ಸಂಪಾಜೆ ನಾಡಕಚೇರಿ: ನೂರೆಂಟು ಸಮಸ್ಯೆ


Team Udayavani, Mar 17, 2019, 4:43 AM IST

17-march-2.jpg

ಅರಂತೋಡು: ಸಂಪಾಜೆ ಗೇಟ್‌ ಬಳಿಯ ಕೊಡಗು ಸಂಪಾಜೆ ನಾಡ ಕಚೇರಿ ಶಿಥಿಲಗೊಂಡಿದ್ದು, ನೂರೆಂಟು ಸಮಸ್ಯೆ ಎದುರಾಗಿದೆ. ಈ ನಾಡ ಕಚೇರಿ ವ್ಯಾಪ್ತಿಯ ಜನರು ಸಂಕಷ್ಟಕೊಳಗಾಗಿದ್ದಾರೆ.

ಕಟ್ಟಡದ ಛಾವಣಿ ಕುಸಿದಿದೆ. ಪಕ್ಕಾಸು, ರೀಪುಗಳು ಗೆದ್ದಲು ಹಿಡಿದು ಶಿಥಿಲಗೊಂಡಿವೆ. ಛಾವಣಿ ಕುಸಿದ ಹಿನ್ನೆಲೆಯಲ್ಲಿ ಹೆಂಚುಗಳು ಸಮರ್ಪಕವಾಗಿ ನಿಲ್ಲದೆ ಮಳೆಗಾಲದಲ್ಲಿ ಸೋರುತ್ತಿವೆ. ಈ ಹಿನ್ನೆಲೆಯಲ್ಲಿ ಛಾವಣಿಗೆ ಟಾರ್ಪಲ್‌ ಅಳವಡಿಸಲಾಗಿದೆ. ಇಲ್ಲಿರುವ ಸಿಬಂದಿ ದಿನನಿತ್ಯ ಭಯದಿಂದಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಲಭ್ಯರಿಲ್ಲದ ಕಂದಾಯ ನಿರೀಕ್ಷಕರು
ಕೊಡಗಿನ ಪ್ರಕೃತಿ ವಿಕೋಪದ ಬಳಿಕ ಇಲ್ಲಿಯ ಕಂದಾಯ ನಿರೀಕ್ಷಕರು ಜನರ ಸೇವೆಗೆ ಸಿಗುತ್ತಿಲ್ಲ ಎನ್ನುವ ಆರೋಪವಿದೆ. ಪ್ರಕೃತಿ ವಿಕೋಪದ ಮೊದಲು ವಾರಕ್ಕೆ ಎರಡು ದಿನವಾದರೂ ಅವರು ಲಭ್ಯರಿರುತ್ತಿದ್ದರು. ಅನಂತರದ ದಿನಗಳಲ್ಲಿ ಕಂದಾಯ ನಿರೀಕ್ಷಕರು ನಾಡಕಚೇರಿಗೆ ಬಂದಿಲ್ಲ ಎಂದು ಇಲ್ಲಿಯ ಜನರು ಹೇಳುತ್ತಾರೆ. ಮಡಿಕೇರಿ ತಾಲೂಕಿಗೆ ಸೇರಿದ ಸಂಪಾಜೆ ಹೋಬಳಿಯ ನಾಡಕಚೇರಿ ವ್ಯಾಪ್ತಿಗೆ ಪೆರಾಜೆ, ಸಂಪಾಜೆ, ಮದೆ, ಚೆಂಬು, ಕಾಟಿಕೇರಿ, ಮೇಕೇರಿ, ಬಿಳಿಗೇರಿ, ಹಾಕತ್ತೂರು, ಕಗ್ಗೊಡ್ಲು, ಹೆರವನಾಡು, ಅರ್ವತ್ತೂಕ್ಲು ಮೊದಲಾದ ಗ್ರಾಮಗಳು ಒಳಪಡುತ್ತಿವೆ. ಇಲ್ಲಿ ಸಾವಿರಾರು ಜನರ ಭೂಮಿಯ ಮೂಲ ದಾಖಲಾತಿಗಳಿದ್ದು, ಕಟ್ಟಡ ಶಿಥಿಲಗೊಂಡ ಹಿನ್ನೆಲೆಯಲ್ಲಿ ದಾಖಲೆಗಳು ನಾಶವಾಗುವ ಭೀತಿ ಸ್ಥಳೀಯರಿಗೆ ಎದುರಾಗಿದೆ.

ಇಂಟರ್‌ನೆಟ್‌ ಸಂಪರ್ಕ ಇಲ್ಲ
ಆಧುನಿಕ ಕಾಲದಲ್ಲಿ ಎಲ್ಲ ವ್ಯವಹಾರಗಳೂ ಅಂತರ್ಜಾಲದ ಮೂಲಕ ನಡೆಯುತ್ತಿರುವುದರಿಂದ ಪ್ರತಿ ಕಚೇರಿಗೆ ಇಂಟರ್‌ನೆಟ್‌ ಸಂಪರ್ಕ ಅತ್ಯವಶ್ಯಕ.

