ಪುತ್ತೂರು ಪೊಲೀಸರಿಗೆ ಸರಕಾರದ ಸೂರು
Team Udayavani, Feb 17, 2019, 5:56 AM IST
ಪುತ್ತೂರು : ಸಮರ್ಪಕ ವಸತಿ ವ್ಯವಸ್ಥೆ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಪುತ್ತೂರಿನ ಪೊಲೀಸರಿಗೆ ಸಿಹಿ ಸುದ್ದಿ ಬಂದಿದೆ. ಪೊಲೀಸರಿಗಾಗಿ ಪುತ್ತೂರಿನಲ್ಲಿ ಒಟ್ಟು 50 ವಸತಿ ವ್ಯವಸ್ಥೆ ಸಿದ್ಧಗೊಳ್ಳುತ್ತಿದ್ದು, ಅಂತಿಮ ಹಂತದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಉದ್ಘಾಟನೆಯ ಬಳಿಕ ಪೊಲೀಸರಿಗೆ ವಸತಿ ಹಂಚಿಕೆಯಾಗಲಿದೆ. ಪುತ್ತೂರು ನಗರ ಠಾಣೆಯಲ್ಲಿ ಒಟ್ಟು 58, ಸಂಚಾರ ಠಾಣೆಯಲ್ಲಿ 33 ಹಾಗೂ ಗ್ರಾಮಾಂತರ ಠಾಣೆಯಲ್ಲಿ 43 ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ.
ನಗರ ಠಾಣೆಯ ಹಿಂಭಾಗದಲ್ಲಿ ಇರುವ ಪೊಲೀಸ್ ಕರ್ರ್ಟರ್ಸ್ನಲ್ಲಿ ಹಾಲಿ 25 ವಸತಿ ವ್ಯವಸ್ಥೆ ಮಾತ್ರ ಇದೆ. ಕೆಲ ಪೊಲೀಸ್ ಸಿಬಂದಿ ಖಾಸಗಿ ವಸತಿ ವ್ಯವಸ್ಥೆಯಲ್ಲಿದ್ದಾರೆ. 50 ವಸತಿಗೃಹಗಳ ನಿರ್ಮಾಣವಾದಲ್ಲಿ ಪುತ್ತೂರಿನ ಹೆಚ್ಚಿನ ಪೊಲೀಸರಿಗೆ ಅನುಕೂಲವಾಗಲಿದೆ.
ಮೂರು ಕಡೆಗಳಲ್ಲಿ ನಿರ್ಮಾಣ
ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಮೇಲುಸ್ತುವಾರಿಯಲ್ಲಿ ಸುರತ್ಕಲ್ ನಿರ್ಮಿತಿ ಕೇಂದ್ರ ವಸತಿ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಪುತ್ತೂರು ನಗರ ಠಾಣೆಯ ಪೊಲೀಸರಿಗಾಗಿ ಸಾಮೆತ್ತಡ್ಕದಲ್ಲಿ 12 ವಸತಿಯ ಕಟ್ಟಡ, ಸಂಚಾರ ಠಾಣೆ ಹಾಗೂ ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಸಿಬಂದಿಗಾಗಿ ಸಂಪ್ಯ ಠಾಣೆಯ ಹಿಂಭಾಗದಲ್ಲಿ ಒಟ್ಟು 36 ವಸತಿಯ ಮೂರು ಕಟ್ಟಡಗಳು ಹಾಗೂ ಬನ್ನೂರಿನಲ್ಲಿ ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳಿಗಾಗಿ 2 ವಸತಿಯ ಕಟ್ಟಡ ನಿರ್ಮಾಣವಾಗುತ್ತಿವೆ.
ಶೀಘ್ರ ಕಾಮಗಾರಿ ಮುಕ್ತಾಯ
ಸಾಮೆತ್ತಡ್ಕದ ಪೊಲೀಸ್ ವಸತಿ ಕಟ್ಟಡ ನಿರ್ಮಾಣ ಮುಕ್ತಾಯಗೊಂಡಿದೆ. ಆದರೆ ಹೆಚ್ಚುವರಿ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ಆಗಿರುವುದರಿಂದ ಆ ಕೆಲಸ ಬಾಕಿ ಇದೆ. ಸಂಪ್ಯ ಗ್ರಾಮಾಂತರ ಠಾಣೆಯ ಬಳಿ ನಿರ್ಮಾಣವಾಗುತ್ತಿರುವ ವಸತಿ ಕಟ್ಟಡ ಕಾಮಗಾರಿ 15 ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಬನ್ನೂರಿನಲ್ಲಿ ನಿರ್ಮಾಣವಾಗುತ್ತಿರುವ ಪಿಎಸ್ಐ ವಸತಿ ಕಟ್ಟಡಕ್ಕೆ ಕಾಂಪೌಂಡ್ ನಿರ್ಮಾಣ ಕಾಮಗಾರಿ ನಡೆಯಬೇಕಿದೆ ಎಂದು ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ತಿಳಿಸಿದ್ದಾರೆ.
15 ಕೋಟಿ ರೂ. ವ್ಯಯ
ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ವಸತಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ನಿಂದ ನಿರ್ಮಿತಿ ಕೇಂದ್ರದ ಮೂಲಕ ಕೆಲಸಗಳು ನಡೆಯುತ್ತಿವೆ. ಕೆಲ ಕಡೆಗಳಲ್ಲಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅವರು ನಮಗೆ ಹಸ್ತಾಂತರಿಸಿದ ಬಳಿಕ ಉದ್ಘಾಟನೆಯ ದಿನಾಂಕ ನಿಗದಿಪಡಿಸಲಾಗುವುದು.
-ಬಿ.ಎಂ. ಲಕ್ಷ್ಮೀಪ್ರಸಾದ್,
ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ರಾಜೇಶ್ ಪಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