ಹೆಚ್ಚುವರಿ ಆಧಾರ್‌ ಕೇಂದ್ರ ತೆರೆಯಲು ಕ್ರಮ


Team Udayavani, Feb 21, 2019, 6:38 AM IST

21-february-8.jpg

ಸುಳ್ಯ : ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ಆಧಾರ್‌ ಕೇಂದ್ರದಲ್ಲಿ ದಿನವೊಂದಕ್ಕೆ 20 ಮಂದಿಗೆ ಮಾತ್ರ ಅವಕಾಶ ಇದ್ದು, ಜನರ ಬೇಡಿಕೆ ಹಿನ್ನೆಲೆಯಲ್ಲಿ ಹೆಚ್ಚುವರಿ ಎರಡು ಕಂಪ್ಯೂಟರ್‌ ಅಳವಡಿಕೆ ಹಾಗೂ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಸ್ಟೇಟ್‌ ಬ್ಯಾಂಕ್‌ ಬಳಿಯ ಆಧಾರ್‌ ಕೇಂದ್ರ ಪರಿಶೀಲಿಸಿ ಅಲ್ಲಿನ ಸಮಸ್ಯೆ ಆಲಿಸಿದ ಸಚಿವರು, ಈಗಿರುವ ಕೇಂದ್ರದಲ್ಲಿ ಹೆಚ್ಚುವರಿ ಕಂಪ್ಯೂಟರ್‌ ಅಳವಡಿಸಲು ಸೂಚನೆ ನೀಡಿದರು. ಹೆಚ್ಚುವರಿ ಕೇಂದ್ರ ಸ್ಥಾಪನೆ ಬಗ್ಗೆ ದೂರವಾಣಿ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶವಾಗಾರಕ್ಕೆ ಹೊಸ ಕಟ್ಟಡ
ಶವಾಗಾರ ಕೇಂದ್ರ ಕಿರಿದಾಗಿದ್ದು, ಏಕಕಾಲದಲ್ಲಿ ಎರಡು ಪ್ರಕರಣ ನಡೆದರೆ ಇಲ್ಲಿ ವ್ಯವಸ್ಥೆ ಇಲ್ಲ ಎಂಬ ಮಾಹಿತಿ ಪಡೆದ ಸಚಿವರು, ಹೊಸ ಕಟ್ಟಡಕ್ಕೆ ಅನುದಾನ ಒದಗಿಸಲಾಗುವುದು ಎಂದರು.

ಭೇಟಿಯ ಸಂದರ್ಭದಲ್ಲಿ ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ, ತಹಶೀಲ್ದಾರ್‌ ಕುಂಞಿ ಅಹಮ್ಮದ್‌, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ರಾಜೀವ ಗಾಂಧಿ ವಿ.ವಿ.
ಸಿಂಡಿಕೇಟ್‌ ಸದಸ್ಯ ಡಾ| ರಘು, ವಕ್ಫ್ ರಾಜ್ಯ ಸದಸ್ಯ ಸಂಶುದ್ದೀನ್‌, ಧನಂಜಯ ಅಡ್ಪಂಗಾಯ, ಮುಸ್ತಾಫ ಕೆ.ಎಂ., ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ, ಆಶೋಕ್‌ ನೆಕ್ರಾಜೆ, ಜಿ.ಕೆ. ಹಮೀದ್‌, ಭವಾನಿಶಂಕರ ಕಲ್ಮಡ್ಕ, ಶಾಫಿ  ಕುತ್ತಮೊಟ್ಟೆ ಉಪಸ್ಥಿತರಿದ್ದರು.

ಅರಂಬೂರು ಸೇತುವೆ, ಇಂದಿರಾ ಕ್ಯಾಂಟಿನ್‌ ವೀಕ್ಷಣೆ 
ಅರಂಬೂರು ಸೇತುವೆ ವೀಕ್ಷಿಸಿದ ಸಚಿವರು, ಜೂನ್‌ ಮೊದಲ ವಾರದಲ್ಲಿ ಸಂಚಾರ ಮುಕ್ತವಾಗಬೇಕು ಎಂದು ಎಂಜಿನಿಯರ್‌ಗಳಿಗೆ ಸೂಚಿಸಿದರು. ಸೇತುವೆ ಫಿಲ್ಲರ್‌ ಮಧ್ಯೆ ಡ್ಯಾಂ ರಚನೆ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲೂಕು ಕಚೇರಿ ಬಳಿಯಲ್ಲಿನ ಇಂದಿರಾ ಕ್ಯಾಂಟಿನ್‌ ಕಾಮಗಾರಿ ಪರಿಶೀಲಿಸಿದ ಸಚಿವರು, ಆದಷ್ಟು ಬೇಗ ಕಾರ್ಯಾರಂಭಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಸರಕಾರಿ ಆಸ್ಪತ್ರೆಗೆ ಭೇಟಿ
ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಸ್ಕ್ಯಾನಿಂಗ್‌ ಯಂತ್ರ ಇದ್ದರೂ ತಪಾಸಣೆಗೆ ತಜ್ಞರು ಯಾಕಿಲ್ಲ ಎಂದರು. ತಜ್ಞ ವೈದರ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅಲ್ಲಿಯ ತನಕ ಖಾಸಗಿ ಸೆಂಟರ್‌ ಜತೆ ಮಾತುಕತೆ ನಡೆಸಿ ಸರಕಾರಿ ಆಸ್ಪತ್ರೆಯಿಂದ ತೆರಳುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಸ್ಕ್ಯಾನಿಂಗ್‌ ವ್ಯವಸ್ಥೆ ಮಾಡುವಂತೆ, ಕ್ಯಾಶುವಲಿಟ್‌ ಕೊಠಡಿ ವಿಸ್ತರಣೆಗೆ ಸೂಚನೆ ನೀಡಿದರು. ವೈದ್ಯರ, ಸಿಬಂದಿ ಕೊರತೆ ಬಗ್ಗೆ ವೈದ್ಯಾಧಿಕಾರಿ ಡಾ| ಭಾನುಮತಿ ಅವರಿಂದ ಮಾಹಿತಿ ಪಡೆದರು. ಬೆಡ್‌ ವ್ಯವಸ್ಥೆ ಕೊರತೆ ಇರುವ ಬಗ್ಗೆ ವೈದ್ಯಾಧಿಕಾರಿ ಗಮನ ತಂದರು. ಆಸ್ಪತ್ರೆಯಲ್ಲಿ ಇರುವ ಉಳಿಕೆ ಹಣದಿಂದ ಖರೀದಿಸುವಂತೆ ಸಚಿವರು ಸೂಚಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.