ಬ್ರಹ್ಮಕಲಶದೊಂದಿಗೆ ನಮ್ಮ ಜೀವನವೂ ಪರಿಶುದ್ಧಗೊಳ್ಳಲಿ


Team Udayavani, Mar 16, 2019, 9:40 AM IST

16-march-15.jpg

ಬಡಗನ್ನೂರು : ದೇವರ ಅನುಗ್ರಹಕ್ಕಾಗಿ ನಿರ್ದಿಷ್ಟ ದಿನ ವ್ರತ ಆಚರಣೆ ಮಾಡಿ ಸಂಕಲ್ಪ ಮಾಡುವುದು ವಾಡಿಕೆ. ದೇವಸ್ಥಾನದ ಬ್ರಹ್ಮಕಲಶವು ನಮ್ಮ ಜೀವನವನ್ನೂ ಪರಿಶುದ್ಧಗೊಳಿಸಿ, ಜೀವನದ ಬದಲಾವಣೆಗೆ ಪೂರಕವಾಗಿರಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದರು.

ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನ ಹಾಗೂ ಕಿನ್ನಿಮಾಣಿ-ಪೂಮಾಣಿ ದೈವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹನುಮಗಿರಿ ಧರ್ಮಶ್ರೀ ಪ್ರತಿಷ್ಠಾನದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ ಮಾತನಾಡಿ, ಈ ಭಾಗದವರು ಮನಃಪೂರ್ವಕವಾಗಿ ದೇವಸ್ಥಾನದ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವುದರ ಫಲವಾಗಿ ಭವ್ಯ ದೇಗುಲ ನಿರ್ಮಾಣವಾಗಿದೆ. ದೇವಸ್ಥಾನಗಳು ಸಮಾಜದ ಎಲ್ಲ ವರ್ಗದ ಜನರನ್ನು ಒಟ್ಟು ಸೇರಿಸುವ ಮೂಲಕ ಒಗ್ಗಟ್ಟಿನ ಕೇಂದ್ರವಾಗಿ ಬೆಳೆಯಬೇಕು ಎಂದರು.

ಬೆಳಿಯೂರುಕಟ್ಟೆ ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಹರಿಪ್ರಕಾಶ್‌ ಬೈಲಾಡಿ, ನ್ಯಾಯವಾದಿ ಕೃಪಾಶಂಕರ್‌, ಉದ್ಯಮಿ ದಿವ್ಯಾ ಕೆ. ಶೆಟ್ಟಿ, ಅಳಿಯೂರು ಆದಿನಾಥ ಬಸದಿ ಆಡಳಿತ ಮೊಕ್ತೇಸರ ಪ್ರಕಾಶ್‌ ಶೆಟ್ಟಿ ಮಜಲೋಡಿಗುತ್ತು, ಮುಂಡೂರು ಪ್ರಾ. ಕೃ.ಪ.ಸ. ಸಂಘದ ಸಿಇಒ ಜಯಪ್ರಕಾಶ್‌ ರೈ ಚೆಲ್ಯಡ್ಕ, ಉದ್ಯಮಿ ಗೋಪಾಲಕೃಷ್ಣ ಬೋರ್ಕರ್‌ ಕರೋಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಪ್ರಗತಿಪರ ಕೃಷಿಕೆ ತಿಲೋತ್ತಮೆ ಎಸ್‌. ರೈ, ಬಾಳಪ್ಪ ರೈ ಬಾಲ್ಯೊಟ್ಟುಗುತ್ತು, ದೇರಣ್ಣ ರೈ ಪಾಪನಡ್ಕ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪ್ರಮೋದ್‌ ಕುಮಾರ್‌ ಆರಿಗ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಬೋರ್ಕರ್‌, ಪಡುಮಲೆ ಕೋಟಿ-ಚೆನ್ನಯ ಐತಿಹಾಸಿಕ ಕ್ಷೇತ್ರ ಸಂವರ್ಧನ ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ರೈ ಕುದ್ಕಾಡಿ, ದಾನಿ ಶೀನಪ್ಪ ರೈ ಕೊಡಂಕಿರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ ಉಪಸ್ಥಿತರಿದ್ದರು.

ಸಮ್ಮಾನ
ಜೀರ್ಣೋದ್ಧಾರ ಕಾರ್ಯಗಳಿಗೆ ಸಹಕರಿಸಿದ ಕೃಷ್ಣ ಶೆಟ್ಟಿ ಅವರ ಪತ್ನಿ ದಿವ್ಯಾ ಕೆ. ಶೆಟ್ಟಿ, ದಾರಮ್ಮ ರೈ ಆನಾಜೆ, ದಾಮೋದರ ರೈ ಪಡ್ಡಂಬೈಲು, ಕೊರಗಪ್ಪ ರೈ, ರಶ್ಮೀ ಭಾರದ್ವಾಜ್‌, ದೇವಕಿ ರೈ ಆನಾಜೆ, ಪುರಂದರ ರೈ ಪೆಲತ್ತಡಿ, ವಸಂತ ಗೌಡ ಚೆಲ್ಯರಮೂಲೆ, ಅವಿನಾಶ್‌ ರೈ ಕುಡ್ಚಿಲ, ನಾರಾಯಣ ಭಟ್‌ ಕುಕ್ಕುಪುಣಿ, ನಾರಾಯಣ ರೈ ಕುದ್ಕಾಡಿ, ಬಾಳಪ್ಪ ರೈ ಬಾಲ್ಯೊಟ್ಟುಗುತ್ತು ಅವರನ್ನು ಸಮ್ಮಾನಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ನಾಗೇಶ್‌ ಗೌಡ ಪುಳಿತ್ತಡಿ ಪ್ರಸ್ತಾವನೆಗೈದರು. ಜತೆ ಕಾರ್ಯದರ್ಶಿ ಸಂಜೀವ ಪೂಜಾರಿ ಕಾನಾ ವಂದಿಸಿದರು. ಶಿವಪ್ರಸಾದ್‌ ತಲೆಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ದ್ವಾರದ ಕೊಡುಗೆ 
ದಿ| ಕೃಷ್ಣ ಶೆಟ್ಟಿ ಅವರ ಪುತ್ರಿ ಕಾವ್ಯಾ ಶೆಟ್ಟಿ ಮಾತನಾಡಿ, ತಂದೆಯವರು ನಿಡ³ಳ್ಳಿ ದೇವಸ್ಥಾನಕ್ಕೆ 24 ಲಕ್ಷ ರೂ. ವ್ಯಯಿಸಿದ್ದರು. ಅವರ ಸ್ಮರಣಾರ್ಥ ದೇವಸ್ಥಾನಕ್ಕೆ ದ್ವಾರವನ್ನು ನಿರ್ಮಿಸಿಕೊಡುವುದಾಗಿ ಅವರು ಹೇಳಿದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.