ಶಿವರಾಮ ಕಾರಂತರ ಶಾಲೆಗೆ ಪ್ರಧಾನಿ ಕಚೇರಿ ಅಭಯ!


Team Udayavani, Feb 14, 2019, 5:43 AM IST

14-february-4.jpg

ಪುತ್ತೂರು: ಇಲ್ಲಿನ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತಾಗಿಕೊಂಡೇ ಇರುವ ಡಾ| ಶಿವರಾಮ ಕಾರಂತ ಶಾಲೆಯ ಪಾರಂಪರಿಕ ಕಟ್ಟಡವನ್ನು ಉಳಿಸುವ ಪ್ರಯತ್ನಕ್ಕೆ ಮೊದಲ ಯಶಸ್ಸು ಲಭಿಸಿದೆ. ಮನವಿಗೆ ಸ್ಪಂದನೆ ನೀಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ, ಕಟ್ಟಡದ ವಿವರ ನೀಡುವಂತೆ ದ.ಕ. ಜಿಲ್ಲಾ ಪಂಚಾಯತ್‌ಗೆ ಸೂಚಿಸಿದೆ.

140 ವರ್ಷ ಹಳೆಯ ನೆಲ್ಲಿಕಟ್ಟೆ ಡಾ| ಶಿವರಾಮ ಕಾರಂತರ ಶಾಲೆ ಈಗ ಪಾಳು ಬಿದ್ದಿದೆ. ಕಟ್ಟಡ ಗಟ್ಟಿಮುಟ್ಟಾಗಿದ್ದರೂ, ಮಾಡು – ಪಕ್ಕಾಸು ಕುಸಿಯುವ ಹಂತಕ್ಕೆ ತಲುಪಿದೆ. ಇದರಿಂದಾಗಿ ಈ ಕಟ್ಟಡ ಸದುಪಯೋಗ ಆಗುವ ಬದಲು, ದುರುಪಯೋಗ ಆದದ್ದೇ ಹೆಚ್ಚು.

ಎಲ್ಲದಕ್ಕಿಂತ ಹೆಚ್ಚು, ಕಡಲ ತಡಿಯ ಭಾರ್ಗವ ಡಾ| ಶಿವರಾಮ ಕಾರಂತರು ಗೆಜ್ಜೆ ಕಟ್ಟಿ ಕುಣಿದ ಶಾಲೆಯಿದು. ಇದೇ ಕಟ್ಟಡದಲ್ಲಿ ನೃತ್ಯಾಭ್ಯಾಸ ನಡೆಸುತ್ತಿದ್ದರು. ಕಾರಂತರ ನೇತೃತ್ವದಲ್ಲಿ ನಾಡಹಬ್ಬ ದಸರಾವನ್ನು ಇಲ್ಲೇ ಆಚರಿಸಲಾಗುತ್ತಿತ್ತು. ಶಾಲೆಯ ಒಳಗಿರುವ ವೇದಿಕೆ ವಿಶಿಷ್ಟ ರಚನೆಯಿಂದ ಕೂಡಿದೆ. ನಡುಭಾಗದಲ್ಲಿ ಹೊಂಡವಿದ್ದು, ಎರಡು ಬದಿಯಲ್ಲೂ ಎತ್ತರದ ರಚನೆ ಇದೆ. ಇದು ಶಿವರಾಮ ಕಾರಂತರ ಕಲ್ಪನೆಯಲ್ಲೇ ಮೂಡಿದ
ವೇದಿಕೆ. ಈ ಎಲ್ಲ ಕಾರಣಗಳಿಂದ ಕಟ್ಟಡ ಪಾರಂಪರಿಕವಾಗಿ ತಾಣವಾಗಿ ಉಳಿಸಬೇಕು ಎಂಬ ಕೂಗು ಸಾರ್ವಜನಿಕರಿಂದ ಕೇಳಿಬರುತ್ತಿತ್ತು.

ಯಕ್ಷನೃತ್ಯ ಕೇಂದ್ರ
ಈ ಪಾರಂಪರಿಕ ಕಟ್ಟಡದಲ್ಲಿ ವಿದ್ಯಾರ್ಥಿ ಗಳಿಗೆ, ಆಸಕ್ತರಿಗೆ ಯಕ್ಷ ನೃತ್ಯ ಕಲಿಸಲಾಗುತ್ತಿತ್ತು. ನಾಡಹಬ್ಬ ದಸರಾ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮ ಜರಗುತ್ತಿತ್ತು. ಆಗಾಗ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿತ್ತು. ಆಗೆಲ್ಲ ಹೊರ ಊರುಗಳಿಂದ ಬರುತ್ತಿದ್ದ ಕಲಾವಿದರು, ಇದೇ ಶಾಲೆಯಲ್ಲಿ ಕಾರ್ಯಕ್ರಮ ನೀಡಿ, ಇಲ್ಲೇ ಉಳಿದು ಕೊಳ್ಳುತ್ತಿದ್ದರು. ಇದೆಲ್ಲವನ್ನು ಗಮನದಲ್ಲಿ ಇಟ್ಟುಕೊಂಡು, ಈ ಹಿಂದೆ ಜಿಲ್ಲಾ ಪಂಚಾಯತ್‌ ಕಟ್ಟಡ ನವೀಕರಣಕ್ಕೆ ಯೋಜನೆ ತಯಾರಿಸಿತ್ತು. ಬಳಿಕ ಯೋಜನೆ ಹಳ್ಳ ಹಿಡಿಯಿತು.

ಮಾಹಿತಿ ಸಂಗ್ರಹಿಸಲು ನಿರ್ದೇಶನ
ಹಲವು ಸಮಯಗಳಿಂದ ಈ ನಿಟ್ಟಿನಲ್ಲಿ ಜಿ.ಪಂ. ಸಹಿತ ವಿವಿಧ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು. ಆದರೆ ಪ್ರಯೋಜನ ಆಗಿರಲಿಲ್ಲ. ಇದೀಗ ಪುತ್ತೂರಿನ ಅಮೃತ ಮಲ್ಲ ಅವರು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದು, ಕಟ್ಟಡವನ್ನು ಪಾರಂಪರಿಕ ತಾಣವಾಗಿ ಉಳಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ, ದ.ಕ. ಜಿ.ಪಂ.ಗೆ ಪತ್ರವೊಂದನ್ನು ಕಳುಹಿಸಿಕೊಟ್ಟಿದೆ. ಕಟ್ಟಡದ ಮಾಹಿತಿ ಪಡೆದು, ಫೂಟೋದೊಂದಿಗೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಕಾರ್ಯಕಾರಿ ಅಭಿಯಂತರರಿಗೆ ಮಾಹಿತಿ ಸಂಗ್ರಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.