ಆದರೆ ಇಲ್ಲಿಗೆ ಇಂಟರ್‌ನೆಟ್‌ ಸಂಪರ್ಕ ಇನ್ನೂ ಆಗದಿರುವುದು ವಿಪರ್ಯಾಸ. ನಾಡಕಚೇರಿಯಲ್ಲಿ ಇಂಟರ್‌ ನೆಟ್‌ ಸಂಪರ್ಕ ಇಲ್ಲದಿರುವುದರಿಂದ ಅಂತರ್ಜಾಲದ ಮೂಲಕ ಆಗುವ ಕೆಲಸಗಳು, ಸಾಮಾನ್ಯರಿಗೆ ಬೇಕಾಗುವ ಆರ್‌ಟಿಸಿ ಇತರ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇದರಿಂದ ನಾಡಕಚೇರಿ ವ್ಯಾಪ್ತಿಯ ಜನರು ಪ್ರತಿದಿನ ಕೆಲಸ ಕಾರ್ಯಗಳಿಗೆ ಮಡಿಕೇರಿ ತಾಲೂಕು ಕಚೇರಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.

ಉಪತಹಶೀಲ್ದಾರ್‌ ಕೂಡ ಇಲ್ಲ
ಸಂಪಾಜೆ ನಾಡ ಕಚೇರಿ 10 ಗ್ರಾಮ ಹೊಂದಿದ್ದು, ಇಲ್ಲಿ ಉಪತಹಶೀಲ್ದಾರ್‌ ಇರಬೇಕಾಗಿದೆ. ಆದರೆ ಉಪತಹಶೀಲ್ದಾರರ ನಾಮಫ‌ಲಕ ಮಾತ್ರವಿದ್ದು, ಕಚೇರಿಗೆ ಉಪತಹಶೀಲ್ದಾರ್‌ ಬಂದಿಲ್ಲ. ಗ್ರಾಮಕರಣಿಕರು ಬಂದು ಹೋಗುತ್ತಾರೆ. ಆದರೆ ಅವರೂ ಜನರ ಸೇವೆಗೆ ಲಭ್ಯರಿಲ್ಲ ಎನ್ನುವ ದೂರಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ, ಮುಖ್ಯಮಂತ್ರಿ, ಕಂದಾಯ ಮಂತ್ರಿಗಳಿಗೆ ಕಟ್ಟಡ ಸಮಸ್ಯೆ ಬಗ್ಗೆ ಮನವಿ ನೀಡಿದರೂ ಈ ತನಕ ಯಾವುದೇ ಪರಿಹಾರ ದೊರೆತಿಲ್ಲ. ನಾಡ ಕಚೇರಿಯಲ್ಲಿ ಒಂದಲ್ಲ ಎರಡಲ್ಲ ಹತ್ತಾರು ಸಮಸ್ಯೆಗಳಿವೆ. ಸರಕಾರ, ಜನಪ್ರತಿನಿಧಿಗಳು ಗಂಭೀರವಾಗಿ ಆಲೋಚಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸೌಲಭ್ಯ ಇಲ್ಲ
ನಾಡಕಚೇರಿಯ ಪ್ರಮುಖ ಸಮಸ್ಯೆ ಬಗೆಹರಿಸುವುದು ಜನತೆಯ ಹಲವಾರು ವರ್ಷಗಳ ಬೇಡಿಕೆ. ಆದರೆ ಈ ಸಮಸ್ಯೆ ಈಡೇರದೆ ಜನಸಾಮಾನ್ಯರು ಕಷ್ಟಪಡುವಂತಾಗಿದೆ. ಕಚೇರಿಯಲ್ಲಿ ಇಂಟರ್‌ನೆಟ್‌ ಸೇರಿದಂತೆ ಇತರ ಆಧುನಿಕ ಸೌಲಭ್ಯಗಳಿಲ್ಲ. ಕಂದಾಯ ನಿರೀಕ್ಷರು ಕಚೇರಿಯಲ್ಲಿ ಇರುವುದಿಲ್ಲ. ಜನಪ್ರತಿನಿಧಿಗಳು, ಸರಕಾರ ಗಂಭೀರವಾಗಿ ಪರಿಗಣಿಸಬೇಕು.
– ಬಾಲಚಂದ್ರ ಕಳಗಿ,
ಕೊಡಗು ಸಂಪಾಜೆ ಗ್ರಾ.ಪಂ. ಸದಸ್ಯರು

ಸೂಚನೆ ಕೊಡುತ್ತೇನೆ
ಸಂಪಾಜೆ ನಾಡಕಚೇರಿ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತೇನೆ. ಕಂದಾಯ ನಿರೀಕ್ಷಕರು ಕಚೇರಿಯಲ್ಲಿ ಜನರ ಸೇವೆಗೆ ಲಭ್ಯರಿರುವಂತೆ ಸೂಚನೆ ಕೊಡುತ್ತೇನೆ. ಮುಂದಿನ ದಿನದಲ್ಲಿ ಇಂಟರ್‌ನೆಟ್‌ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.
-ಜವರೇ ಗೌಡ
ಸಹಾಯಕ ಆಯುಕ್ತರು, ಕೊಡಗು 

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.