ಗಂಗಾ ಕಲ್ಯಾಣ ಯೋಜನೆ ಪಂಪ್‌ ಕಳಪೆ


Team Udayavani, Jan 30, 2019, 6:10 AM IST

30-january-7.jpg

ಪುತ್ತೂರು : ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಬೋರ್‌ವೆಲ್‌ಗೆ ಕಳಪೆ ಪಂಪ್‌ ನೀಡಲಾಗುತ್ತಿದೆ ಎನ್ನುವ ಆರೋಪ ಜ. 29ರಂದು ಪುತ್ತೂರು ತಾ.ಪಂ. ಸಭಾಂಗಣದಲ್ಲಿ ನಡೆದ ಎಸ್ಸಿ , ಎಸ್ಟಿ ಕುಂದುಕೊರತೆ ಸಭೆಯಲ್ಲಿ ಕೇಳಿಬಂತು.

ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಯೋಜನೆಯಡಿ ಹಾಕಲಾದ ಬೋರ್‌ವೆಲ್‌ನ ಪಂಪ್‌ಗಳು ಸುಟ್ಟು ಹೋಗುವುದು, ಪದೇ ಪದೇ ಹಾಳಾಗುವ ನಿದರ್ಶನವಿದೆ. ಇದನ್ನು ಗಮನಿಸುವಾಗ ಕಳಪೆ ಪಂಪ್‌ ಹಾಕಿರುವಂತೆ ಕಾಣುತ್ತಿದೆ. ಈ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಗಂಗಾ ಕಲ್ಯಾಣ ಯೋಜನೆಯ ಮೇಲ್ವಿಚಾರಕರು ಮಾತನಾಡಿ, ಪಂಪ್‌ ಗಳಿಗೆ ಒಂದು ವರ್ಷದ ಗ್ಯಾರಂಟಿ ಇದೆ. ಒಂದು ವರ್ಷದ ಮೊದಲು ಹಾಳಾದರೆ ಅದನ್ನು ಕಂಪೆನಿಯೇ ದುರಸ್ತಿ ಮಾಡಿಕೊಡುತ್ತದೆ. ಪಂಪ್‌ ಕಳಪೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ. ಕೇಂದ್ರ ಕಚೇರಿಯಿಂದಲೇ ಟೆಂಡರ್‌ ನೀಡಲಾಗುತ್ತಿದೆ ಎಂದರು. ಈ ಬಗ್ಗೆ ಮಾತನಾಡಿದ ತಾ.ಪಂ. ಇಒ ಜಗದೀಶ್‌, ಈ ಬಗ್ಗೆ ನಿರ್ಣಯ ಕೈಗೊಂಡು, ಸರಕಾರಕ್ಕೆ ಕಳುಹಿಸುವ ಎಂದರು.

ಎಸ್ಸಿಗಳ ಹೆಸರಿನಲ್ಲಿ ದುರುಪಯೋಗ
ಸೇಸಪ್ಪ ನೆಕ್ಕಿಲು ಮಾತನಾಡಿ, ಎಸ್ಸಿ ಗುತ್ತಿಗೆದಾರರು ಕಡಿಮೆ ಇರಬಹುದು. ಹಾಗೆಂದು ಯೋಜನೆಗಳ ಜಾರಿ ಸಂದರ್ಭ ಗುತ್ತಿಗೆಯನ್ನು ಎಸ್ಸಿಗಳ ಹೆಸರಿನಲ್ಲಿ ಇನ್ನೊಂದು ವರ್ಗದವರು ದುರುಪಯೋಗ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಆಕ್ಷೇಪಾರ್ಹ. ಎಸ್ಸಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಹಣ ಮಾಡುವುದು ಸರಿಯಲ್ಲ ಎಂದರು. ತಾ.ಪಂ. ಇಒ ಜಗದೀಶ್‌ ಮಾತನಾಡಿ, ಎಸ್ಟಿಮೇಟ್ ಮಾಡುವಾಗಲೇ ಎಸ್ಸಿ ಗುತ್ತಿಗೆದಾರರ ವಿಷಯವನ್ನು ಅಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬೇಕು. ಎಂಜಿನಿಯರ್‌ಗಳು ಇದನ್ನು ಗಮನಿಸಬೇಕು. ಈ ಬಗ್ಗೆ ಸೂಚನೆ ಇದೆ ಎಂದರು.

