ಧರ್ಮಸ್ಥಳ: ಜೈನ ಮುನಿ ಸಮಾಧಿ ಮರಣ


Team Udayavani, Feb 20, 2019, 1:00 AM IST

darmastala.jpg

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಬಳಿ ಮುನಿಗಳು ವಾಸ್ತವ್ಯ ಇದ್ದ ಕುಟೀರದಲ್ಲಿ ನಿಸ್ಪೃಹ ಸಾಗರ್‌ ಮುನಿ ಮಹಾರಾಜ್‌ (75) ಅವರು ಮಂಗಳವಾರ ಬೆಳಗ್ಗೆ ಏಳು ಗಂಟೆಗೆ ಸಮಾಧಿ ಮರಣ ಹೊಂದಿದರು.

ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ ದಿನವಾದ ಫೆ. 18ರಂದು ಅವರು ಸಲ್ಲೇಖನ ವೃತ ಕೈಗೊಂಡಿದ್ದರು. ಮರುದಿನ ಅವರು ಸಮಾಧಿ ಮರಣ ಹೊಂದಿದ್ದಾರೆ.

ಅಭಿಷೇಕದಲ್ಲಿ ಭಾಗಿ
ಮಹಾಮಸ್ತಕಾಭಿಷೇಕದಲ್ಲಿ ಪಾವನ ಸಾನ್ನಿಧ್ಯ ನೀಡಲು ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರ ಸಂಘದಲ್ಲಿ ಪೂಜ್ಯ ನಿಸ್ಪೃಹ ಸಾಗರ ಮುನಿ ಮಹಾರಾಜರು ಫೆ. 3ರಂದು ಧರ್ಮಸ್ಥಳ ಪುರಪ್ರವೇಶ ಮಾಡಿದ್ದರು. ಫೆ. 16, 17 ಮತ್ತು 18ರಂದು ನಡೆದ ಬಾಹುಬಲಿ ಮಸ್ತಕಾಭಿಷೇಕವನ್ನೂ ವೀಕ್ಷಿಸಿದ್ದರು. ಧರ್ಮಸ್ಥಳದಲ್ಲಿ ಬಸದಿ
ಬಳಿ ಇರುವ ಕುಟೀರದಲ್ಲಿ ಮುನಿ ಸಂಘದೊಂದಿಗೆ ಅವರು ಜಪ, ತಪ, ಧ್ಯಾನ, ಸ್ವಾಧ್ಯಾಯದಲ್ಲಿ ನಿರತರಾಗಿ ದ್ದರು. ಸೋಮವಾರ ಸಂಜೆ ಸಲ್ಲೇಖನ ವ್ರತಧಾರಣೆ ಮಾಡಿ, ಮಂಗಳವಾರ ಬೆಳಗ್ಗೆ  ಏಳು ಗಂಟೆಗೆ ಸಮಾಧಿ ಮರಣ ಹೊಂದಿದರು.
ಸಮಾಧಿ ಮರಣದ ಹಿನ್ನೆಲೆಯಲ್ಲಿ ಮುನಿ ಸಂಘದವರೆಲ್ಲರೂ ಹಾಗೂ ಮಾತಾಜಿಯವರು ಮಂಗಳ
ವಾರ ಉಪವಾಸ ವ್ರತ ಆಚರಿಸಿದರು. ಜಪ, ತಪ, ಹಾಗೂ ಧ್ಯಾನಗಳಲ್ಲಿ ನಿರತರಾದರು.
ಕ್ಷೇತ್ರದ ವತಿಯಿಂದ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, 
ಡಿ. ಹಷೇìಂದ್ರ ಕುಮಾರ್‌, ಸುಪ್ರಿಯಾ ಹಷೇìಂದ್ರ ಕುಮಾರ್‌, ಡಾ| ಬಿ. ಯಶೋವರ್ಮ ಅವರು ಅಂತಿಮ ಗೌರವ ಸಲ್ಲಿಸಿದರು.

ಹೀಗೆ ನಡೆಯಿತು ಅಂತ್ಯವಿಧಿ…
ಸಕಲ ವೈಭವದ ಮೆರವಣಿಗೆಯೊಂದಿಗೆ ಪಂಚನಮಸ್ಕಾರ ಮಂತ್ರ ಪಠಣ ಮಾಡುತ್ತಾ, ಕುಟೀರದಿಂದ ಅಲಂಕೃತ ಆಸನದಲ್ಲಿ ಕೊಂಡು ಹೋಗಿ ಬಸದಿ ಬಳಿ ಇರುವ ಜಾಗದಲ್ಲಿ ತ್ರಿಕೋನಾಕಾರದಲ್ಲಿ ಚಿತೆಯನ್ನು ರೂಪಿಸಿ, ಮೃತ ದೇಹವನ್ನು ಪದ್ಮಾಸನದಲ್ಲಿ ಕುಳ್ಳಿರಿಸಿ, ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.

