ಕಾಂತಮಂಗಲ-ಅಜ್ಜಾವರ ರಸ್ತೆಗೆ ಕೊನೆಗೂ ಗುದ್ದಲಿ ಪೂಜೆ


Team Udayavani, Feb 23, 2019, 5:35 AM IST

23-february-3.jpg

ಜಾಲ್ಸೂರು: ರಾಜಕೀಯ ಸಮರಕ್ಕೆ ವೇದಿಕೆಯಾಗಿದ್ದ ಕಾಂತ ಮಂಗಲ- ಅಜ್ಜಾವರ ರಸ್ತೆ ದುರಸ್ತಿಗೆ ಕೊನೆಗೂ ಗುದ್ದಲಿ ಪೂಜೆ ನೆರವೇರಿದೆ. ಸುಳ್ಯ-ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸಿಆರ್‌ಎಫ್‌ ಯೋಜನೆಯಡಿ 6 ಕೋ. ರೂ. ವೆಚ್ಚದಲ್ಲಿ ಕಾಂತಮಂಗಲ ವೃತ್ತದಿಂದ ಅಜ್ಜಾವರ ಗ್ರಾಮದ ಅಡ್ಪಂಗಾಯ ತನಕ ಆರು ಕಿ.ಮಿ. ರಸ್ತೆಗೆ ಡಾಮರು ಕಾಮಗಾರಿ ಆರಂಭಗೊಳ್ಳಲಿದೆ. ಸಿದ್ಧತೆಗಳು ಪ್ರಗತಿಯಲ್ಲಿದೆ.

ಮಾರ್ಚ್‌ ಒಳಗೆ ಪೂರ್ಣ?
ಮುಂದಿನ ಮಾರ್ಚ್‌ನೊಳಗೆ ರಸ್ತೆ ಪೂರ್ಣಗೊಳ್ಳಲಿದೆ ಎನ್ನುವುದು ಇಲಾಖೆ ಮಾಹಿತಿ. ಅಲ್ಲಿಯ ತನಕ ಕಾಲಾವಕಾಶ ಇದೆ. ಮೊದಲ ಹಂತದಲ್ಲಿ ಮಳೆಗಾಲಕ್ಕಿಂತ ಮೊದಲು 2 ಕಿ.ಮೀ. ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅನಂತರದ ನಾಲ್ಕು ಕಿ.ಮೀ. ರಸ್ತೆ ವಿಸ್ತರಣೆ, ಸಮತಟ್ಟು ಕಾಮಗಾರಿ ನಡೆಯಲಿದೆ. ಮಳೆಗಾಲ ಕಳೆದ ಬಳಿಕ ಅದರ ಡಾಮರು ಕೆಲಸ ನಡೆಯುತ್ತದೆ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ರಸ್ತೆ 3 ಮೀ. ಅಗಲವಿದ್ದು, ಅದು 5.5 ಮೀಟರ್‌ ಅಗಲಗೊಳ್ಳಲಿದೆ. ತಿರುವು ರಸ್ತೆ ಸುಧಾರಣೆ, ಖಾಸಗಿ ಜಾಗದಲ್ಲಿ ರಸ್ತೆ ಅಗಲ ಕಾಮಗಾರಿ ಇತ್ಯಾದಿ ಕೆಲಸಗಳು ಸೇರಿವೆ. ಒಟ್ಟು 9 ಮೀಟರ್‌ ಅಗಲದಲ್ಲಿ 5.5 ಮೀಟರ್‌ನಷ್ಟು ಡಾಮರು ರಸ್ತೆ, ಉಳಿದದ್ದು ಚರಂಡಿ ಪಾದಚಾರಿ ನಡಿಗೆಗೆ ಬಳಕೆಯಾಗಲಿದೆ.

