ಕೆಯ್ಯೂರಿನ ಬಡ ಕುಟುಂಬಕ್ಕೆ ನೆರವು
Team Udayavani, Jan 26, 2019, 6:23 AM IST
ಕೆಯ್ಯೂರು: ಕೆಯ್ಯೂರು ಗ್ರಾಮದ ದಲಿತ ಕುಟುಂಬವೊಂದರ ನಾಲ್ವರು ಹೆಣ್ಣು ಮಕ್ಕಳು ಅನುಭವಿಸುತ್ತಿದ್ದ ಸಂಕಷ್ಟದ ಜೀವನದ ಕುರಿತು ‘ಹೆತ್ತವರಿಲ್ಲದ ನಾಲ್ವರು ಹೆಣ್ಣು ಮಕ್ಕಳಿಗೆ ಸೂರು ಇಲ್ಲ’ ಎನ್ನುವ ತಲೆ ಬರಹದಡಿಯಲ್ಲಿ ಡಿ. 18ರಂದು ‘ಉದಯವಾಣಿ’ ಸುದಿನದಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದನೆ ದೊರಕಿದೆ.
10 ಸಾವಿರ ರೂ. ನೆರವು
ಹೆಸರು ತಿಳಿಸಲು ಇಚ್ಛಿಸದ ದಾನಿಯೊಬ್ಬರು ಈ ಬಡ ಕುಟುಂಬಕ್ಕೆ 10 ಸಾವಿರ ರೂ. ಧನಸಹಾಯವನ್ನು ನಾಲ್ವರು ಹೆಣ್ಣು ಮಕ್ಕಳ ಅಜ್ಜಿ ಭಾಗೀರಥಿ ಅವರಿಗೆ ಜ. 24ರಂದು ಹಸ್ತಾಂತರಿಸಿದ್ದಾರೆ.
ಶಾಸಕರು, ತಾ.ಪಂ.ಅಧ್ಯಕ್ಷರ ಭೇಟಿ
‘ಉದಯವಾಣಿ’ ಸುದಿನ ವರದಿಗೆ ಸ್ಪಂದಿಸಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ. ಮಾಜಿ ಅಧ್ಯಕ್ಷೆ ಭವಾನಿ ಚಿದಾನಂದ, ಕೆಯ್ಯೂರು ಗ್ರಾ.ಪಂ. ಅಧ್ಯಕ್ಷ ಬಾಬು ಬಿ. ಮನೆಗೆ ಭೇಟಿ ನೀಡಿ, ಆದಷ್ಟು ಬೇಗ ಮನೆ ನಿರ್ಮಾಣ ಮಾಡಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಕೆಯ್ಯೂರು ಗ್ರಾ.ಪಂ.ನಿಂದ ಮೂರು ವರ್ಷಗಳ ಹಿಂದೆ ಬಸವ ವಸತಿ ಯೋಜನೆಯಡಿಯಲ್ಲಿ ಸುಂದರಿ ಅವರಿಗೆ ಮನೆ ಮಂಜೂರಾಗಿತ್ತು. ಅಡಿಪಾಯವಾಗಿ ಒಂದು ಭಾಗದ ಗೋಡೆ ನಿರ್ಮಾಣ ಆರಂಭವಾಗಿತ್ತು. ಈ ವೇಳೆ ಸುಂದರಿ ಮೃತಪಟ್ಟಿದ್ದರು. ಇದರಿಂದ ಮನೆ ಕಾಮಗಾರಿ ಸ್ಥಗಿತಗೊಂಡಿತ್ತು.ಅಧಿಕಾರಿಗಳು ಮನೆ ಅಡಿಪಾಯದ ಫೊಟೋ ತೆಗೆದಿದ್ದರೂ ಪ್ರಥಮ ಹಂತದ ಸಹಾಯಧನ ಪಾವತಿ ಬಾಕಿಯಾಗಿದೆ. ಆರ್ಥಿಕ ಸಮಸ್ಯೆಯಿಂದಾಗಿ ನಾಲ್ಕು ವರ್ಷದಿಂದ ಮನೆ ಅಪೂರ್ಣ ಸ್ಥಿತಿಯಲ್ಲಿಯೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