ವಾರದೊಳಗೆ ಆದೇಶ
ತಹಶೀಲ್ದಾರ್‌ ಮಾತನಾಡಿ, ಮರಳಿನ ಬಗ್ಗೆ ಜಿಲ್ಲಾಡಳಿತ ಸಭೆ ನಡೆಸಿದೆ. ಗ್ರಾ.ಪಂ. ವ್ಯಾಪ್ತಿಯನ್ನು ಸಿ ಕೆಟಗರಿಯಲ್ಲಿ ಸೇರಿಸಿದ್ದು, ಸದ್ಯದಲ್ಲೇ ನಿರ್ಣಯ ಜಾರಿಗೆ ಬರಲಿದೆ ಎಂದರು. ಆನಂದ್‌ ಮಿತ್ತಬೈಲ್‌ ಮಾತನಾಡಿ, ಆದೇಶ ಜಾರಿಯಾಗುವವರೆಗೆ ಮನೆ ಕಟ್ಟುವ ಕಾರ್ಯ ನಿಲ್ಲಿಸಬೇಕೇ ಎಂದು ಪ್ರಶ್ನಿಸಿದರು.

ಕಡಬ ತಹಶೀಲ್ದಾರ್‌ ಜಾನ್‌ ಪ್ರಕಾಶ್‌ ಮಾತ ನಾಡಿ, ಇದರ ಪರವಾನಿಗೆ ನೀಡುವ ಜವಾಬ್ದಾರಿಯನ್ನು ಪಿಡಿಒಗಳಿಗೆ ನೀಡಲಾಗುತ್ತದೆ. ವಾರದೊಳಗೆ ಆದೇಶ ಜಾರಿ ಆಗಲಿದೆ ಎಂದರು.

ಪಾಪೆಮಜಲಿನಲ್ಲಿ ನೀರಿನ ಟ್ಯಾಂಕ್‌ ಒಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ಪ್ರಸ್ತಾವಿಸಿದ ಸೇಸಪ್ಪ ನೆಕ್ಕಿಲು ಎಂಜಿನಿಯರ್‌, ಗುತ್ತಿಗೆದಾರರ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆಯೇ ಎಂದು ಪ್ರಶ್ನಿಸಿದರು. ಇಒ ಜಗದೀಶ್‌ ಮಾತನಾಡಿ, ಈ ಬಗ್ಗೆ ವಿಚಾರಿಸಿ ಮಾಹಿತಿ ನೀಡಲಾ ಗುವುದು ಎಂದರು. ಆನಂದ್‌ ಮಿತ್ತಬೈಲ್‌ ಮಾತನಾಡಿ, ಕುಟುಂಬದ ಏಕೈಕ ಆಸರೆ ಕಮರಿದೆ. ಮನೆಯವರಿಗೆ ಆಧಾರ ಆಗುವ ನಿಟ್ಟಿನಲ್ಲಿ ಇಲಾಖೆಯಿಂದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್. ಮಾತನಾಡಿ, ಇಲಾಖೆಗೆ ಶಿಫಾರಸು ಮಾಡಲಾಗುವುದು ಎಂದರು.

