ಕುಡಿಯುವ ನೀರಿನ ಬಿಲ್‌ ಕಟ್ಟದಿದ್ದರೆ ಪೊಲೀಸ್‌ ಕೇಸ್‌!


Team Udayavani, Jan 25, 2019, 9:43 AM IST

25-january-15.jpg

ಬಡಗನ್ನೂರು : ಕುಡಿಯುವ ನೀರಿನ ಸಂಪರ್ಕ ಪಡೆದವರು ನೋಟಿಸ್‌ ಕಳುಹಿಸಿದ ಅನಂತರವೂ ನೀರಿನ ಬಿಲ್‌ ಪಾವತಿಸದೇ ಇದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್‌ ದೂರು ನೀಡುವ ಕುರಿತು ಒಳಮೊಗ್ರು ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಗ್ರಾ.ಪಂ. ಅಧ್ಯಕ್ಷ ಯತಿರಾಜ್‌ ರೈ ನೀರ್ಪಾಡಿ ಅಧ್ಯಕ್ಷತೆಯಲ್ಲಿ ಜ. 23ರಂದು ಗ್ರಾ.ಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.

ನಿರ್ವಹಣೆಗೆ ತೊಂದರೆ
ಕುಡಿಯುವ ನೀರಿನ ಬಿಲ್‌ ಪಾವತಿಸದೆ ಇರುವುದರಿಂದ ಗ್ರಾ.ಪಂ. ವಿದ್ಯುತ್‌ ಬಿಲ್‌, ಪೈಪ್‌ಲೈನ್‌ ದುರಸ್ತಿ ಮತ್ತು ನಿರ್ವಹಣೆ ಕಷ್ಟಕರವಾಗುತ್ತಿದೆ. ಮುಂದಕ್ಕೆ ನೀರಿನ ಕೊರತೆಯೂ ಬರಬಹುದು. ಇದರಿಂದಾಗಿ ಗ್ರಾ.ಪಂ. ಸೂಕ್ತ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅಧ್ಯಕ್ಷ ಯತಿರಾಜ್‌ ರೈ ನೀರ್ಪಾಡಿ ಹೇಳಿದರು. ಸದಸ್ಯ ಅಬ್ದುಲ್‌ ರಹಮಾನ್‌ ಧ್ವನಿಗೂಡಿಸಿದರು. ಈ ಬಗ್ಗೆ ಚರ್ಚಿಸಿ ಸದಸ್ಯರ ಒಮ್ಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಪರವಾನಿಗೆ: ತೀರ್ಮಾನ
ಸ್ವಚ್ಛ ಭಾರತ ಪರಿಕಲ್ಪನೆ ದೃಷ್ಟಿಯಿಂದ ಅಂಗಡಿ ಪರವಾನಿಗೆ ನವೀಕರಣ ಸಂದರ್ಭ ಕಸದ ತೊಟ್ಟಿ ಇಟ್ಟ ಮಾಲಕರಿಗೆ ಮಾತ್ರ ಪರವಾನಿಗೆ ನೀಡಬೇಕು ಎಂದು ಸದಸ್ಯ ಶಶಿಕಿರಣ್‌ ರೈ ಹೇಳಿದರು. ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಯಿತು.

ಪೈಪ್‌ಲೈನ್‌ ಕಟ್: ನಿರ್ಣಯ
ಬೆಟ್ಟಂಪ್ಪಾಡಿ ಗ್ರಾಮದ ಗಡಿ ಭಾಗದ ದೆಕ್ಕಿತೋಡಿ ಪ್ರದೇಶದ ಜನರಿಗೆ ಒಳಮೊಗ್ರು ಗ್ರಾ.ಪಂ. ವತಿಯಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಿದ್ದು, ಒಂದು ವರ್ಷದಿಂದ ಈ ಭಾಗದ ಫ‌ಲಾನುಭವಿಗಳು ಬಿಲ್‌ ಪಾವತಿಸಿಲ್ಲ. ಈ ಭಾಗದ ಕುಡಿಯುವ ನೀರಿನ ಪ್ರಧಾನ ಪೈಪ್‌ಲೈನ್‌ ಕಡಿತಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಕೊಳವೆ ಬಾವಿ ಇರುವ ಫ‌ಲಾನುಭವಿಗಳಿಗೆ ನಳ್ಳಿ ನೀರಿನ ವ್ಯವಸ್ಥೆ ಕಡಿತಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಉಪಾಧ್ಯಕ್ಷೆ ಸುನಂದಾ, ಸದಸ್ಯರಾದ, ಮಹೇಶ್‌ ರೈ, ಶಶಿಕಿರಣ್‌ ರೈ, ಸುಂದರಿ, ವಸಂತಿ ಡಿ., ಅಬ್ದುಲ್‌ ರಹಮಾನ್‌ ಚಂದ್ರಕಲಾ, ವಿಶ್ವನಾಥ, ಶೀನಪ್ಪ ನಾಯ್ಕ, ಉಷಾ ನಾರಾಯಣ, ಭಾಗೀರಥಿ, ತ್ರಿವೇಣಿ, ವಸಂತಿ ಶೆಟ್ಟಿ ಉಪಸ್ಥಿತರಿದ್ದರು.