ಮುನಿಗಳು ಮೃತದೇಹಕ್ಕೆ ನೀರು, ಹಾಲು, ತುಪ್ಪ ಮತ್ತು ಸಕ್ಕರೆಯ ಸೇಚನ ದೊಂದಿಗೆ ಅಭಿಷೇಕ ಮಾಡಿದರು. ಎಲ್ಲ ಮುನಿಗಳು ಮತ್ತು ಮಾತಾಜಿಯವರು ಪಂಚ ನಮಸ್ಕಾರ ಮಂತ್ರ ಪಠಣದೊಂದಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು. ನಿಸ್ಪೃಹ ಸಾಗರ ಮುನಿ ಮಹಾರಾಜರ ಪೂರ್ವಾಶ್ರಮದ ಮಕ್ಕಳಾದ ಸಂಜಯ ಕುಮಾರ್‌ ಮತ್ತು ಪುನೀತ್‌ಕುಮಾರ್‌ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಚಿತೆಗೆ ಗಂಧ ಮತ್ತು ಚಂದನದ ಕೊರಡುಗಳನ್ನು ಬಳಸಿ ಮೇಲೆ ತುಪ್ಪ ಸುರಿಯಲಾಯಿತು. ಚಿತೆಯ ಸನಿಹದಲ್ಲಿ ಮುನಿ ಸಂಘದವರು ಮತ್ತು ಮಾತಾಜಿಯವರು ಸಾಮೂಹಿಕ ಪ್ರತಿಕ್ರಮಣ ಮಾಡಿದರು. ಪ್ರಾಯಶ್ಚಿತ್ತ ಮಾಡಿಕೊಳ್ಳುವುದಕ್ಕೆ ಪ್ರತಿಕ್ರಮಣ ಎನ್ನಲಾಗುತ್ತಿದ್ದು, ಮುನಿಗಳು ಪ್ರತಿ ದಿನ ಮೂರು ಬಾರಿ ಪ್ರತಿಕ್ರಮಣ ಮಾಡುತ್ತಾರೆ.

ಆಚಾರ್ಯ ಶ್ರೀ 108 ವರ್ಧಮಾನ ಸಾಗರ್‌ ಮುನಿ ಮಹಾರಾಜರು  ಹಾಗೂ ಆಚಾರ್ಯ ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜ್‌ ಅಂತ್ಯ ಸಂಸ್ಕಾರದ ನೇತೃತ ವಹಿಸಿದ್ದರು.

ಏನಿದು ಸಲ್ಲೇಖನ?
ಬದುಕಿನ ಕೊನೆ ಸಮೀಪಿಸುತ್ತಿದೆ ಎಂದು ಅರಿವಾದಾಗ ಜೈನ ಮುನಿಗಳು ಉಪವಾಸ ಕೈಗೊಂಡು ದೇಹತ್ಯಾಗ ಮಾಡುವುದೇ ಸಲ್ಲೇಖನ ವ್ರತ. ಮರಣವನ್ನು ದುಃಖಕರ ಸಂಗತಿ ಎಂದು ಭಾವಿಸದೆ ಸಾವನ್ನೇ ಮಹಾನವಮಿ ಎಂದು ಭಾವಿಸಿ, ಮಹೋತ್ಸವವಾಗಿ ಆಚರಿಸುವುದು ಜೈನರ ಸಂಪ್ರದಾಯ. ಅಂದರೆ ಸಾವು ದೇಹಕ್ಕೆ ಮಾತ್ರ; ಆತ್ಮನಿಗೆ ಸಾವಿಲ್ಲ. ದೇಹ ನಶ್ವರ; ಆತ್ಮ ಶಾಶ್ವತ ಎಂಬ ನಂಬಿಕೆ ಅವರದು.

ಮುನಿಗಳ ಪರಿಚಯ
ನಿಸ್ಪೃಹ ಸಾಗರ ಮುನಿ ಮಹಾರಾಜ್‌ ಮೂಲತಃ ರಾಜಸ್ಥಾನದ ಕಿಶನ್‌ಗಢದವರು. ಪೂರ್ವಾಶ್ರಮದ ಹೆಸರು ಪ್ರೇಮಚಂದ್‌ ಪಹಾಡಿಯಾ. 

ಎಸೆಸೆಲ್ಸಿ ಶಿಕ್ಷಣ ಪಡೆದ ಅವರಿಗೆ ಬಾಲ್ಯದಿಂದಲೇ ತಪಸ್ಸು, ಧ್ಯಾನ, ಧರ್ಮ, ಅಹಿಂಸೆ, ಸ್ವಾಧ್ಯಾಯದಲ್ಲಿ ವಿಶೇಷ ಆಸಕ್ತಿ ಇತ್ತು. 2009ರಲ್ಲಿ ಜೈನರ ಪವಿತ್ರ ತೀರ್ಥಕ್ಷೇತ್ರ ಚಂಪಾಪುರಿಯಲ್ಲಿ ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜರಿಂದ ಮುನಿ ದೀಕ್ಷೆ ಪಡೆದಿದ್ದು, ಬಳಿಕ ಮುನಿ ಸಂಘದಲ್ಲಿದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.