ಜೀವಸಂಕುಲಗಳ ಸಂರಕ್ಷಣೆಗೆ ಕಾಡು ಉಳಿಸುವುದು ಅನಿವಾರ್ಯ


Team Udayavani, Mar 21, 2019, 5:12 AM IST

21-march-3.jpg

ಕಾಡನ್ನು ಪ್ರೀತಿಸಲು ಕಲಿಯಿರಿ: ವಿಶ್ವ ಅರಣ್ಯ ದಿನದ ಸಂದೇಶ

ಮಾರ್ಚ್‌ 21ರಂದು ವಿಶ್ವ ಅರಣ್ಯ ದಿನ ಆಚರಿಸಲಾಗುತ್ತದೆ. ಭೂಮಿ ಮತ್ತು ಪರಿಸರ ಸಮತೋಲನವಾಗಿರಬೇಕಾದರೆ ಅರಣ್ಯದ ಪಾತ್ರ ಬಹುಮುಖ್ಯ. ಈ ಕಾರಣಕ್ಕೆ ಅರಣ್ಯ ಸಂವರ್ಧನೆಗೆ ಪಣತೊಡಬೇಕು ಎಂಬ ಆಶಯ ಈ ದಿನದಾಗಲಿ.

ಇಂದು ವಿಶ್ವ ಅರಣ್ಯ ದಿನ ಮನುಷ್ಯ ಜೀವನದ ಮೊದಲ ಘಟ್ಟ ಆರಂಭವಾದದ್ದು ಕಾಡಿನಿಂದ. ಬದುಕಲು ಬೇಕಾಗುವ ಎಲ್ಲ ಮೂಲ ಸೌಕರ್ಯಗಳನ್ನು ಕಾಡು ಒದಗಿಸಿತ್ತು. ಅಲ್ಲಿಂದ ಆರಂಭವಾದ ಕಾಡು ಮತ್ತು ಮನುಷ್ಯನ ಸಂಬಂಧ ಇಂದು ಕಾಡುಗಳನ್ನು ನಾಶ ಮಾಡಿ ತನ್ನ ಮೂಲ ಸೌಕರ್ಯಗಳನ್ನು ಹೆಚ್ಚಿಸುವಲ್ಲಿಯವರೆಗೆ ಮುಂದುವರಿದಿದೆ.

ಕುಡಿಯುವ ನೀರಿನಿಂದ ಹಿಡಿದು, ಬರೆಯುವ ಪುಸ್ತಕ ಕಟ್ಟುವ ಮನೆಯವರೆಗೆ ಎಲ್ಲದರಲ್ಲೂ ಅರಣ್ಯದ ಪಾತ್ರವಿದೆ. ಇವುಗಳ ನಿರ್ಮಾಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಕಾಡಿನ ಸಂಪನ್ಮೂಲ. ಮಳೆ, ಹವಾಮಾನ ಏರುಪೇರು, ಪರಿಸರ ವ್ಯವಸ್ಥೆಗಳಲ್ಲಿ ಅರಣ್ಯದ ಪಾತ್ರ ಮಹತ್ವದ್ದು. ಬಡತನ ನಿರ್ಮೂಲನೆಗೆ ಅರಣ್ಯದ ಕೊಡುಗೆ ಅಪಾರ.

ವಿಶ್ವ ಅರಣ್ಯ ದಿನದ ಇತಿಹಾಸ
ಅರಣ್ಯ ದಿನವನ್ನು ಮೊದಲು ಆಚರಿಸಿದ್ದು 1971ರಲ್ಲಿ. ಇದನ್ನು ಒಂದು ವಿಶ್ವ ದಿನಾಚರಣೆಯಾಗಿ ಮಾಡುವ ನಿರ್ಧಾರವನ್ನು ಯುನೈಟೆಡ್‌ ನೇಶನ್‌ನ ಆಹಾರ ಮತ್ತು ಕೃಷಿ ಸಂಸ್ಥೆ ಮಾಡಿತು. ಈ ದಿನ ಎಲ್ಲ ವಿಧದ ಕಾಡುಗಳ ಮಹತ್ವವನ್ನು ಜನರಿಗೆ ಅರಿವು ಮೂಡಿಸಿ ಅರಣ್ಯ ಸಂರಕ್ಷಣೆ ಮಾಡಲು ಪ್ರೇರೇಪಿಸುತ್ತಿದೆ.

ಯಾಕಾಗಿ ಅರಣ್ಯ ದಿನಾಚರಣೆ
ಕಾಡು ಭೂಮಿಯ ಅತಿ ಪ್ರಮುಖವಾದ ಒಂದು ಭಾಗ. ಇದು ಜೀವಿಗಳಿಗೆ ನೆರಳು, ಆಹಾರ, ಶುದ್ಧ ನೀರು ಮತ್ತು ಗಾಳಿಯನ್ನು ಒದಗಿಸುತ್ತದೆ. ಆದರೆ ಮುಂದುವರಿಯುತ್ತಿರುವ ಇಂದಿನ ಯುಗದಲ್ಲಿ ಅರಣ್ಯದ ನಾಶ ಹೇರಳವಾಗಿ ಉಂಟಾಗುತ್ತಿದೆ. ಕಾಡು ಉಳಿಸುವುದು ಇಂದಿನ ಅನಿವಾರ್ಯಗಳಲ್ಲಿ ಒಂದಾಗಿದೆ. ನಾಶವಾಗುತ್ತಿರುವ ಜೀವಸಂಕುಲಗಳ ಸಂರಕ್ಷಣೆ, ಪರಿಸರದ ಸಮತೋಲನ ನಿರ್ಮಾಣವಾಗಬೇಕಾದರೆ ಕಾಡು ಉಳಿಯಲೇಬೇಕು.

