ಉಚಿತ ಗ್ಯಾಸ್ ಸಂಪರ್ಕ ಸದುಪಯೋಗಪಡಿಸಿಕೊಳ್ಳಿ
Team Udayavani, Feb 17, 2019, 9:21 AM IST
ಕಾಣಿಯೂರು: ಮಹಿಳೆಯರು ಆರೋಗ್ಯವಂತರಾಗಿ, ಸ್ವಾವಲಂಬಿಯಾಗಿ ಬದುಕಲು, ಹೊಗೆಮುಕ್ತ ಅಡುಗೆ ಮಾಡುವಂತಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಪ್ರಧಾನಮಂತ್ರಿ ಉಜ್ವಲ ಗ್ಯಾಸ್ ಯೋಜನೆಯನ್ನು ಜಾರಿಗೆ ತಂದಿರುತ್ತಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಗ್ಯಾಸ್ ರಹಿತ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ಈ ಯೋಜನೆಯ ಮೂಲಕ ಕೊಡಲಾಗುತ್ತಿದೆ. ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಎಚ್.ಸಿ. ಕೃಷ್ಣ ಹೇಳಿದರು.
ಕಾಣಿಯೂರು ಗ್ರಾ.ಪಂ. ವ್ಯಾಪ್ತಿಯ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮಗಳ ಉಜ್ವಲ ಗ್ಯಾಸ್ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಕಿಟ್ಗಳ ವಿತರಣೆ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಗ್ಯಾಸ್ ಸುರಕ್ಷತೆ ಮತ್ತು ಉಪಯೋಗದ ಬಗ್ಗೆ ಸಂಪನ್ಮೂಲ ವ್ಯಕ್ತಿ ಗಣೇಶ್ ಮಾಹಿತಿ ನೀಡಿದರು. ಕಾಣಿಯೂರು ಗ್ರಾ.ಪಂ.
ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರಾದ ಸುರೇಶ್ ಓಡಬಾಯಿ, ಗಣೇಶ್ ಉದುನಡ್ಕ, ವೀರಪ್ಪ ಗೌಡ ಉದಲಡ್ಡ, ಪದ್ಮನಾಭ ಅಂಬುಲ, ರಾಮಣ್ಣ ಗೌಡ ಮುಗರಂಜ, ಲಲಿತಾ ತೋಟ, ರುಕ್ಮಿಣಿ ನಾಗಲೋಕ, ದಿನೇಶ್ ಇಡ್ಯಡ್ಕ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಡಾ| ವಿದ್ಯಾ, ಶಿಕ್ಷಕಿ ಮೋಹಿನಿ, ಮಣಿಕಂಠ ಗ್ಯಾಸ್ ಏಜೆನ್ಸಿಯ ಅರುಣ್ ಕುಮಾರ್, ಮೂಕಾಂಬಿಕಾ ಗ್ಯಾಸ್ ಏಜೆನ್ಸಿಯ ರಮೇಶ್ ಉಪಸ್ಥಿತರಿದ್ದರು. ಗಣೇಶ್ ಉದುನಡ್ಕ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