ಸಹಸ್ರಲಿಂಗೇಶ್ವರ ದೇವಸ್ಥಾನ: ದೊಂಪದ ಬಲಿ


Team Udayavani, Mar 22, 2019, 6:03 AM IST

22-march-7.jpg

ಉಪ್ಪಿನಂಗಡಿ : ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವಾಲಯದ ಮುಂಭಾಗದ ಸತ್ಯದ ಮಜಲಿನಲ್ಲಿ ಮಂಗಳವಾರ ರಾತ್ರಿ ವಾರ್ಷಿಕ ದೊಂಪದ ಬಲಿ ನೇಮ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಅಧೀನದಲ್ಲಿರುವ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಬೀಡಿನಿಂದ ದೇವಾಲಯಕ್ಕೆ ಮಂಗಳವಾರ ರಾತ್ರಿ ವಿವಿಧ ಬಿರುದಾವಳಿಯೊಂದಿಗೆ ಪಲ್ಲಕಿಯಲ್ಲಿ ದೈವಗಳ ಭಂಡಾರ ಆಗಮಿಸಿತು. ಬಳಿಕ ಸತ್ಯದ ಮಜಲಿನಲ್ಲಿ ರಾಜನ್‌ ದೈವ ಕಲ್ಕುಡ, ಕಲ್ಲುರ್ಟಿ, ಶಿರಾಡಿ ದೈವಗಳ ನೇಮ ನಡೆಯಿತು. ಉಪ್ಪಿನಂಗಡಿ ದೇವಾಲಯದ ಜಾತ್ರಾ ಸರಣಿಯಲ್ಲಿ ದೊಂಪದ ಬಲಿ ಕೊನೆಯ ಕಾರ್ಯಕ್ರಮವಾಗಿದೆ.

ಶ್ರೀ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ್‌ ರಘುನಾಥ್‌ ರೈ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಕಂಗ್ವೆ ವಿಶ್ವನಾಥ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ನಂದಾವರ ಉಮೇಶ್‌ ಶೆಣೈ, ಶ್ರೀ ಕಾಳಿಕಾಂಬಾ ಭಜನ ಮಂಡಳಿಯ ಅಧ್ಯಕ್ಷ ಕೆ. ಸುಧಾಕರ ಶೆಟ್ಟಿ, ದೇವಾಲಯದ ಸಿಬಂದಿ ವೆಂಕಟೇಶ ರಾವ್‌, ಕೃಷ್ಣ ಪ್ರಸಾದ್‌ ಭಟ್‌ ಬಡಿಲ, ದಿವಾಕರ ಗೌಡ ಉಪಸ್ಥಿತರಿದ್ದರು.

15 ಅಡಿ ಉದ್ದದ ಮಾರಿಸೂಟ
ಯಾವುದೇ ಗ್ರಾಮದಲ್ಲಿ ದೊಂಪದ ಬಲಿ ನೇಮ ಅಲ್ಲಿನ ಗದ್ದೆ ಅಥವಾ ಬಯಲಿನಲ್ಲಿ ನಡೆಯುತ್ತದೆ. ತಾತ್ಕಾಲಿಕ ಚಪ್ಪರದಡಿ ದೈವಗಳ ಭಂಡಾರ ಇರಿಸಲಾಗುತ್ತದೆ. ದೊಂಪದ ಬಲಿ ಸಂದರ್ಭ 15 ಅಡಿ ಉದ್ದದ ಮಾರಿಸೂಟೆಯನ್ನು ಹೊತ್ತಿಸಲಾಗುತ್ತದೆ. ಬಿದಿರು, ತೆಂಗಿನ ಮಡಲು, ತೆಂಗಿನ ಸಿಪ್ಪೆ ಇತ್ಯಾದಿಗಳನ್ನು ಸೇರಿಸಿ ಮಾರಿಸೂಟೆಯನ್ನು ತಯಾರಿಸಲಾಗುತ್ತದೆ. ದನ್ನು ಎರಡು ಬಿದಿರುಗಳ ಸಹಾಯದಿಂದ ಬಯಲಿನಲ್ಲಿ ನಿಲ್ಲಿಸಲಾಗುತ್ತದೆ. ದೊಂಪದ ಬಲಿ ಆರಂಭದಿಂದ ಅಂತ್ಯದವರೆಗೆ ಮಾರಿಸೂಟೆ ಬೆಳಗುತ್ತಲೇ ಇರಬೇಕು. ದೊಂಪದ ಬಲಿ ನೇಮದಲ್ಲಿ ಮೊದಲು ಎದ್ದು ನಿಲ್ಲುವ ದೈವದ ಗಗ್ಗರ ಬೂಳ್ಯ ಸ್ವೀಕಾರದ ಬಳಿಕ ಮಾರಿಸೂಟೆಗೆ ಅಗ್ನಿಸ್ಪರ್ಶ ಮಾಡಲಾಗುತ್ತದೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.