ಗ್ರಾ.ಪಂ. ಕಾರ್ಯದರ್ಶಿ ದಾಮೋದರ ಸ್ವಾಗತಿಸಿ, ವಂದಿಸಿದರು. ಸಿಬಂದಿ ಜಯಶೀಲ ರೈ, ಕೇಶವ ಪೂಜಾರಿ, ಗುಲಾಬಿ, ಜಾನಕಿ ಸಹಕರಿಸಿದರು.

ಕಾಮಗಾರಿಗೆ ಮೊದಲು ಪರಿಶೀಲನೆ
ಯಾವುದೇ ಇಲಾಖೆಯ ಅನುದಾನದಲ್ಲಿ ಪೈಪ್‌ಲೈನ್‌ ಅಳವಡಿಸಲು ಕಾಮಗಾರಿ ನಡೆಸುವುದಾದಲ್ಲಿ ಆಯಾ ಗುತ್ತಿಗೆದಾರರು ಪೈಪ್‌ಲೈನ್‌ ಅಳವಡಿಸುವ ಮೊದಲು ಗುಣಮಟ್ಟದ ಬಗ್ಗೆ ಪರಿಶೀಲನೆ ಮಾಡಬೇಕು. ಇಲ್ಲದೇ ಇದ್ದಲ್ಲಿ ಪದೇ ಪದೇ ಪೈಪ್‌ ಒಡೆದು ಹೋಗಿ ದುರಸ್ತಿ ವೆಚ್ಚ ಅಧಿಕವಾಗುತ್ತದೆ ಎಂದು ಗ್ರಾ.ಪಂ. ಸದಸ್ಯ ಶಶಿಕಿರಣ್‌ ರೈ ತಿಳಿಸಿದರು. ಮುಂದಕ್ಕೆ ಯಾವುದೇ ಕಾಮಗಾರಿ ನಡೆಸುವ ಮೊದಲು ಪರಿಶೀಲನೆ ಮಾಡುವ ಬಗ್ಗೆ ನಿರ್ಣಯಿಸಲಾಯಿತು

ಹಟ್ಟಿ ರಚನೆ: ಸಹಾಯಧನ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಹಟ್ಟಿ ರಚನೆ ಮಾಡುವ ಫ‌ಲಾನುಭವಿಗಳು ಜ. 31ರ ಒಳಗೆ ಅರ್ಜಿ ಸಲ್ಲಿಸಬೇಕು. ಪ.ಜಾತಿ ಪಂಗಡಕ್ಕೆ 42 ಸಾವಿರ ರೂ., ಇತರರಿಗೆ 19 ಸಾವಿರ ರೂ. ದೊರೆಯುತ್ತದೆ. ಅನಂತರ ಅರ್ಜಿ ಸಲ್ಲಿಸಿದ ಫ‌ಲಾನುಭವಿಗಳಿಗೆ ಕೂಲಿ ದರ ಪ.ಜಾತಿ ಪಂಗಡದವರಿಗೆ ಅಂದಾಜು 22 ಸಾವಿರ ರೂ., ಇತರರಿಗೆ 8 ಸಾವಿರ ರೂ. ಸಿಗಬಹುದು ಎಂದು ಪಿಡಿಒ ಗೀತಾ ಬಿ.ಎಸ್‌. ಹೇಳಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.