ಹಲವು ವರ್ಷದ ವ್ಯಥೆ
ಕಾಂತಮಂಗಲದಿಂದ ಅಜ್ಜಾವರ ಸಂಪರ್ಕದ 6 ಕಿ.ಮೀ. ರಸ್ತೆ ಹೊಂಡ ತುಂಬಿ ಸಂಚಾರಕ್ಕೆ ಅಯೋಗ್ಯವಾಗಿತ್ತು. ಕೇರಳ- ಕರ್ನಾಟಕ ಗಡಿಭಾಗ ಮಂಡೆಕೋಲು ಸಂಪರ್ಕದ ರಸ್ತೆ ಇದಾಗಿದ್ದು, ಹಲವು ವರ್ಷಗಳಿಂದ ಈ ಭಾಗದ ಜನರು ರಸ್ತೆ ದುರಸ್ತಿಗೆ ಆಗ್ರಹಿಸುತ್ತಿದ್ದರು. 2 ವರ್ಷಗಳ ಹಿಂದೆ ಶಾಸಕ ಎಸ್‌. ಅಂಗಾರ ಅವರು ನಮ್ಮ ಗ್ರಾಮ- ನಮ್ಮ ರಸ್ತೆ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದರು. ಸರ್ವೆ ಪೂರ್ಣಗೊಂಡಿತ್ತು. ಇದೇ ವೇಳೆ ಈ ರಸ್ತೆಗೆ ಸಿಆರ್‌ಎಫ್‌ (ಕೇಂದ್ರ) ನಿಧಿಯಿಂದ 6 ಕೋಟಿ ರೂ. ಮಂಜೂರಾತಿಗೊಂಡಿತ್ತು. ಹಾಗಾಗಿ ನಮ್ಮ ಗ್ರಾಮ- ನಮ್ಮ ರಸ್ತೆ ಯೋಜನೆಯಡಿ ಮಂಜೂರಾತಿಗೊಂಡ 4 ಕೋಟಿ ರೂ. ಅನುದಾನವನ್ನು ಬೇರೆ ರಸ್ತೆಗೆ ವರ್ಗಾಯಿಸಿ, ಸಿಆರ್‌ಎಫ್‌ ನಿಧಿಯಿಂದ ಬಿಡುಗಡೆಗೊಂಡ ಅನುದಾನ ಬಳಸಲು ನಿರ್ಧರಿಸಲಾಗಿತ್ತು.

ಟೆಂಡರ್‌ ಹಂತದಲ್ಲಿ ಪೆಂಡಿಂಗ್‌
ಸಿಆರ್‌ಎಫ್‌ ಅನುದಾನ ಟೆಂಡರ್‌ ಹಂತದಲ್ಲಿ ಬಾಕಿ ಆಗಿತ್ತು. ಕೇಂದ್ರ ಸರಕಾರ ಹಣ ನೀಡಿಲ್ಲ. ಹಾಗಾಗಿ ಸಿಆರ್‌ಎಫ್‌ ಅನುದಾನದಡಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್‌ ಮುಖಂಡರು ದೂರಿದರೆ, ರಾಜ್ಯ ಸರಕಾರ ಉದ್ದೇಶಪೂರ್ವಕವಾಗಿ ಅನುದಾನ ನೀಡದೆ ಕಾಮಗಾರಿಗೆ ತಡೆ ಒಡ್ಡಿದೆ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿತ್ತು. ವಿಧಾನಸಭಾ ಚುನಾವಣೆ ಸಂದರ್ಭ ಎರಡು ರಾಜಕೀಯ ಪಕ್ಷಗಳ ರಸ್ತೆ ವಿಚಾರದಲ್ಲಿ ಪರಸ್ಪರ ಆರೋಪ – ಪ್ರತ್ಯಾರೋಪಗಳಿಗೆ ಇದು ವೇದಿಕೆ ಆಗಿ ಮಾರ್ಪಾಟ್ಟಿತ್ತು. ರಸ್ತೆ ಅಭಿವೃದ್ಧಿ ವಿಚಾರವಾಗಿ ಕಾಲಾ°ಡಿಗೆ ಜಾಥಾ, ಅಜ್ಜಾವರ ನಾಗರಿಕ ಹಿತರಕ್ಷಣ ವೇದಿಕೆ, ರಸ್ತೆ ಹೋರಾಟ ಸಮಿತಿ ವತಿಯಿಂದ ಪ್ರತ್ಯೇಕ ಪ್ರತಿಭಟನೆ, ಅಧಿಕಾರಿಗೆ ದಿಗ್ಬಂಧನ ಹಾಕಿ ರಸ್ತೆ ತಡೆ, ಎಂಜಿನಿಯರ್‌ ಅವರು ಸಿಆರ್‌ಎಫ್‌ ಅನುದಾನದ ಕುರಿತಂತೆ ನಡೆಸಿದ ದೂರವಾಣಿ ಸಂಭಾಷಣೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿದ್ಯಾಮಾನಗಳು ಕೂಡ ನಡೆದಿತ್ತು.