ಮೂರು ತಿಂಗಳ ಹಿಂದೆ ಸಂಪ್ಯ ಠಾಣೆಯಲ್ಲಿ ದೂರು ನೀಡಿದ್ದೇವೆ. ದೂರು ದಾಖಲಿಸುವ ಬದಲು, ನಮ್ಮ ವಿರುದ್ಧವೇ ಎಫ್‌ಐಆರ್‌ ದಾಖಲಿಸುವ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿತು. ಪೊಲೀಸ್‌ ನಿರೀಕ್ಷಕ ತಿಮ್ಮಪ್ಪ ನಾಯ್ಕ ಮಾತನಾಡಿ, ಠಾಣೆಯಲ್ಲಿ ದೂರು ತೆಗೆದುಕೊಳ್ಳದಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದರು. ತಹಶೀಲ್ದಾರ್‌ ಮಾತನಾಡಿ, ದೂರಿನ ಜೆರಾಕ್ಸ್‌ ಪ್ರತಿಯನ್ನು ಪೊಲೀಸ್‌ ನಿರೀಕ್ಷಕರಿಗೆ ನೀಡಿ. ಅವರು ಕ್ರಮ ಕೈಗೊಳ್ಳುತ್ತಾರೆ ಎಂದರು. ಬಾಬು ಅವರು ಮಾತನಾಡಿ, ಕೆಯ್ಯೂರಿನ ತೆಗ್ಗಿನಲ್ಲಿ ಸಂಪರ್ಕ ರಸ್ತೆ ವಿಚಾರದಲ್ಲಿ ಜೀವ ಬೆದರಿಕೆ ಹಾಕಿ, ಹಲ್ಲೆಗೆ ಮುಂದಾಗಿದ್ದಾರೆ. ಇದರ ಬಗ್ಗೆ ಸಂಪ್ಯ ಠಾಣೆಗೆ ದೂರು ನೀಡಿದರೂ ಸ್ವೀಕರಿಸುತ್ತಿಲ್ಲ ಎಂದರು. ಈ ಪ್ರಕರಣದ ತನಿಖೆ ನಡೆಸಲು ಪೊಲೀಸ್‌ ನಿರೀಕ್ಷಕರಿಗೆ ಸೂಚಿಸಲಾಯಿತು.
ತಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್‌ ಬಿಜತ್ರೆ, ಸದಸ್ಯೆ ಲಲಿತಾ ಉಪಸ್ಥಿತರಿದ್ದರು.

ಮರಳು ತೆಗೆದರೆ ಎಫ್ಐಆರ್‌
ಆನಂದ ಮಿತ್ತಬೈಲ್‌ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮರಳಿನ ಸಮಸ್ಯೆ ಜೋರಾಗಿದೆ. ಗ್ರಾ.ಪಂ.ನ ಯೋಜನೆಗಳ ಜಾರಿಗೆ ಒತ್ತಡವೂ ಹೆಚ್ಚುತ್ತಿದೆ. ದಿನ ಕಳೆದರೆ ನೋಟಿಸ್‌ ನೀಡಲಾಗುತ್ತಿದೆ. ಇದನ್ನು ತಪ್ಪಿಸಲು ನದಿ ದಂಡೆಯಿಂದ ಮರಳು ತೆಗೆದರೆ ಅರಣ್ಯ ಇಲಾಖೆಯವರೂ ಎಫ್‌ಐಆರ್‌ ದಾಖಲಿಸಲು ಮುಂದಾಗುತ್ತಿದ್ದಾರೆ. ಇದು ಗಂಭೀರ ವಿಷಯ. ಅರಣ್ಯ ರಸ್ತೆಯಲ್ಲಿ ಮರಳು ಸಾಗಾಟ ಎನ್ನುವ ನೆಪವೊಡ್ಡಿ ಎಫ್‌ಐಆರ್‌ ದಾಖಲಿಸಿದ ಉದಾಹರಣೆ ಇದೆ. ಆದ್ದರಿಂದ ಇದರ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮತಾಂತರಕ್ಕೆ ದಾಖಲೆ ಏನು?
ಪರಿಶಿಷ್ಟ ಜಾತಿಯಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳು ಈಗಲೂ ಎಸ್ಸಿ ಕೋಟಾದಡಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆಯನ್ನು ಕೇಳಿಬಂತು. ಪ್ರತಿಕ್ರಿಯಿಸಿದ ತಹಶೀಲ್ದಾರ್‌, ಮತಾಂತರಗೊಂಡಿದ್ದಾರೆ ಎನ್ನುವುದಕ್ಕೆ ದಾಖಲೆ ಏನಿದೆ ಎಂದು ಪ್ರಶ್ನಿಸಿದರು. ಮತಾಂತರಗೊಂಡಾಗ ಯಾವುದೇ ದಾಖಲೆ ಪತ್ರಗಳನ್ನು ನೀಡುವುದಿಲ್ಲ. ಪುಸ್ತಕ ದಲ್ಲಿ ಸಹಿ ಹಾಕಿಸಿಕೊಳ್ಳುತ್ತಾರಷ್ಟೇ ಎಂದರು. ತಹಶೀಲ್ದಾರ್‌ ಮಾತನಾಡಿ, ಇದರ ಬಗ್ಗೆ ತನಗೂ ಹೆಚ್ಚಿನ ಮಾಹಿತಿ ಇಲ್ಲ. ಒಂದು ಅರ್ಜಿ ನೀಡಿ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.