‘ತುಳು ಭಾಷೆ ಅಭಿವೃದಿಗೆ ಕಾರ್ಯಕ್ರಮಗಳು ನಡೆಯಲಿ’


Team Udayavani, Feb 16, 2019, 7:22 AM IST

16-february-7.jpg

ವಿಟ್ಲ : ತುಳು ಭಾಷೆ ಅಭಿವೃದ್ಧಿಗೆ ಕಾರ್ಯಕ್ರಮ ನಡೆಯುತ್ತಿರಬೇಕು. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ಆಗಬೇಕಿದ್ದು, ರಾಜಕೀಯ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಕೆಲವು ರಾಜ್ಯಗಳ ಜನಪ್ರತಿನಿಧಿಗಳ ಒತ್ತಡಗಳಿಂದ ಬೇರೆ ಭಾಷೆಗಳಿಗೆ ಸ್ಥಾನಮಾನ ಸಿಕ್ಕಿವೆ. ಪರಿಣಾಮವಾಗಿ ತುಳುವಿನ ಸ್ಥಾನಮಾನ ಯೋಜನೆ ಕೈತಪ್ಪಿಹೋಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಗುರುವಾರ ಒಡಿಯೂರು ಆತ್ರೇಯ ಮಂಟಪದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆದ ಶ್ರೀ ಒಡಿಯೂರು ರಥೋತ್ಸವ ತುಳುನಾಡª ಜಾತ್ರೆ 2019ರ ಅಂಗವಾಗಿ ಗುರುವಾರ ನಡೆದ ತುಳು ಭಾಷೆ-ಸಂಸ್ಕೃತಿ ಜಾಗೃತಿಗಾಗಿ ತುಳು ಬದ್ಕ್ ದ ನಿಲೆ-ಬಿಲೆ ಎಂಬ ಹೆಸರಿನ 19ನೇ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಸಂಶೋಧಕಿ ಡಾ| ಇಂದಿರಾ ಹೆಗ್ಡೆ ಮಾತನಾಡಿ, ಸಂಸ್ಕೃತಿಯಲ್ಲಿ ತುಳುವಿಗೆ ಅದರದ್ದೇ ಸ್ಥಾನಮಾನವಿದೆ. ತುಳುವಿನ ಹೆಸರಲ್ಲಿ ರಾಜಕೀಯ ಪಕ್ಷ ಇದ್ದಾಗ ಸ್ಥಾನಮಾನ ಪಡೆಯಲು ಸಹಕಾರಿಯಾಗ ಬಹುದು. ಒಡಿಯೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ತುಳುವಿನ ಕೆಲಸ ಶ್ಲಾಘನೀಯ ಎಂದರು.

ಕಂಬಳ ಅಕಾಡೆಮಿ ಸಂಚಾಲಕ ಕೆ. ಗುಣಪಾಲ ಕಡಂಬ ಮಾತನಾಡಿ, ತುಳು ಲಿಪಿಯನ್ನು ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಪರಿಚಯಿಸುವ ಕಾರ್ಯ ನಡೆಯಬೇಕು. ನಾಮಫಲಕಗಳಲ್ಲಿ ತುಳು ಲಿಪಿಯನ್ನೂ ಅಳವಡಿಸಬೇಕು. ಕರಾವಳಿಯಲ್ಲಿ ತುಳು ಉಳಿಸುವ ನಿಟ್ಟಿನಲ್ಲಿ ಕಂಬಳದ ಪಾತ್ರವೂ ಇದೆ ಎಂದು ಹೇಳಿದರು.

ಅದೃಷ್ಟ ತುಳುವೆ ಬಂಗಾರ್‌ ಪೆಜಿವೆ
ಆರಂಭದಿಂದ ಸಮಾರೋಪ ಸಮಾರಂಭದ ತನಕ ತುಳು ಸಮ್ಮೇಳನದಲ್ಲಿ ಭಾಗಿಯಾದವರಿಗೆ ಅದೃಷ್ಟ ತುಳುವೆ ಬಂಗಾರ್‌ ಪೆಜಿವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿತ್ತು. ಐವರಿಗೆ ಒಂದು ಗ್ರಾಂ ಚಿನ್ನದ ನಾಣ್ಯ ನೀಡುವುದೆಂದು ಸ್ವಾಮೀಜಿ ಘೋಷಿಸಿದ್ದರು. ಯಶೋಧರ ಸಾಲ್ಯಾನ್‌, ಸುಂದರ್‌, ಚಂದಪ್ಪ ನಾಯ್ಕ ಕೆ., ಜಯಲಕ್ಷ್ಮೀ, ರಕ್ಷಿತ್‌ ಕಾಸರಗೋಡು ಅವರು ಒಂದು ಗ್ರಾಂ ಬಂಗಾರದ ಬಹುಮಾನ ಪಡೆದರು.

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶಿಕ್ಷಕ ಶರತ್‌ ಆಳ್ವ ಚನಿಲ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗ್ರಾಮ ಸಂಯೋಜಕಿ ಲೀಲಾ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ನವೀನ್‌ ಶೆಟ್ಟಿ, ಪುತ್ತೂರು ವಿಸ್ತರಣಾಧಿಕಾರಿ ಸುರೇಶ್‌ ಶೆಟ್ಟಿ ಮೊಗರೋಡಿ, ಕೇಂದ್ರ ಕಚೇರಿಯ ವೀಕ್ಷಾ ರೈ ಸಮ್ಮಾನಪತ್ರ ವಾಚಿಸಿದರು.

ಒಡಿಯೂರು ಜೈ ಗುರುದೇವ ಕಲಾಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಒಡಿಯೂರು ಸ್ವಾಗತಿಸಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಪುತ್ತೂರು ಶಾಖೆಯ ವ್ಯವಸ್ಥಾಪಕ ನಿತ್ಯಾನಂದ ಶೆಟ್ಟಿ ಮನವಳಿಕೆ ವಂದಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಬಂಟ್ವಾಳ ವಿಸ್ತರಣಾ ಧಿಕಾರಿ ಸದಾಶಿವ ಅಳಿಕೆ ನಿರೂಪಿಸಿದರು.

ತುಳುಸಿರಿ ಮಾನಾದಿಗೆ 
ಸಾಹಿತ್ಯ ಕ್ಷೇತ್ರದಲ್ಲಿ ಉಗ್ಗಪ್ಪ ಪೂಜಾರಿ, ಜಾನಪದ ಕ್ಷೇತ್ರದಲ್ಲಿ ಕೇಶವ ಶೆಟ್ಟಿ ಕೆ. ಆದೂರು, ವಕೀಲ ವೃತ್ತಿ ಮತ್ತು ಬೇಸಾಯ ಕ್ಷೇತ್ರದಲ್ಲಿ ಕೆ. ಎಸ್‌. ನಂಬಿಯಾರ್‌, ದೈವಾರಾಧನೆ ಕ್ಷೇತ್ರದಲ್ಲಿ ನಿಟ್ಟೋಣಿ ಬೆಳ್ಳೂರು, ಕುಲಕಸುಬು ಕ್ಷೇತ್ರದಲ್ಲಿ ಕೊರಗಪ್ಪ ಮೂಲ್ಯ ಕನ್ಯಾನ ಅವರಿಗೆ ತುಳುಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತಿ ಮಲಾರು ಜಯರಾಮ ರೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.