ರಸ್ತೆ ಕಾಮಗಾರಿಗೆ ಚಾಲನೆ
ಕಾಂತಮಂಗಲದಿಂದ ಅಜ್ಜಾವರ ಗ್ರಾಮದ ಅಡ್ಪಂಗಾಯ ತನಕ ಆರು ಕಿ.ಮಿ. ರಸ್ತೆ ಅಭಿವೃದ್ಧಿಗೆ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಜಿ.ಪಂ. ಸದಸ್ಯ ರಾದ ಹರೀಶ್‌ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಡೆಕೋಲು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷ ಪ್ರಕಾಶ್‌ ಪೆರಾಜೆ, ಪ್ರಮುಖರಾದ ನವೀನ್‌ ಕುಮಾರ್‌ ಮೇನಾಲ, ಸುರೇಶ್‌ ಕಣೆಮರಡ್ಕ, ಸುಬೋದ್‌ ಶೆಟ್ಟಿ ಮೇನಾಲ, ಶಿವಪ್ರಸಾದ್‌ ಉಗ್ರಾಣಿಮನೆ, ವೆಂಕಟ್ರಮಣ ಮುಳ್ಯ, ಮಹೇಶ್‌ ಕುಮಾರ್‌ ಮೇನಾಲ, ಪ್ರಬೋದ್‌ ಶೆಟ್ಟಿ ಮೇನಾಲ, ಆನಂದ ರಾವ್‌ ಕಾಂತ ಮಂಗಲ, ಅಬ್ದುಲ್‌ ಕುಂಞಿ ನೇಲ್ಯಡ್ಕ, ಹರೀಶ್‌ ರೈ ಉಬರಡ್ಕ, ಉದಯ ಆಚಾರ್‌, ಜನಾರ್ದನ ಬರೆಮೇಲು, ಬಯಂಬು ಭಾಸ್ಕರ ರೈ, ಸಂತೋಷ್‌ ರೈ, ಕಮಲಾಕ್ಷ ರೈ, ಸುನಿಲ್‌ ರೈ ಕಿಟ್ಟಣ್ಣ ರೈ, ವಿನುತಾ ಪಾತಿಕಲ್ಲು, ರಾಂಪ್ರಸಾದ್‌, ಎಂಜಿನಿಯರ್‌ ನಾಗರಾಜ್‌ ಉಪಸ್ಥಿತರಿದ್ದರು.

ಮಳೆಗಾಲದ ಮುನ್ನ ಪೂರ್ಣ 
ಒಟ್ಟು 6 ಕಿ.ಮೀ. ರಸ್ತೆಯಲ್ಲಿ ಮಳೆಗಾಲದ ಮೊದಲು 2 ಕಿ.ಮೀ. ರಸ್ತೆ ಡಾಮರು ಕಾಮಗಾರಿ ಪೂರ್ಣಗೊಳ್ಳಲಿದೆ. ಉಳಿದ 4 ಕಿ.ಮೀ. ರಸ್ತೆಯನ್ನು ಡಾಮರು ಕಾಮಗಾರಿಗೆ ಸಿದ್ಧಗೊಳಿಸಿ ಮಳೆಗಾಲ ಕಳೆದ ಅನಂತರ ಡಾಮರು ಹಾಕಲಾಗುವುದು. ಈಗಿನ ರಸ್ತೆಗಿಂತ 2.5 ಮೀ.ಅಗಲ ಹೆಚ್ಚಳವಾಗುವ ಕಾರಣ ವಿಸ್ತರಣೆ ಕಾಮಗಾರಿಯು ಆಗಬೇಕಿದೆ.
ನಾಗರಾಜ್‌,
ಎಂಜಿನಿಯರ್‌, ರಾಷ್ಟ್ರೀಯ ಹೆದ್ದಾರಿ ವಿಭಾಗ

ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.