ಸಂದೇಶದ ಮುಖ್ಯ ಅಂಶಗಳು
ಕಾಡುಗಳು ನಮಗೆ ಮಾತ್ರವಲ್ಲ ಮುಂದಿನ ಜನಾಂಗಕ್ಕೂ ಅತಿ ಅಗತ್ಯವೆಂದು ಪರಿಗಣಿಸಿ ಅದನ್ನು ರಕ್ಷಿಸಲು ಮುಂದಾಗುವುದು. 2030ರಲ್ಲಿ ವಿಶ್ವದ ಜನಸಂಖ್ಯೆ 8.5 ಬಿಲಿಯನ್‌ ದಾಟುವುದರಿಂದ ಕಾಡುಗಳನ್ನು ಉಳಿಸುವುದು ಕೂಡ ಮುಖ್ಯವಾಗುತ್ತದೆ, ಮಕ್ಕಳಿಗೆ ಕಾಡಿನ ಅಗತ್ಯವನ್ನು ತಿಳಿಸುವುದು ಮತ್ತು ಪ್ರಕೃತಿಯ ಒಡನಾಟದಲ್ಲಿ ಅವರನ್ನು ಬೆಳೆಸುವುದು. ಇದರಿಂದ ಅವರಲ್ಲಿ ಅರಣ್ಯವನ್ನು ಪ್ರೀತಿಸುವ ಮನೋಭಾವ ಬೆಳೆಯುತ್ತದೆ. ನಗರ ಪ್ರದೇಶ ಮತ್ತು ಗ್ರಾಮಗಳಲ್ಲಿರುವವರು ಅರಣ್ಯದ ಪ್ರಾಮುಖ್ಯವನ್ನು ತಿಳಿಯಬೇಕು. ಅನಗತ್ಯವಾಗಿ ಕಟ್ಟಿಗೆಗಾಗಿ ಅಥವಾ ಮಾರಾಟಕ್ಕಾಗಿ ಮರಗಳನ್ನು ಕಡಿಯಬಾರದು.

ಕಾಡುಗಳ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡುವುದರಿಂದ ಸಂರಕ್ಷಣೆ ಸುಲಭವಾಗುತ್ತದೆ. ವಿಜ್ಞಾನಿಗಳು, ಸಂಶೋಧಕರೆಲ್ಲರೂ ಕಾಡು ನಾಶದ ಪರಿಣಾಮಗಳನ್ನು ಅರ್ಥವತ್ತಾಗಿ ವಿವರಿಸುತ್ತಾರೆ. ಕಾಡು ಉಳಿದರೆ ಮಾತ್ರ ನಾಡು ಉಳಿಯುತ್ತದೆ ಎಂಬು ದನ್ನು ಮೊದಲು ಅರಿತು ನಡೆಯಬೇಕಿದೆ. ಹೀಗಾಗಿ ದಿನಾಚರಣೆಗಳು ಕೇವಲ ಆಚರಣೆಗಳಿಗಷ್ಟೇ ಮೀಸಲಾಗದೆ ಪ್ರತಿಯೊಂದು ದಿನವನ್ನು ಅರಣ್ಯ ದಿನವೆಂದೇ ಭಾವಿಸಿ ಕಾಡನ್ನು ಸಂರಕ್ಷಿಸಬೇಕು. 

ವಿಶಿಷ್ಟ ಸಂದೇಶ 
ಪ್ರತಿ ವರ್ಷ ವಿಶ್ವ ಅರಣ್ಯ ದಿನಾಚರಣೆಗೆ ಯುಎನ್‌ಒ ಒಂದೊಂದು ವಿಶಿಷ್ಟ ಸಂದೇಶವನ್ನು ನೀಡಿ ಜನರನ್ನು ಆಕರ್ಷಿಸುತ್ತಿದೆ. ಈ ಭಾರಿ ಶಿಕ್ಷಣದ ಜತೆಯಲ್ಲಿ ಅರಣ್ಯ ದಿನಾಚರಣೆ ತಳುಕು ಹಾಕಿಕೊಂಡಿದೆ. ಶಿಕ್ಷಣ ಮತ್ತು ಅರಣ್ಯ: ಕಾಡನ್ನು ಪ್ರೀತಿಸಲು ಕಲಿಯಿರಿ ಎಂಬುದು ಈ ಬಾರಿಯ ಸಂದೇಶ. ಶಿಕ್ಷಣದ ಎಲ್ಲ ಹಂತಗಳಲ್ಲಿಯೂ ಕಾಡಿನ ಮಹತ್ವವನ್ನು ತಿಳಿಸುವುದು. ಆರೋಗ್ಯಯುತವಾದ ಪರಿಸರ ನಿರ್ಮಾಣಕ್ಕೆ ಮೊದಲು ಬೇಕಾದದ್ದು ಕಾಡುಗಳು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.