ಸುಳ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರಡಿ: ಪುನಃಪ್ರತಿಷ್ಠಾ ಕಲಶಾಭಿಷೇಕ


Team Udayavani, Mar 22, 2019, 5:43 AM IST

22-march-5.jpg

ಸುಳ್ಯಪದವು : ಗಡಿ ಭಾಗದಲ್ಲಿರುವ ಸುಳ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪುನಃ ಪ್ರತಿಷ್ಠಾಭಿಷೇಕ ಹಾಗೂ ವಾರ್ಷಿಕ ನೇಮ ಮಾ.22ರಂದು ನಡೆಯಲಿದೆ. ಮಂಗಳೂರು ಲೋಕೇಶ್‌ ಶಾಂತಿ ಅವರ ನೇತೃತ್ವದಲ್ಲಿ ಪೂರ್ವಾಹ್ನ 11.46ಕ್ಕೆ ಮಿಥುನ ಲಗ್ನ ಮುಹೂರ್ತದಲ್ಲಿ ಬ್ರಹ್ಮಬೈದರ್ಕಳ, ಮೂಲ ಮೈಸಂದಾಯ, ಕೊಡಮಣಿತ್ತಾಯ, ಇಷ್ಟದೇವತೆ, ಮಾಯಾಂದಾಳ್‌ ದೈವಗಳ ಪುನಃ
ಪ್ರತಿಷ್ಠಾ ಕಲಶಾಭಿಷೇಕದ ಅನಂತರ ಪಂಚಪರ್ವ, ಪ್ರಸನ್ನ ಪೂಜೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.

ಗರಡಿ ವಠಾರದಲ್ಲಿ ಗುರುವಾರ ಬೆಳಗ್ಗೆ ಗಣಪತಿ ಹೋಮ, ನವಗ್ರಹ ಶಾಂತಿ ಹೋಮ, ಮಧ್ಯಾಹ್ನ ಅನ್ನದಾನ, ಸಂಜೆ ಬ್ರಹ್ಮರಗುಂಡದಲ್ಲಿ ವಾಸ್ತುಹೋಮ, ವಾಸ್ತುಪೂಜೆ, ವಾಸ್ತುಬಲಿ, ಅಧಿವಾಸ ಕರ್ಮಾದಿಗಳು, ಬಿಂಬಶುದ್ಧಿ, ಅಧಿವಾಸ ಹೋಮ, ಬಿಂಬಾಧಿವಾಸ, ತಣ್ತೀ ಹೋಮ, ಕಲಶಾಧಿವಾಸ, ರಾತ್ರಿ ಅನ್ನದಾನ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ಸುಳ್ಯಪದವು ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಕನ್ನಡ್ಕ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಕಾರ್ಯಕ್ರಮ, ರಾತ್ರಿ ಸುಳ್ಯಪದವು ಕೋಟಿ ಚೆನ್ನಯ ಭಕ್ತ ವೃಂದದ ಪ್ರಾಯೋಜಕತ್ವದಲ್ಲಿ ದಯಾನಂದ ಕತ್ತಲ್‌ ಸಾರ್‌ ನಿರ್ದೇಶನದ ತುಳುನಾಡ ಸಂಸ್ಕೃತಿ ನಡೆಯಿತು.

ಚಿಣ್ಣರ ಬಳಗದ ಯಕ್ಷಗಾನ
ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪುನಃಪ್ರತಿಷ್ಠಾ ಕಲಶಾಭಿಷೇಕದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರು ತೆಂಕಿಲ ಯಕ್ಷ ಚಿಣ್ಣರ ಬಳಗದಿಂದ ಏಕಾದಶಿ ದೇವಿ ಮಹಾತ್ಮೆ,  ಮೈಂದ- ದಿವಿದ ಕಾಳಗ ಯಕ್ಷಗಾನ ಬಯಲಾಟ ನಡೆಯಿತು. ಯಕ್ಷಗಾನ ಕಲಾವಿದ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಇವರ ನಿರ್ದೇಶನದಲ್ಲಿ ಚಂದ್ರಶೇಖರ್‌ ಸುಳ್ಯಪದವು ಇವರ ಸಂಯೋಜನೆಯಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್‌ ಇರ್ದೆ, ಚೆಂಡೆ ರಾಜೇಂದ್ರಪ್ರಸಾದ್‌ ಪುಂಡಿಕಾç, ಮದ್ದಳೆ ಸುಧೀರ್‌ ಪಾಣಾಜೆ, ಮುಮ್ಮೇಳದಲ್ಲಿ ಬಾಲ ಕಲಾವಿದರಾಗಿ ದೇವೇಂದ್ರ ಮತ್ತು ಸತ್ಯಭಾಮೆ- ಆದಿತ್ಯನಾರಾಯಣ, ಅಗ್ನಿ -ಭವಿಷ್‌ ಬಿ., ವಾಯು- ಶ್ಯಮಂತ್‌, ನಾಡೀಜಂಘ- ಯಾತಿನ್‌, ಬಿಡಲಾಸುರ- ಬಬಿನ್‌ ರೈ, ವಿಷ್ಣು ಮತ್ತು ಕೃಷ್ಣ- ಪ್ರದೀಪ್‌ಕೃಷ್ಣ ಐ., ಗರುಡ- ಪರೀಕ್ಷಿತ್‌, ಮೇಘಮುಖೀ ಮತ್ತು ಸಿಂಹಮುಖ- ಖುಷಿ ರೈ, ಮುರಾಸುರ – ಮಿಥುನ್‌ ವಿ.ಕೆ., ದೇವಿ- ಶ್ರೇಯಾ, ರಕ್ಕಸದೂತ- ಬಬಿನ್‌ ರೈ, ಮೈಂದ – ಯತಿನ್‌, ದ್ವಿವಿದ ಮತ್ತು ರುಕ್ಮಿಣಿ- ಭವಿಷ್‌ ಬಿ., ಬಲರಾಮ- ಅಮೋಘಶಂಕರ ನಿರ್ವಹಿಸಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.