್ರೀ ಶಿರಾಡಿ ಭಕ್ತವೃಂದ ಇದ್ಪಾಡಿ ಇವರ ಪ್ರಾಯೋಜಕತ್ವದಲ್ಲಿ ಇದ್ಪಾಡಿ ಆಟದ ಮೈದಾನದಲ್ಲಿ ನಡೆದ 3ನೇ ವರ್ಷದ ಸಭಾ ಕಾರ್ಯಕ್ರಮ, ಗ್ರಾಮದ ವೈದ್ಯರು, ಸೈನಿಕರಿಗೆ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೇದಿಕೆ ನಿರ್ಮಾಣಕ್ಕೆ ದೇಣಿಗೆ
ಮುಖ್ಯ ಅತಿಥಿಯಾಗಿದ್ದ ಐ.ಸಿ. ಕೈಲಾಸ್‌ ಕೆದಂಬಾಡಿ ಮಾತನಾಡಿ, ಇದ್ಪಾಡಿ ಆಟದ ಮೈದಾನದಲ್ಲಿ ವೇದಿಕೆ ನಿರ್ಮಾಣ ಮಾಡುವುದಾದರೆ ವೈಯುಕ್ತಿಕ ನೆಲೆಯಲ್ಲಿ 25 ಸಾವಿರ ರೂ. ದೇಣಿಗೆ ನೀಡುತ್ತೇನೆ ಎಂದರು.

ಶ್ರೀ ಶಿರಾಡಿ ಭಕ್ತವೃಂದದ ಅಧ್ಯಕ್ಷ ಚಂದ್ರ ನಲಿಕೆ ಇದ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಭಕ್ತವೃಂದದ ಗೌ| ಸಲಹೆಗಾರ, ಕೆದಂಬಾಡಿ ಗ್ರಾಮ ಪಂಚಾಯತ್‌ಸದಸ್ಯ ರಾಘವ ಗೌಡ ಕೆರೆಮೂಲೆ ಪ್ರಸ್ತಾವನೆಗೈದರು. ಭಕ್ತವೃಂದದ ಕಾರ್ಯದರ್ಶಿ ಜಗದೀಶ್‌ ಅಮೀನ್‌ ಸ್ವಾಗತಿಸಿದರು. ಕೋಶಾಧಿಕಾರಿ ಜಯರಾಮ ಗೌಡ ಮುಂಡಾಳ ವಂದಿಸಿದರು. ಸುರೇಶ್‌ ಪೂಜಾರಿ ಇದ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಗೌರವಾಧ್ಯಕ್ಷ ರಾಧಾಕೃಷ್ಣ ಪೂಜಾರಿ ಇದ್ಪಾಡಿ, ಸರ್ವ ಸದಸ್ಯರು ಸಹಕರಿಸಿದ್ದರು.

ವಿದ್ಯಾರ್ಥಿಗಳಿಗೆ ಗೌರವ
ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ದ್ವಿತೀಯ ಪಿಯುಸಿಯ ಪವಿತ್ರಾ ಕೊಲ್ಲಾಜೆ ಮತ್ತು ಎಸೆಸೆಲ್ಸಿಯ ಶಿವಾನಿ ಬೋಳ್ಳೋಡಿ ಅವರನ್ನು ಗೌರವಿಸಲಾಯಿತು

ಸಾಧಕರಿಗೆ ಸಮ್ಮಾನ
ಕೆದಂಬಾಡಿ ಗ್ರಾಮದ ವೈದ್ಯ, ಸೈನಿಕ, ಪೊಲೀಸರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ ಕುಮಾರ್‌ ರೈ, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಆರ್‌ಪಿಎಫ್‌ ರಮೇಶ್‌ ರೈ ಚಾವಡಿ, ಸೆಕ್ಷನ್‌ ಕಮಾಂಡರ್‌ ಅಸ್ಸಾಂ ವಿದೀಪ್‌ ಕುಮಾರ್‌ ಕುಂಬ್ರ, ಜಮ್ಮು ಕಾಶ್ಮೀರ ಶ್ರೀನಗರದಲ್ಲಿ ಹೆಡ್‌ಕಾನ್ಸ್‌ ಟೆಬಲ್‌ ಆಗಿರುವ ಮಹೇಶ್‌ ಪಿ. ಪಿದಪಟ್ಲ, ಜಮ್ಮು ಕಾಶ್ಮೀರ 40 ರಾಷ್ಟ್ರೀಯ ರೈಫ‌ಲ್‌ ಗನ್ನಾರ್‌ ಬಿ.ಡಿ. ಲಕ್ಷ್ಮೀಶ ಕಡಮಜಲು ಅವರ ಪರವಾಗಿ ಕೇಚು ಪಾಟಾಳಿ, ಸರಸ್ವತಿ ಸೈನಿಕನ ಪತ್ನಿ ಚೈತ್ರಾ ಪಿ. ಹಾಗೂ ಝಾರ್ಖಂಡ್‌ ಇನ್ವೆಂಟರಿ ಗ್ರೇಡ್‌ ನಾಯಕ್‌ ಹುದ್ದೆಯಲ್ಲಿರುವ ಸುನೀಲ್‌ ಚೌಟ ಪಟ್ಟೆತ್ತಡ್ಕ ಅವರ ಪರವಾಗಿ ಬಾಲಕೃಷ್ಣ ಚೌಟ ದಂಪತಿ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.